More

    ಮೆಗಾ ದಾಳಿಯ ಬಗ್ಗೆ ACBಯಿಂದ ಪತ್ರಿಕಾ ಪ್ರಕಟಣೆ: 15 ಅಧಿಕಾರಿ ನಿವಾಸದಲ್ಲಿ ಸಿಕ್ಕಿದ್ದೇನು? ಇಲ್ಲಿದೆ ಡಿಟೇಲ್ಸ್​

    ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳಿಂದ ನಡೆದ ಮಹಾಬೇಟೆಯಲ್ಲಿ ಭ್ರಷ್ಟ ಅಧಿಕಾರಿಗಳ ಅಕ್ರಮ ಆಸ್ತಿಗಳಿಕೆ ಬೆಳಕಿಗೆ ಬರುತ್ತಿದೆ. ಬೆಳಗ್ಗೆ ಆರಂಭವಾದ ದಾಳಿ ಸಂಜೆಯಾದರೂ ಮುಂದುವರಿದಿದ್ದು, ಝಣ ಝಣ ಕಾಂಚಾಣ ಅಧಿಕಾರಿಗಳ ಮನೆಯಲ್ಲಿ ಕುಣಿಯುತ್ತಿದೆ.

    8 ಎಸ್ಪಿಗಳು, 100 ಅಧಿಕಾರಿಗಳು ಮತ್ತು 300 ಸಿಬ್ಬಂದಿಯ ತಂಡದಿಂದ 15 ಅಧಿಕಾರಿಗಳ ವಿರುದ್ಧ ಅಕ್ರಮ ಆಸ್ತಿ ಪ್ರಕರಣಗಳಿಗೆ ಸಂಬಂಧಿಸಿದಂತೆ 60 ಸ್ಥಳಗಳಲ್ಲಿ ಎಸಿಬಿ ಶೋಧ ನಡೆಸಿದೆ. ಶೋಧ ವೇಳೆ ಅಪಾರ ಪ್ರಮಾಣದಲ್ಲಿ ಅಕ್ರಮ ನಗದು ಮತ್ತು ಚಿನ್ನಾಭರಣ ಪತ್ತೆಯಾಗಿದೆ. ಈ ಹಿಂದೆ ಕಂಡು ಕೇಳರಿಯದ ಮೆಗಾ ದಾಳಿ ಇದಾಗಿದ್ದು, ಈ ಮೆಗಾ ದಾಳಿಯ ಕುರಿತು ಭ್ರಷ್ಟಚಾರ ನಿಗ್ರಹದಳ ಸುದೀರ್ಘ ಪತ್ರಿಕಾ ಪ್ರಕಟಣೆಯಲ್ಲಿ ಸಂಪೂರ್ಣ ಮಾಹಿತಿಯನ್ನು ಅನಾವರಣ ಮಾಡಿದೆ.

    1. ಎಸ್. ಎಂ. ಬಿರಾದರ್, ಕಿರಿಯ ಇಂಜಿನಿಯರ್, ಲೋಕೋಪಯೋಗಿ ಇಲಾಖೆ, ಜೇವರ್ಗಿ, ಕಲಬುರಗಿ ಜಿಲ್ಲೆ: ಕಲಬುರಗಿಯಲ್ಲಿ 2 ವಾಸದ ಮನೆಗಳು, ಬೆಂಗಳೂರು ನಗರದಲ್ಲಿ 1 ನಿವೇಶನ, 3 ವಿವಿಧ ಕಂಪನಿಯ ಕಾರುಗಳು, 1 ದ್ವಿಚಕ್ರ ವಾಹನ, 1 ಸ್ಕೂಲ್ ಬಸ್, 2 ಟ್ರಾಕ್ಟರ್‌ಗಳು, 54,50,000 ರೂ. ನಗದು ಹಣ, ಸುಮಾರು 100 ಗ್ರಾಂ ಚಿನ್ನಾಭರಣಗಳು, 36 ಎಕರೆ ಕೃಷಿ ಜಮೀನು, 15 ಲಕ್ಷ ರೂ. ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿರುತ್ತವೆ, ತನಿಖೆ ಮುಂದುವರೆದಿದೆ.

    2. ಶ್ರೀ. ಟಿ. ಎಸ್. ರುದ್ರೇಶಪ್ಪ, ಜಂಟಿ ನಿರ್ದೇಶಕರು, ಕೃಷಿ ಇಲಾಖೆ, ಗದಗ ಜಿಲ್ಲೆ: ಗದಗ, ಶಿವಮೊಗ್ಗ ನಗರದಲ್ಲಿ 2 ವಾಸದ ಮನೆಗಳು, ವಿವಿಧ ಕಡೆಗಳಲ್ಲಿ 1 ನಿವೇಶನಗಳು, 9 ಕೆ.ಜಿ 400 ಗ್ರಾಂ ಚಿನ್ನದ ಬಿಸ್ಕೇಟ್ ಹಾಗೂ ಆಭರಣಗಳು, 3 ಕೆ.ಜಿ ಬೆಳ್ಳಿ ಸಾಮಾನುಗಳು, 2 ವಿವಿಧ ಕಂಪನಿಯ ಕಾರುಗಳು, 3 ದ್ವಿಚಕ್ರ ವಾಹನಗಳು, 8 ಎಕರೆ ಕೃಷಿ ಜಮೀನು, ನಗದು ಹಣ 15,94,000 ರೂಗಳು ಹಾಗೂ 20 ಲಕ್ಷ ರೂ. ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿರುತ್ತವೆ. ತನಿಖೆ ಮುಂದುವರೆದಿದೆ.

    3. ಶ್ರೀ. ಶ್ರೀನಿವಾಸ್. ಕೆ, ಕಾರ್ಯಪಾಲಕ ಅಭಿಯಂತರರು, ಹೆಚ್‌ಎಲ್‌ಬಿಸಿ-3, ಕೆ.ಆರ್. ಪೇಟೆ ಸಬ್ ಡಿವಿಜನ್, ಮಂಡ್ಯ ಜಿಲ್ಲೆ: ಮೈಸೂರು ನಗರದಲ್ಲಿ 1 ವಾಸದ ಮನೆ, ಮೈಸೂರು ನಗರದಲ್ಲಿ 1 ಫ್ಲಾಟ್, ಮೈಸೂರು ನಗರದಲ್ಲಿ 2 ನಿವೇಶನಗಳು, ಮೈಸೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ 4 ಎಕರೆ 34 ಗುಂಟೆ ಕೃಷಿ ಜಮೀನು, ನಂಜನಗೂಡಿನಲ್ಲಿ 1 ಫಾರ್ಮ್ ಹೌಸ್, 2 ವಿವಿಧ ಕಂಪನಿಯ ಕಾರುಗಳು, 2 ದ್ವಿಚಕ್ರ ವಾಹನಗಳು, 1 ಕೆಜಿ ಚಿನ್ನಾಭರಣಗಳು, 8 ಕೆ.ಜಿ 840 ಗ್ರಾಂ ಬೆಳ್ಳಿ ಸಾಮಾನುಗಳು, ನಗದು ಹಣ 9,85,000 ರೂಗಳು, ವಿವಿಧ ಬ್ಯಾಂಕ್‌ಗಳಲ್ಲಿ 22 ಲಕ್ಷ ರೂ. ಠೇವಣಿ ಹಾಗೂ 8 ಲಕ್ಷ ರೂ. ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿರುತ್ತವೆ. ತನಿಖೆ ಮುಂದುವರೆದಿದೆ.

    4. ಶ್ರೀ. ಕೆ. ಎಸ್. ಲಿಂಗೇಗೌಡ, ಕಾರ್ಯಪಾಲಕ ಅಭಿಯಂತರರು, ಸ್ಮಾರ್ಟ್ ಸಿಟಿ, ಮಂಗಳೂರು ಮಹಾನಗರ ಪಾಲಿಕೆ, ಮಂಗಳೂರು: ಮಂಗಳೂರು ನಗರದಲ್ಲಿ 1 ವಾಸದ ಮನೆ, ಚಾಮರಾಜನಗರ ಮತ್ತು ಮಂಗಳೂರಿನಲ್ಲಿ 3 ನಿವೇಶನಗಳು, 2 ವಿವಿಧ ಕಂಪನಿಯ ಕಾರುಗಳು, 1 ದ್ವಿಚಕ್ರ ವಾಹನ, 1 ಕೆ.ಜಿ ಬೆಳ್ಳಿ ಆಭರಣಗಳು ಹಾಗೂ 10 ಲಕ್ಷ ರೂ ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿರುತ್ತವೆ. ತನಿಖೆ ಮುಂದುವರೆದಿದೆ.

    5. ಶ್ರೀ. ಎಲ್. ಸಿ. ನಾಗರಾಜ್, ಆಡಳಿತಾಧಿಕಾರಿ, ಸಕಾಲ ಮಷೀನ್, 6ನೇ ಮಹಡಿ, ಬಹುಮಹಡಿಗಳ ಕಟ್ಟಡ, ಬೆಂಗಳೂರು ನಗರ: ಬೆಂಗಳೂರು ನಗರದಲ್ಲಿ ೧ ವಾಸದ ಮನೆ ಹಾಗೂ ನಿವೇಶನ, ನೆಲಮಂಗಲದಲ್ಲಿ 1 ವಾಸದ ಮನೆ, ನೆಲಮಂಗಲ ತಾಲ್ಲೂಕಿನಲ್ಲಿ ಸುಮಾರು 11 ಎಕರೆ 26 ಗುಂಟೆ ಜಮೀನು, ನೆಲಮಂಗಲದಲ್ಲಿ ಕೈಗಾರಿಕಾ ಉದ್ದೇಶದ ಒಂದು ಕಟ್ಟಡ, 3 ವಿವಿಧ ಕಂಪನಿಯ ಕಾರುಗಳು, 1.76 ಗ್ರಾಂ ಚಿನ್ನಾಭರಣಗಳು, 7 ಕೆ.ಜಿ 284 ಗ್ರಾಂ ಬೆಳ್ಳಿ ಸಾಮಾನುಗಳು, ನಗದು ಹಣ 43,00,000 ರೂ. ಹಾಗೂ ಸುಮಾರು 14 ಲಕ್ಷ ರೂ. ಮೌಲ್ಯದ ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿರುತ್ತವೆ. ತನಿಖೆ ಮುಂದುವರೆದಿದೆ.

    6. ಶ್ರೀ ಜಿ. ವಿ. ಗಿರಿ, ಗ್ರೂಪ್-ಡಿ ನೌಕರ, ಬಿಬಿಎಂಪಿ ಬಾಲಕ ಮತ್ತು ಬಾಲಕಿಯರ ಹೈಸ್ಕೂಲ್, ಮಾರಪ್ಪನಪಾಳ್ಯ, ಯಶವಂತಪುರ, ಬೆಂಗಳೂರು ನಗರ: ಬೆಂಗಳೂರು ನಗರದಲ್ಲಿ 6 ವಾಸದ ಮನೆಗಳು, 4 ವಿವಿಧ ಕಂಪನಿಯ ಕಾರುಗಳು, 4 ದ್ವಿಚಕ್ರ ವಾಹನಗಳು, 8 ಕೆ. ಜಿ ಬೆಳ್ಳಿ ಸಾಮಾನುಗಳು, 8 ಲಕ್ಷ 18 ಸಾವಿರ ನಗದು ಹಣ ಹಾಗೂ ಸುಮಾರು 15 ಲಕ್ಷ ರೂ. ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿರುತ್ತವೆ. ತನಿಖೆ ಮುಂದುವರೆದಿದೆ.

    7. ಶ್ರೀ. ಎಸ್. ಎಸ್. ರಾಜಶೇಖರ್, ಪಿಸಿಯೋಥೆರಪಿಸ್ಟ್, ಸರ್ಕಾರಿ ಆಸ್ಪತ್ರೆ, ಯಲಹಂಕ, ಬೆಂಗಳೂರು ನಗರ: ಬೆಂಗಳೂರಿನ ಯಲಹಂಕದ ಮಾರಸಂದ್ರದಲ್ಲಿ 1 ಫ್ಲಾಟ್, ಯಲಹಂಕದ ಶಿವನಹಳ್ಳಿಯಲ್ಲಿ 2 ಅಂತಸ್ತಿನ ಒಂದು ಫ್ಲಾಟ್ ಮತ್ತು ತಳ ಮಹಡಿಯಲ್ಲಿ ಖಾಸಗೀ ಆಸ್ಪತ್ರೆ, ಯಲಹಂಕದ ಮೈಲನಹಳ್ಳಿಯಲ್ಲಿ ಒಂದು ನಿವೇಶನ, 1 ಕಾರು, 1 ದ್ವಿಚಕ್ರ ವಾಹನ ಹಾಗೂ ಸುಮಾರು 4 ಲಕ್ಷ ರೂ. ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿರುತ್ತವೆ. ತನಿಖೆ ಮುಂದುವರೆದಿದೆ.

    8. ಶ್ರೀ. ಮಾಯಣ್ಣ, ಪ್ರಥಮ ದರ್ಜೆ ಸಹಾಯಕರು, ಬಿಬಿಎಂಪಿ ಕೇಂದ್ರ ಕಛೇರಿ, ಎನ್. ಆರ್.ವೃತ್ತ, ಬೆಂಗಳೂರು ನಗರ: ಬೆಂಗಳೂರು ನಗರದಲ್ಲಿ 4 ವಾಸದ ಮನೆಗಳು, ವಿವಿಧ ಕಡೆಗಳಲ್ಲಿ 6 ನಿವೇಶನಗಳು, 2 ಎಕರೆ ಕೃಷಿ ಜಮೀನು, 2 ದ್ವಿಚಕ್ರ ವಾಹನಗಳು, 1 ಕಾರು, ನಗದು ಹಣ 59,000 ರೂ.ಗಳು, 10 ಲಕ್ಷ ರೂ ನಿಶ್ಚಿತ ಠೇವಣಿ(ಎಫ್.ಡಿ), ಉಳಿತಾಯ ಖಾತೆ(ಎಸ್‌ಬಿ)ಯಲ್ಲಿ 1,50,೦೦೦/- ರೂಗಳು, ಸುಮಾರು 600 ಗ್ರಾಂ ಚಿನ್ನಾಭರಣ, 3 ಸ್ಥಳಗಳಲ್ಲಿ ಬೇನಾಮಿ ಆಸ್ತಿ ಹಾಗೂ ಸುಮಾರು ೧೨ ಲಕ್ಷ ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿರುತ್ತವೆ. ತನಿಖೆ ಮುಂದುವರೆದಿದೆ.

    9. ಶ್ರೀ. ಕೆ. ಎಸ್. ಶಿವಾನಂದ್, ಸಬ್-ರಿಜಿಸ್ಟಾçರ್ (ನಿವೃತ್ತ), ಬಳ್ಳಾರಿ ಜಿಲ್ಲೆ: ಮಂಡ್ಯ ನಗರದಲ್ಲಿ 1 ವಾಸದ ಮನೆ, ಬೆಂಗಳೂರು ನಗರದಲ್ಲಿ 1 ಖಾಲಿ ನಿವೇಶನ, 1 ಕಾರು, 2 ದ್ವಿಚಕ್ರ ವಾಹನ, ಶಕ್ರಪುರ ಗ್ರಾಮದಲ್ಲಿ 1 ಸಂಕೀರ್ಣ, ಬಳ್ಳಾರಿ ಜಿಲ್ಲೆಯ ಮೋಕಾ ಗ್ರಾಮದಲ್ಲಿ ಸುಮಾರು 7 ಎಕರೆ ಕೃಷಿ ಜಮೀನು, ಹಾಗೂ ಸುಮಾರು 8 ಲಕ್ಷ ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿರುತ್ತವೆ. ತನಿಖೆ ಮುಂದುವರೆದಿದೆ.

    10. ಶ್ರೀ. ಸದಾಶಿವ ರಾಯಪ್ಪ ಮರಲಿಂಗಣ್ಣನವರ್, ಹಿರಿಯ ಮೋಟಾರು ನಿರೀಕ್ಷಕ, ಗೋಕಾಕ್, ಬೆಳಗಾವಿ ಜಿಲ್ಲೆ: ಬೆಳಗಾವಿ ನಗರದಲ್ಲಿ 1 ವಾಸದ ಮನೆ, 22 ಎಕರೆ ಕೃಷಿ ಜಮೀನು, 1 ಕೆ.ಜಿ 135 ಗ್ರಾಂ ಚಿನ್ನಾಭರಣಗಳು, ನಗದು ಹಣ 5,22,೦೦೦ ರೂಗಳು ಹಾಗೂ ಸುಮಾರು 5 ಲಕ್ಷ ರೂ. ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿರುತ್ತವೆ. ತನಿಖೆ ಮುಂದುವರೆದಿದೆ.

