ಹೈದರಾಬಾದ್: ಟಿಂಬರ್ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಗಢದಲ್ಲಿ 11 ಮಂದಿ ಸಜೀವ ದಹನವಾಗಿರುವ ಘಟನೆ ತೆಲಂಗಾಣದ ಸಿಕಂದರಬಾದ್ನ ಭೋಯಿಗುಡಾ ಪ್ರದೇಶದಲ್ಲಿ ನಡೆದಿದೆ.
ಧಗಧಗನೇ ಉರಿಯುತ್ತಿರುವ ಬೆಂಕಿಯ ಜ್ವಾಲೆಯನ್ನು ನಂದಿಸಲು ಸ್ಥಳದಲ್ಲಿ ಅನೇಕ ಅಗ್ನಿಶಾಮಕ ವಾಹನಗಳು ಬೀಡುಬಿಟ್ಟಿದ್ದು, ಬೆಂಕಿಯ ಜ್ವಾಲೆ ತಹಬದಿಗೆ ಬಂದಿರುವುದಾಗಿ ತಿಳಿದುಬಂದಿದೆ.
ಪೊಲೀಸ್ ಮೂಲಗಳ ಪ್ರಕಾರ ಸಿಕಂದರಬಾದ್ನ ಜನನಿಬಿಡ ಭೋಯಿಗುಡಾ ಗೋದಾಮಿನಲ್ಲಿ ಬಿಹಾರದ 12 ವಲಸೆ ಕಾರ್ಮಿಕರು ಸಿಲುಕಿದ್ದರು. ಎರಡು ಅಂತಸ್ತಿನ ಕಟ್ಟಡದಲ್ಲಿ ಮೊದಲನೇ ಮಹಡಿಯಿಂದ ಜಿಗಿಯುವ ಮೂಲಕ ಓರ್ವ ಕಾರ್ಮಿಕ ಬಚಾವ್ ಆಗಿದ್ದು, ಉಳಿದ 11 ಮಂದಿ ಸಜೀವ ದಹನವಾಗಿದ್ದಾರೆ.
ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿಯಲ್ಲಿ ಮೃತಪಟ್ಟ ಕಾರ್ಮಿಕರ ಕೊನೆಯ ಅವಶೇಷಗಳನ್ನು ಬಿಹಾರಕ್ಕೆ ಕಳುಹಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. (ಏಜೆನ್ಸೀಸ್)
41ರ ಉದ್ಯಮಿ ಪತಿಯ ಕೊಲೆಗೆ 26ರ ಪತ್ನಿಯಿಂದಲೇ ಸುಪಾರಿ: ಪೊಲೀಸ್ ತನಿಖೆಯಲ್ಲಿ ಸ್ಫೋಟಕ ರಹಸ್ಯ ಬಯಲು
ಯಾರೂ ಹೇಳದ ರಹಸ್ಯವೊಂದನ್ನು ಬಹಿರಂಗಪಡಿಸಿದ ನಟಿ ಹೆಬ್ಬಾ ಪಟೇಲ್ಗೆ ಅಭಿಮಾನಿಗಳ ಬಹುಪರಾಕ್!
ಗ್ರಾಹಕರಿಗೆ ಮತ್ತೆ ಶಾಕ್: ಎರಡನೇ ದಿನವು ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಏರಿಕೆ, ಇಂದಿನ ದರ ಹೀಗಿದೆ…