ಸಿನಿಮಾ ಬಿಡುಗಡೆಯಾದ ಬಳಿಕ…. ಪುಷ್ಪ 2 ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಬಿಜೆಪಿ ಶಾಸಕ! Pushpa 2

Pushpa 2

Pushpa 2 : ಐಕಾನ್​ ಸ್ಟಾರ್​ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ 2’ ಸಿನಿಮಾ ಇನ್ನು ಕೆಲವೇ ಗಂಟೆಗಳಲ್ಲಿ ಥಿಯೇಟರ್‌ಗೆ ಅಪ್ಪಳಿಸಲಿದೆ. ಸುಮಾರು 3 ವರ್ಷಗಳ ಬಳಿಕ ನೆಚ್ಚಿನ ನಟನನ್ನು ಬೆಳ್ಳಿ ಪರದೆಯ ಮೇಲೆ ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಈಗಾಗಲೇ ಥಿಯೇಟರ್​ ಮುಂದೆ ಅಭಿಮಾನಿಗಳ ಸಂಭ್ರಮಾಚರಣೆಯ ಸಿದ್ಧತೆ ನಡೆಯುತ್ತಿದೆ. ಇದರ ನಡುವೆ ಈ ಸಿನಿಮಾ ಬಗ್ಗೆ ಬಿಜೆಪಿ ಶಾಸಕರೊಬ್ಬರು ಶಾಕಿಂಗ್ ಕಾಮೆಂಟ್ ಮಾಡಿದ್ದಾರೆ.

ಪುಷ್ಪ ಸಿನಿಮಾದಲ್ಲಿ ತೋರಿಸಿರುವುದೆಲ್ಲ ಸುಳ್ಳು. ಕೆಂಪು ಚಂದನದ ಮೌಲ್ಯ ಕೇವಲ ಒಂದು ಲಕ್ಷ ರೂಪಾಯಿ. ಆದರೆ, ಸಿನಿಮಾದಲ್ಲಿ ಒಂದು ಕೋಟಿ ರೂಪಾಯಿ ಎಂದು ತೋರಿಸಲಾಗಿದೆ. ಇದರಿಂದ ಯುವಕರು ಹಲವು ಮರಗಳನ್ನು ಈಗಾಗಲೇ ಕಡಿದಿದ್ದಾರೆ. ಇನ್ನು ‘ಪುಷ್ಪ 2’ ಚಿತ್ರದ ಬಳಿಕ ಎಷ್ಟು ಮರಗಳನ್ನು ಕತ್ತರಿಸುತ್ತಾರೋ? ಪುಷ್ಪ ಸಿನಿಮಾದಿಂದ ಯುವಕರು ಭ್ರಷ್ಟರಾಗುತ್ತಿದ್ದಾರೆ. ಅಲ್ಲು ಅರ್ಜುನ್ ಮತ್ತು ಸುಕುಮಾರ್ ಅವರನ್ನು ಬಂಧಿಸಿ ಜೈಲಿಗೆ ಹಾಕಬೇಕು ಎಂದು ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಅರ್ಮುರ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರಾಕೇಶ್ ರೆಡ್ಡಿ ಅವರು ಮಾಡಿರುವ ಕಾಮೆಂಟ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ಶೀಘ್ರದಲ್ಲಿ ಭೂಮಿಯಿಂದಲೇ ಕಣ್ಮರೆಯಾಗಲಿದೆ ದಕ್ಷಿಣ ಕೊರಿಯಾ!? ಇಲ್ಲಿದೆ ನೋಡಿ ಆಘಾತಕಾರಿ ಸಂಗತಿ | South Korea

ಶಾಸಕ ರಾಕೇಶ್ ರೆಡ್ಡಿ ಅವರ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗುತ್ತಿವೆ. ಅದರಲ್ಲೂ ಅಲ್ಲು ಅರ್ಜುನ್​ ಅಭಿಮಾನಿಗಳು ಶಾಸಕರ ವಿರುದ್ಧ ಕಿಡಿಕಾರುತ್ತಿದ್ದಾರೆ. ಸಾಕಷ್ಟು ಟೀಕೆಗಳ ನಡುವೆಯೂ ಪುಷ್ಪ 2 ಸಿನಿಮಾದ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ.

ಪುಷ್ಪ 2: ದಿ ರೂಲ್, 2021ರ ಬ್ಲಾಕ್‌ಬಸ್ಟರ್ ಪುಷ್ಪ: ದಿ ರೈಸ್‌ನ ಬಹು ನಿರೀಕ್ಷಿತ ಸಿನಿಮಾದ ಮುಂದಿನ ಭಾಗವಾಗಿದೆ. ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡಿದ್ದು, ಸುಕುಮಾರ್ ನಿರ್ದೇಶನ ಮಾಡಿದ್ದಾರೆ. ಇದೇ ಡಿಸೆಂಬರ್ 5 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಮೊದಲ ಭಾಗದ ಯಶಸ್ಸಿನಿಂದಾಗಿ ಈ ಸಿನಿಮಾ ಭಾರಿ ಕ್ರೇಜ್​ ಹುಟ್ಟುಹಾಕಿದೆ. (ಏಜೆನ್ಸೀಸ್​)

ಈತ ಏನಾದ್ರೂ ಐಪಿಎಲ್​ ಹರಾಜಿಗೆ ಬಂದ್ರೆ 520 ಕೋಟಿ ಕೂಡ ಸಾಕಾಗಲ್ಲ! ಆಶಿಶ್​ ನೆಹ್ರಾ ಅಚ್ಚರಿ ಹೇಳಿಕೆ | Ashish Nehra

ಏನಿದು ಕೊನೇ ಕ್ಷಣದ ಟ್ವಿಸ್ಟ್​? ಪುಷ್ಪ-2 ಸಿನಿಮಾ ಟಿಕೆಟ್​ ಬುಕ್ಕಿಂಗ್​ ಮಾಡಿರುವವರಿಗೆ ಬಿಗ್​ ಶಾಕ್​! Pushpa 2

Share This Article

ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್​ ವಿಧಾನ | Recipe

ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…

ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…

ಟೊಮೆಟೊ ಸೇವನೆ ಕ್ಯಾನ್ಸರ್​ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips

ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್​​.…