ಕೊಚ್ಚಿ: ಕಡಲೆಬೀಜ ಗಂಟಲಲ್ಲಿ ಸಿಲುಕಿ ನಾಲ್ಕು ವರ್ಷದ ಬಾಲಕಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಕೇರಳದ ಕೊಯಿಕ್ಕೋಡ್ನ ನಾರತ್ ವೆಸ್ಟ್ನಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ತಾನ್ವಿ ಎಂದು ಗುರುತಿಸಲಾಗಿದೆ. ಮೃತ ತಾನ್ವಿ, ಪ್ರವೀಣ್ ಮತ್ತು ಶರಣ್ಯಾ ದಂಪತಿಯ ಒಬ್ಬಳೇ ಮಗಳು. ಕಣ್ಣೂರಿನಲ್ಲಿರುವ ಇಂಡಿಯನ್ ಪಬ್ಲಿಕ್ ಸ್ಕೂಲ್ನ ಕಿಂಡರ್ಗಾರ್ಡನ್ ವಿದ್ಯಾರ್ಥಿನಿಯಾಗಿದ್ದಳು. ಒಬ್ಬಳೇ ಮಗಳನ್ನು ಕಡೆದುಕೊಂಡ ಪ್ರವೀಣ್-ಶರಣ್ಯಾ ದಂಪತಿ ಇದೀಗ ಶೋಕ ಸಾಗರದಲ್ಲಿ ಮುಳುಗಿದ್ದಾರೆ.
ಸ್ಥಳೀಯ ಮಾಧ್ಯಮಗಳ ವರದಿಯ ಪ್ರಕಾರ ಈ ಘಟನೆ ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ. ಮಿಕ್ಸ್ಚರ್ ಸ್ನ್ಯಾಕ್ ತಿನ್ನುವಾಗ ಅದರಲ್ಲಿದ್ದ ಕಡಲೆಬೀಜ ತಾನ್ವಿಯ ಗಂಟಲಲ್ಲಿ ಸಿಲುಕಿ ಉಸಿರಾಡಲು ಆಗದೇ ತಾನ್ವಿ ಕೊನೆಯುಸಿರೆಳೆದಿದ್ದಾಳೆ.
ಕೊಯಿಲ್ಯಾಂಡಿ ತಾಲೂಕು ಆಸ್ಪತ್ರೆಯಿಂದ ಕೊಯಿಕ್ಕೋಡ್ ವೈದ್ಯಕೀಯ ಕಾಲೇಜಿಗೆ ಸಾಗಿಸುವಾಗ ಮಾರ್ಗ ಮಧ್ಯೆ ತಾನ್ವಿ ಮೃತಪಟ್ಟಿದ್ದಾಳೆ. (ಏಜೆನ್ಸೀಸ್)
ಪ್ರೀತಿಯ ನೆನಪೇ ಸ್ಟಾರ್ ಜೋಡಿಗೆ ಮುಳುವಾಯ್ತು: ವಿಘ್ನೇಶ್ ಶಿವನ್-ನಯನತಾರಾ ವಿರುದ್ಧ ದೂರು ದಾಖಲು!
ಆರ್ಟಿ ನಗರದ ಬ್ರೋಕರ್ ಮೋಹನ್ ಮನೆಯಲ್ಲಿ ಭಾರಿ ಪ್ರಮಾಣದಲ್ಲಿ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತು ಪತ್ತೆ
ಹಿಜಾಬ್ ಕೇಸ್- ಬಂದ್ಗೆ ಕರೆ ನೀಡಿದವರ ವಿರುದ್ಧ ನ್ಯಾಯಾಂಗ ನಿಂದನೆ ತೂಗುಕತ್ತಿ! ಹೈಕೋರ್ಟ್ಗೆ ವಕೀಲರಿಂದ ಅರ್ಜಿ