More

    ತಂದೆ-ಮಗಳ ನಡುವೆ ಗಲಾಟೆ; ಗುದ್ದಲಿಯಿಂದ ಅಪ್ಪನ ತಲೆಗೆ ಹೊಡೆದು ಪ್ರಾಣ ತೆಗದಳು

    ರಾಮನಗರ: ಕ್ಷುಲ್ಲಕ ಕಾರಣಕ್ಕೆ ಅಪ್ಪ-ಮಗಳ ನಡುವೆ ಗಲಾಟೆ ನಡೆದಿದೆ. ಈ ಘಟನೆಯಿಂದ ಸಿಟ್ಟಿಗೆದ್ದ ಮಗಳು ಗುದ್ದಲಿಯಿಂದ ತಂದೆ ತಲೆಗೆ ಹೊಡೆದು ಮಗಳು ಕೊಲೆ ಮಾಡಿದ್ದಾಳೆ.

    ಇದನ್ನೂ ಓದಿ: ಹಲ್ಲುಜ್ಜುವಾಗ ಟೂತ್ ಬ್ರಶ್‌ನ್ನೇ ನುಂಗಿಬಿಟ್ಟ!; ಆಕಸ್ಮಿಕವಾಗಿ ನಡೆದ ಈ ಘಟನೆಯಿಂದ ಮುಂದೇನಾಯ್ತು?

    ಹುಚ್ಚೀರಯ್ಯ(68) ಮಗಳಿಂದಲೇ ಕೊಲೆಯಾದ ತಂದೆ. ಪುಷ್ಪ (30) ಹತ್ಯೆ ಮಾಡಿದ ಮಗಳು. ಚನ್ನಪಟ್ಟಣ ತಾಲೂಕಿನ ನಾಯಿದೊಳೆ ಗ್ರಾಮದಲ್ಲಿ ಮೊನ್ನೆ ನಡೆದಿರೋ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಇದನ್ನೂ ಓದಿ: ದುಬೈನಿಂದ 10 ಕೆಜಿ ಟೊಮ್ಯಾಟೋ ಖರೀದಿಸಿ ತಾಯಿಗೆ ಗಿಫ್ಟ್​​ ಮಾಡಿದ ಮಗಳು

    ಪುಷ್ಪ ಗಂಡನನ್ನು ಬಿಟ್ಟು ಬಂದು ಹಲವು ವರ್ಷಗಳಿಂದ ತಂದೆ ಮನೆಯಲ್ಲೇ ವಾಸವಿದ್ದಳು. ಈಕೆ ಕೆಲ ದಿನಗಳಿಂದ ಮಾನಸಿಕ ಅಸ್ವಸ್ಥತೆಗೆ ಒಳಗಾಗಿದ್ದಳು. ಮಂಗಳವಾರ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಅಪ್ಪ ಮಗಳ ನಡುವೆ ಮಾತಿನ ಚಕಮಕಿ ನಡೆದಿದೆ.

    ಇದನ್ನೂ ಓದಿ: ಲೋಕಾಯುಕ್ತ ಡಿವೈಎಸ್ಪಿ ಹೃದಯಘಾತದಿಂದ ಮೃತ್ಯು

    ತಂದೆ ಮೇಲೆ ಕೋಪಗೊಂಡ ಪುಷ್ಪ ಗುದ್ದಲಿಯಿಂದ ತಂದೆಯ ತಲೆಗೆ ಬಲವಾಗಿ ಹೊಡೆದಿದ್ದಾಳೆ. ತೀವ್ರ ರಕ್ತಸ್ರಾವದಿಂದ ತಂದೆ ಸ್ಥಳದಲ್ಲೇ ಸಾವನ್ನಪಿದ್ದಾನೆ. ಘಟನೆಯಿಂದ ಆತಂಕಗೊಂಡ ಪುಷ್ಪಾ ಸ್ಥಳದಿಂದ ಎಸ್ಕೇಪ್ ಆಗಿದ್ದಾಳೆ. ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರ ಭೇಟಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

    ಈ ಅಂಗಡಿಗೆ ಹೋಗುವ ಮುನ್ನ ಎಚ್ಚರ! ಬರಿಗೈಯಲ್ಲಿ ವಾಪಸ್ಸಾದರೆ ಬೀಳುತ್ತೆ 500 ರೂ. ದಂಡ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts