ಕಲಬುರಗಿ: ಮನೆಯಲ್ಲಿ ಕ್ವಾರಂಟೈನ್ಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಮನೆ ಬಿಟ್ಟು ಹೊರ ಬಂದ ಹಿನ್ನೆಲೆಯಲ್ಲಿ ಅವರ ವಿರುದ್ಧ ಕೇಸು ದಾಖಲಿಸಲಾಗಿದೆ.
ಮಾರ್ಚ್ 16ರಂದು ದುಬೈನಿಂದ ಚಿತ್ತಾಪುರ ತಾಲೂಕಿನ ನಿಪ್ಪಾಣಿಗೆ ಆಗಮಿಸಿದ್ದ ವ್ಯಕ್ತಿಯಲ್ಲಿ ಕರೊನಾ ವೈರಸ್ ಸೋಂಕು ಪತ್ತೆಯಾಗಿ ಅವರನ್ನು ಮನೆಯಲ್ಲೇ ಕ್ವಾರಂಟೈನ್ಗೆ ಒಳಗಾಗುವಂತೆ ವೈದ್ಯರು ಸೂಚಿಸಿದ್ದರು.
ಕೆಲವ ದಿನ ಮನೆಯಲ್ಲಿದ್ದ ವ್ಯಕ್ತಿ ಮನೆಯಿಂದ ಹೊರ ಬಂದು ನಿಪ್ಪಾಣಿಯಿಂದ ಕಲಬುರಗಿಗೆ ಬಂದಿದ್ದರು. ಮಾಹಿತಿ ತಿಳಿದ ಆರೋಗ್ಯ ಅಧಿಕಾರಿಗಳು ಅವರನ್ನು ಪತ್ತೆ ಮಾಡಿ ಮತ್ತೆ ಮನೆಗೆ ಬಿಟ್ಟು ಕ್ವಾರಂಟೈನ್ನಲ್ಲಿ ಇರುವಂತೆ ಸೂಚಿಸಿದರು. ನಿಯಮ ಉಲ್ಲಂಘಿಸಿದ ವ್ಯಕ್ತಿ ವಿರುದ್ಧ ಕಲಬುರಗಿ ವಿಶ್ವವಿದ್ಯಾಲಯ ಪೊಲೀಸರು ಕೇಸು ದಾಖಲಿಸಿದ್ದಾರೆ. (ದಿಗ್ವಿಜಯ ನ್ಯೂಸ್)