ಬೆಂಗಳೂರು ಸವಿನಿದ್ದೆಯಲ್ಲಿದ್ದ ಸರ್ಕಾರಿ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶಾಕ್ ನೀಡಿದೆ. ಏಕಕಾಲಕಕ್ಕೆ ಬೆಂಗಳೂರಿನ 9 ಕಡೆಗಳಲ್ಲಿ 100 ಅಧಿಕಾರಿಗಳಿಂದ ದಾಳಿ ನಡೆದಿದೆ. ಬೆಂಗಳೂರು ನಗರದ 9 ವಿವಿಧ ಸ್ಥಳಗಳಲ್ಲಿ 9 ಮಧ್ಯವರ್ತಿಗಳು/ಏಜೆಂಟರು/ ಭ್ರಷ್ಟ/ಅಕ್ರಮ ವಿಧಾನಗಳಿಂದ ಸಾರ್ವಜನಿಕ ಸೇವಕರ ಮೇಲೆ ಪ್ರಭಾವ ಬೀರುವ/ತಮ್ಮ ವೈಯಕ್ತಿಕ ಪ್ರಭಾವದ ಮೂಲಕ ಬೆಂಗಳೂರಿನ ಚಟುವಟಿಕೆಗಳಲ್ಲಿ ಅವ್ಯವಹಾರಗಳು ಮತ್ತು ಇತರ ಅಕ್ರಮಗಳಲ್ಲಿ ತೊಡಗಿರುವ ಶಂಕಿತರಿಗೆ ಸಂಬಂಧಿಸಿದಂತೆ 9 ವಿವಿಧ ಸ್ಥಳಗಳಲ್ಲಿ ಶೋಧ ನಡೆಸಿದೆ.
ಅಭಿವೃದ್ಧಿ ಪ್ರಾಧಿಕಾರ. ಎಸ್ಪಿ ಉಮಾ ಪ್ರಶಾಂತ್ ಅವರ ನೇತೃತ್ವದಲ್ಲಿ ಸುಮಾರು 100 ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸುತ್ತಿದ್ದಾರೆ. ಪ್ರಧಾನ ಕಚೇರಿ .
ದಾಳಿಯ ವಿವರ ಇಂತಿದೆ.
ಬೆಂಗಳೂರಿನಲ್ಲಿ ಯಾವ ಅಧಿಕಾರಿ ಮೇಲೆ, ಎಲ್ಲೆಲ್ಲಿ ಎಸಿಬಿ ದಾಳಿ ನಡೆದಿದೆ ಎಂಬುದ ಡಿಟೇಲ್ಸ್ ಈ ಕೆಳಗಿದೆ
1) ರಾಘು ಬಿ.ಎನ್, ಚಾಮರಾಜಪೇಟೆ
2) ಮೋಹನ್, ಮನೋರಾಯನಪಾಳ್ಯ, ಆರ್ ಟಿ ನಗರ
3) ಮನೋಜ್, ದೊಮ್ಮಲೂರು
4) ಮುನಿರತ್ನ, ಮಲ್ಲತಹಳ್ಳಿ
5) ತೇಜು ಅಲಿಯಾಸ್ ತೇಜಸ್ವಿ, ಆರ್ ಆರ್ ನಗರ
6) ಅಶ್ವಥ್, ಮುದ್ದಿನಪಾಳ್ಯ, ಮಲ್ಲತಹಳ್ಳಿ
7) ರಾಮ, ಚಾಮುಂಡೇಶ್ವರಿನಗರ ಬಿಡಿಎ ಲೇಔಟ್
8) ಲಕ್ಷ್ಮಣ, ಚಾಮುಂಡೇಶ್ವರಿನಗರ ಬಿಡಿಎ ಲೇಔಟ್
9) ಚಿಕ್ಕಹನುಮಯ್ಯ, ಮುದ್ದಿನಪಾಳ್ಯ
ದಕ್ಷಿಣ ಚೀನಾದಲ್ಲಿ ವಿಮಾನ ಪತನ: 132 ಪ್ರಯಾಣಿಕರ ದುರಂತ ಸಾವು, ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ
ಮೇಕೆದಾಟು ವಿರುದ್ಧ ತಮಿಳುನಾಡು ಅಸೆಂಬ್ಲಿ ನಿರ್ಣಯ: ಕಾಂಗ್ರೆಸ್, ಬಿಜೆಪಿ ಸೇರಿ ಎಲ್ಲ ಪಕ್ಷಗಳ ಬೆಂಬಲ
ಅಡಕೆ ಆರೋಗ್ಯಕ್ಕೆ ಹಾನಿಕಾರಕವಲ್ಲ; ಸಂಶೋಧನೆಗಳು ಪ್ರಗತಿಯಲ್ಲಿ: ಆರಗ ಜ್ಞಾನೇಂದ್ರ ಹೇಳಿಕೆ