    11. ಶ್ರೀ. ಅಡವಿ ಸಿದ್ದೇಶ್ವರ ಕಾರೆಪ್ಪಮಸ್ತಿ, ಅಭಿವೃದ್ಧಿ ಅಧಿಕಾರಿ, ಸಹಕಾರ ಇಲಾಖೆ, ರಾಯಬಾಗ್ ತಾಲ್ಲೂಕು, ಬೆಳಗಾವಿ ಜಿಲ್ಲೆ: ಬೈಲಹೊಂಗಲ ನಗರದಲ್ಲಿ 2 ವಾಸದ ಮನೆ, 4 ನಿವೇಶನಗಳು, 4 ವಿವಿಧ ಕಂಪನಿಯ ಕಾರುಗಳು, 6 ದ್ವಿಚಕ್ರ ವಾಹನಗಳು, 263 ಗ್ರಾಂ ಚಿನ್ನಾಭರಣಗಳು, 945 ಗ್ರಾಂ ಬೆಳ್ಳಿ ಸಾಮಾನುಗಳು, 1,50,೦೦೦ ರೂ. ಮೌಲ್ಯದ ಬ್ಯಾಂಕ್ ಡೆಪಾಸಿಟ್ ಮತ್ತು ಷೇರ್‌ಗಳು, ನಗದು ಹಣ 1,10,೦೦೦ ರೂ. ಹಾಗೂ ಸುಮಾರು 5 ಲಕ್ಷ ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿರುತ್ತವೆ. ತನಿಖೆ ಮುಂದುವರೆದಿದೆ.

    12. ಶ್ರೀ. ನಾಥಾಜಿ ಪೀರಾಜಿ ಪಾಟೀಲ, ಲೈನ್ ಮೆಕಾನಿಕ್ ಗ್ರೇಡ್-೨, ಹೆಸ್ಕಾಂ, ಬೆಳಗಾವಿ ಜಿಲ್ಲೆ: ಬೆಳಗಾವಿ ನಗರದಲ್ಲಿ 1 ವಾಸದ ಮನೆ, ಬೆಳಗಾವಿ ನಗರದಲ್ಲಿ 2 ನಿವೇಶನ, 1 ಕಾರು, 1 ದ್ವಿಚಕ್ರ ವಾಹನ, 239 ಗ್ರಾಂ ಚಿನ್ನಾಭರಣಗಳು, 1 ಕೆ.ಜಿ 803 ಗ್ರಾಂ ಬೆಳ್ಳಿ ಸಾಮಾನುಗಳು, ನಗದು ಹಣ 38,000 ರೂ.ಗಳು ಹಾಗೂ ಸುಮಾರು 20 ಲಕ್ಷ ರೂ. ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿರುತ್ತವೆ. ತನಿಖೆ ಮುಂದುವರೆದಿದೆ.

    13. ಶ್ರೀ. ಲಕ್ಷ್ಮಿನರಸಿಂಹಯ್ಯ, ರಾಜಸ್ವ ನಿರೀಕ್ಷಕರು, ಕಸಬಾ-೨ ದೊಡ್ಡಬಳ್ಳಾಪುರ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: ವಿವಿಧ ಕಡೆಗಳಲ್ಲಿ 5 ವಾಸದ ಮನೆಗಳು, ವಿವಿಧ ಕಡೆಗಳಲ್ಲಿ 6 ನಿವೇಶನಗಳು, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 25 ಗುಂಟೆ ಜಮೀನು, 765 ಗ್ರಾಂ ಚಿನ್ನಾಭರಣಗಳು, 15 ಕೆಜಿ ಬೆಳ್ಳಿ ಸಾಮಾನುಗಳು, 1 ಕಾರು, 2 ದ್ವಿಚಕ್ರ ವಾಹನಗಳು, ನಗದು ಹಣ 1,13,೦೦೦ ರೂ. ಗಳು ಪತ್ತೆಯಾಗಿರುತ್ತದೆ. ತನಿಖೆ ಮುಂದುವರೆದಿದೆ.

    14. ಶ್ರೀ. ವಾಸುದೇವ್. ಆರ್. ಎನ್, ಮಾಜಿ ಪ್ರಾಜೆಕ್ಟ್ ಡೈರೆಕ್ಟರ್ (ಯೋಜನಾ ನಿರ್ದೇಶಕರು), ನಿರ್ಮಿತಿ ಕೇಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆ: ಬೆಂಗಳೂರು ನಗರದಲ್ಲಿ 5 ವಾಸದ ಮನೆಗಳು, ನೆಲಮಂಗಲ ತಾಲೂಕಿನ ಸೋಂಪುರ ಗ್ರಾಮದಲ್ಲಿ 4 ಮನೆಗಳು, ಬೆಂಗಳೂರು ನಗರದಲ್ಲಿ 8 ನಿವೇಶನಗಳು, ನೆಲಮಂಗಲ ಹಾಗೂ ಮಾಗಡಿ ತಾಲ್ಲೂಕಿನಲ್ಲಿ ಒಟ್ಟು 10 ಎಕರೆ 20 ಗುಂಟೆ ಕೃಷಿ ಜಮೀನು, 850 ಗ್ರಾಂ ಚಿನ್ನಾಭರಣಗಳು, 9 ಕೆಜಿ 500 ಗ್ರಾಂ ಬೆಳ್ಳಿ ಸಾಮಾನುಗಳು, ನಗದು ಹಣ 15,೦೦,೦೦೦ ರೂ.ಗಳು ಹಾಗೂ ಸುಮಾರು 98 ಲಕ್ಷ ರೂ. ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿರುತ್ತವೆ. ತನಿಖೆ ಮುಂದುವರೆದಿದೆ.

    15. ಶ್ರೀ. ಬಿ. ಕೃಷ್ಣಾರೆಡ್ಡಿ, ಪ್ರಧಾನ ವ್ಯವಸ್ಥಾಪಕರು, ನಂದಿನಿ ಹಾಲು ಉತ್ಪನ್ನಗಳು, ಬೆಂಗಳೂರು: ವಿವಿಧ ನಗರದಲ್ಲಿ 3 ವಾಸದ ಮನೆಗಳು, ವಿವಿಧ ಕಡೆಗಳಲ್ಲಿ 9 ನಿವೇಶನಗಳು, ಚಿಂತಾಮಣಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಒಟ್ಟು 5 ಎಕರೆ 30 ಗುಂಟೆ ಕೃಷಿ ಜಮೀನು, ಹೊಸಕೋಟೆ ತಾಲ್ಲೂಕಿನಲ್ಲಿ 1 ಪೆಟ್ರೋಲ್ ಬಂಕ್, 383 ಗ್ರಾಂ ಚಿನ್ನಾಭರಣಗಳು, 3395 ಗ್ರಾಂ ಬೆಳ್ಳಿ ಸಾಮಾನುಗಳು, ನಗದು ಹಣ 3,೦೦,೦೦೦ ರೂ.ಗಳು ಪತ್ತೆಯಾಗಿರುತ್ತದೆ. ತನಿಖೆ ಮುಂದುವರೆದಿದೆ.

    ಕರ್ನಾಟಕ ರಾಜ್ಯ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಗಳ ವಿವಿಧ ತಂಡಗಳಿಂದ ಮೇಲ್ಕಂಡ 15 ಆರೋಪಿತ ಸರ್ಕಾರಿ ನೌಕರರಿಗೆ ಸಂಬಂಧಿಸಿದ 68 ಸ್ಥಳಗಳಲ್ಲಿ ಒಟ್ಟು 503 ಅಧಿಕಾರಿ ಮತ್ತು ಸಿಬ್ಬಂದಿಗಳಿಂದ ಏಕಕಾಲಕ್ಕೆ ಶೋಧನೆ ಕೈಗೊಳ್ಳಲಾಗಿರುತ್ತದೆ. ಇದುವರೆಗಿನ ಶೋಧನೆಯಿಂದ ಆರೋಪಿತ ಸರ್ಕಾರಿ ನೌಕರನ ಚರ ಮತ್ತು ಸ್ಥಿರ ಆಸ್ತಿಗಳ ವಿವರಗಳು ಮೇಲ್ಕಂಡಂತೆ ಕಂಡುಬಂದಿದ್ದು, ಸದರಿ ಸ್ವತ್ತುಗಳು ಆರೋಪಿತ ಸಾರ್ವಜನಿಕ ನೌಕರರ ವಿವರಣೆಗಳಿಗೆ ಮತ್ತು ತನಿಖೆ ಮೇಲೆ ಅವಲಂಬಿತವಾಗಿರುತ್ತವೆ. ಆರೋಪಿತ ಸರ್ಕಾರಿ ನೌಕರರು ಹೊಂದಿರುವ ಆಸ್ತಿಗಳ ಮೌಲ್ಯ, ಅವರು ಹೊಂದಿರುವ ಚಿನ್ನಾಭರಣಗಳು, ಇತರೆ ಬ್ಯಾಂಕ್ ಠೇವಣಿಗಳ ಕುರಿತಂತೆ ತನಿಖೆ, ದಾಖಲೆಗಳ ಪರಿಶೀಲನೆ ಕಾರ್ಯ ಹಾಗೂ ಮಾಹಿತಿ ಸಂಗ್ರಹಣೆ ಮಾಡಲಾಗುತ್ತಿದೆ ಎಂದು ಎಸಿಬಿ ಪ್ರಕಟಣೆಯಲ್ಲಿ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts