ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಅಪ್ರಾಪ್ತ ವಯಸ್ಕಳ ಮುಖಕ್ಕೇ ಆ್ಯಸಿಡ್ ಎರಚಿದ!; ಆರೋಪಿ ಪರಾರಿ

ರಾಮನಗರ: ಪ್ರೀತಿಯನ್ನು ನಿರಾಕರಿಸಿದ್ದ ಅಪ್ರಾಪ್ತ ವಯಸ್ಕಳ ಮುಖದ ಮೇಲೆ ಯುವಕನೊಬ್ಬ ಆ್ಯಸಿಡ್ ಎರಚಿ ಗಾಯಗೊಳಿಸಿ ಪರಾರಿಯಾದ ಪ್ರಸಂಗ ನಡೆದಿದೆ. ರಾಮನಗರ ಜಿಲ್ಲೆಯಲ್ಲಿ ಇಂದು ಈ ಪ್ರಕರಣ ನಡೆದಿದ್ದು, ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕನಕಪುರದ ಕುರುಪೇಟೆ ನಿವಾಸಿ ಸುಮಂತ್ ಅಲಿಯಾಸ್ ಅಪ್ಪು ಎಂಬಾತನಿಂದ ಆ್ಯಸಿಡ್ ದಾಳಿ ನಡೆದಿದೆ. ಕನಕಪುರ ಬೈಪಾಸ್​ ರಸ್ತೆಯ ನಾರಾಯಣಪ್ಪ ಕೆರೆ ಬಳಿ ಈ ಘಟನೆ ನಡೆದಿದೆ. ಈತ ಪ್ರೀತಿಯನ್ನು ನಿರಾಕರಿಸಿದಳು ಎಂಬ ಕಾರಣಕ್ಕೆ 17 ವರ್ಷದ ಹುಡುಗಿ ಮುಖಕ್ಕೆ ಆ್ಯಸಿಡ್ ಎರಚಿದ್ದಾನೆ. ಆ್ಯಸಿಡ್ ದಾಳಿಯಿಂದಾಗಿ … Continue reading ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಅಪ್ರಾಪ್ತ ವಯಸ್ಕಳ ಮುಖಕ್ಕೇ ಆ್ಯಸಿಡ್ ಎರಚಿದ!; ಆರೋಪಿ ಪರಾರಿ