More

    ಕಿಕ್ಕಿರಿದು ತುಂಬಿದ್ದ ಪ್ರಯಾಣಿಕರ ಹಡಗಿನಲ್ಲಿ ಅಗ್ನಿ ಅವಘಡ: 36 ಮಂದಿ ಸಜೀವ ದಹನ, 200 ಜನರ ಸ್ಥಿತಿ ಗಂಭೀರ

    ಢಾಕಾ: ಕಿಕ್ಕಿರಿದು ತುಂಬಿದ್ದ ಪ್ರಯಾಣಿಕರ ಹಡಗಿನಲ್ಲಿ ಸಂಭವಿಸಿದ ಅಗ್ನಿ ಅವಘಡಕ್ಕೆ 36 ಮಂದಿ ಸಜೀವ ದಹನವಾಗಿರುವ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ. ಘಟನೆಯನ್ನು ಸುಮಾರು 200 ಮಂದಿ ಗಂಭೀರವಾಗಿ ಗಾಯಗೊಂಡಿರುವುದಾಗಿ ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಇಂದು (ಡಿ.24) ನಸುಕಿನ ಜಾವ 3 ಗಂಟೆ ಸಮಯದಲ್ಲಿ ಬಾಂಗ್ಲಾದ ಬಾರ್ಗಾನ ಮೂಲದ ಎಂವಿ ಅಭಿಜಾನ್​-10 ಹೆಸರಿನ ಪ್ರಯಾಣಿಕರ ಹಡಗಿನ ಇಂಜಿನ್​ ರೂಮ್​ನಲ್ಲಿ ಬೆಂಕಿ ಕಾಣಿಸಿಕೊಂಡಿತು. ಬಳಿಕ ಬೆಂಕಿಯ ಜ್ವಾಲೆ ಹೆಚ್ಚಾಗಿ 36 ಮಂದಿಯನ್ನು ಬಲಿ ಪಡೆದುಕೊಂಡಿದೆ. ಹಡಗು ಢಾಕಾದಿಂದ ಪ್ರಯಾಣ ಬೆಳೆಸಿತ್ತು.

    ರಾಜಧಾನಿಕ ಢಾಕಾದಿಂದ 250 ಕಿ.ಮೀ ದೂರದಲ್ಲಿರುವ ಜಲಕಥಿಯ ಸುಗಂಧ ನದಿಯಲ್ಲಿ ಘಟನೆ ನಡೆದಿದ್ದು, ಈವರೆಗೆ 36 ಸುಟ್ಟ ದೇಹಗಳನ್ನು ಅಧಿಕಾರಿಗಳು ಹೊರತೆಗೆದಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

    200 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಅಲ್ಲದೆ, ಹಡಗಿನಲ್ಲಿ ಕಾರ್ಯಾಚರಣೆ ಮುಂದುವರಿದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. (ಏಜೆನ್ಸೀಸ್​)

    ಉದ್ಯಮಿ ಮನೆಯಲ್ಲಿ ನೋಟಿನ ರಾಶಿ ಕಂಡು ತಬ್ಬಿಬ್ಬಾದ ಅಧಿಕಾರಿಗಳು: ಒಟ್ಟು ಮೊತ್ತ ಕೇಳಿದ್ರೆ ಬೆರಗಾಗ್ತೀರಾ!

    ಬಾಲಕರನ್ನ ಬಳಸಿ ಬೈಕ್​ ಕಳ್ಳತನ ಮಾಡಿಸ್ತಿದ್ದ ಪೇದೆ ಅರೆಸ್ಟ್​​: ಈತನ ಖತರ್ನಾಕ್​ ಐಡಿಯಾ ಕೇಳಿ ಪೊಲೀಸರೇ ಶಾಕ್​!

    ಜನ್ಮ ದಿನದಂದೇ ದುರಂತ ಅಂತ್ಯ ಕಂಡ ಯುವಕ: ಹೆತ್ತವರ ಕಣ್ಣೀರಿಗೂ ಕರಗಲಿಲ್ಲ ಆ ದುರ್ವಿಧಿ

    ಪುತ್ರನಿಗಾಗಿ ವಾಹನ ಆವಿಷ್ಕರಿಸಿದ ತಂದೆಗೆ ಬಂಪರ್​ ಆಫರ್​ ನೀಡಿ ಸರ್ಕಾರವನ್ನು ಟೀಕಿಸಿದ ಆನಂದ್​ ಮಹೀಂದ್ರಾ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts