ಲಖನೌ: ಡಿವೈಡರ್ಗೆ ಡಿಕ್ಕಿ ಹೊಡೆದು ಎದುರು ಬರುತ್ತಿದ್ದ ಟ್ರಕ್ಗೆ ಗುದ್ದಿದ ಪರಿಣಾಮ ಆಂಬ್ಯುಲೆನ್ಸ್ನಲ್ಲಿದ್ದ 7 ಮಂದಿ ದುರಂತ ಸಾವಿಗೀಡಾಗಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ.
ಮೃತರಲ್ಲಿ 6 ಮಂದಿ ಒಂದೇ ಕುಟುಂಬದವರು. ದೆಹಲಿಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಇಂದು (ಮೇ.31) ಮುಂಜಾನೆ ತಮ್ಮ ಊರು ಪಿಲ್ಭಿಟ್ಗೆ ಆಂಬ್ಯುಲೆನ್ಸ್ನಲ್ಲಿ ಹಿಂದಿರುಗುವಾಗ ದೆಹಲಿ-ಲಖನೌ ರಾಷ್ಟ್ರೀಯ ಹೆದ್ದಾರಿಯಲ್ಲಿ ದುರ್ಘಟನೆ ಸಂಭವಿಸಿದೆ.
ಚಾಲಕನ ನಿಯಂತ್ರಣ ಕಳೆದುಕೊಂಡ ಆ್ಯಂಬುಲೆನ್ಸ್, ಮೊದಲು ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಇದಾದ ಬಳಿಕ ಎದುರು ಬರುತ್ತಿದ್ದ ಟ್ರಕ್ಗೆ ಗುದ್ದಿದೆ. ಪರಿಣಾಮ ಚಾಲಕ ಹಾಗೂ ಒಂದೇ ಕುಟುಂಬದ 6 ಮಂದಿ ಸೇರಿದಂತೆ ಏಳು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತ ಸಂಬಂಧ ಸಂತ್ರಸ್ತರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದ್ದು, ಅವರು ಆಗಮಿಸಿದ ನಂತರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತರ ಸಾವಿಗೆ ಸಂತಾಪ ಸೂಚಿಸಿದ್ದು, ಸಂತ್ರಸ್ತರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. (ಏಜೆನ್ಸೀಸ್)
ಕೆ.ಎಲ್. ರಾಹುಲ್ ಒಳಉಡುಪು ಜಾಹೀರಾತು ನೋಡಿ ನಟಿ ಕಸ್ತೂರಿ ಮಾಡಿದ ಹಾಟ್ ಕಾಮೆಂಟ್ ವೈರಲ್!
ಮಗಳ ಶಾಲಾ ದಾಖಲಾತಿ ಅರ್ಜಿಯಲ್ಲಿ ಜಾತಿ, ಧರ್ಮ ಕಾಲಂಗಳನ್ನು ಖಾಲಿ ಬಿಟ್ಟ ದಂಪತಿ! ನಂತರ ನಡೆದಿದ್ದಿಷ್ಟು…
ರವಿಚಂದ್ರನ್ ಆ್ಯಂಡ್ ಸನ್ಸ್ ಈಗ ಬ್ಯಾಡ್ಬಾಯ್ಸ್; ಮಕ್ಕಳ ಜತೆ ಸಿನಿಮಾ ಘೋಷಿಸಿದ ಕ್ರೇಜಿಸ್ಟಾರ್