More

    ಬೆಳ್ಳಂಬೆಳಗ್ಗೆ 75 ಕಡೆಗಳಲ್ಲಿ ಎಸಿಬಿ ದಾಳಿ ಮಾಡಿರುವ 18 ಸರ್ಕಾರಿ ಅಧಿಕಾರಿಗಳ ಸಂಪೂರ್ಣ ಮಾಹಿತಿ ಇಲ್ಲಿದೆ…

    ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ರಾಜ್ಯದ ಸರ್ಕಾರಿ ಅಧಿಕಾರಿಗಳಿಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶಾಕ್​ ನೀಡಿದೆ. 18 ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆದಿದ್ದು, 75 ಕಡೆಗಳಲ್ಲಿ ಎಸಿಬಿ ಶೋಧ ಕಾರ್ಯಾಚರಣೆ ಆರಂಭಿಸಿದೆ. 100 ಅಧಿಕಾರಿಗಳು ಹಾಗೂ 300 ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡೆದಿದೆ. ದಾಳಿಯಾಗಿರುವ 18 ಅಧಿಕಾರಿಗಳ ವಿವರಗಳು ಈ ಕೆಳಗಿನಂತಿವೆ

    1. ಜ್ಞಾನೇಂದ್ರ ಕುಮಾರ್- ಹೆಚ್ಚುವರಿ ಆಯುಕ್ತರು ಸಾರಿಗೆ, ಟ್ರಾಡ್ ಸಾರಿಗೆ ಮತ್ತು ಸುರಕ್ಷತೆ, ಬೆಂಗಳೂರು
    2. ರಾಕೇಶ್ ಕುಮಾರ್– ಬಿಡಿಎ, ಪಟ್ಟಣ ಯೋಜನೆ
    3. ರಮೇಶ ಕಣಕಟ್ಟೆ– ಆರ್.ಎಫ್.ಓ., ಸಾಮಾಜಿಕ ಅರಣ್ಯ, ಯಾದಗಿರಿ
    4. ಬಸವರಾಜ ಶೇಖರ ರೆಡ್ಡಿ ಪಾಟೀಲ್- ಕಾರ್ಯನಿರ್ವಾಹಕ ಅಭಿಯಂತರ, ಕೌಜಲಗಿ ವಿಭಾಗ, ಗೋಕಾಕ
    5. ಬಸವ ಕುಮಾರ್ ಎಸ್ ಅಣ್ಣಿಗೇರಿ – ಶಿರಸ್ತೇದಾರ್, ಡಿಸಿ ಕಛೇರಿ, ಗದಗ
    6. ಗೋಪಿನಾಥ್ ಸಾ ಎನ್ ಮಾಳಗಿ- ಪ್ರಾಜೆಕ್ಟ್ ಮ್ಯಾನೇಜರ್, ನಿರ್ಮಿತಿ ಕೇಂದ್ರ, ವಿಜಯಪುರ
    7. ಬಿ ಕೆ ಶಿವಕುಮಾರ್- ಹೆಚ್ಚುವರಿ ಡಿಟೆಕ್ಟರ್, ಇಂಡಸ್ಟ್ರಿವ್ಸ್ ಮತ್ತು ಕಾಮರ್ಸ್, ಬೆಂಗಳೂರು
    8. ಶಿವಾನಂದ್ ಪಿ ಶರಣಪ್ಪ ಖೇಡಗಿ- ಆರ್​ಎಫ್​ಒ, ಬಾದಾಮಿ
    9. ಮಂಜುನಾಥ್- ಸಹಾಯಕ ಆಯುಕ್ತ, ರಾಮನಗರ
    10. ಶ್ರೀನಿವಾಸ್- ಜನರಲ್ ಮ್ಯಾನೇಜರ್, ಸಮಾಜ ಕಲ್ಯಾಣ ಇಲಾಖೆ
    11. ಮಹೇಶ್ವರಪ್ಪ- ಜಿಲ್ಲಾ ಪರಿಸರ ಅಧಿಕಾರಿ, ದಾವಣಗೆರೆ
    12. ಕೃಷ್ಣನ್- ಎಇ, ಎಪಿಎಂಸಿ, ಹಾವೇರಿ
    13. ಚಲುವರಾಜ್- ಅಬಕಾರಿ ನಿರೀಕ್ಷಕರು, ಗುಂಡ್ಲುಪೇಟೆ ತಾಲೂಕು
    14. ಗಿರೀಶ್- ಸಹಾಯಕ ಇಂಜಿನಿಯರ್, ರಾಷ್ಟ್ರೀಯ ಹೆದ್ದಾರಿ ವಿಭಾಗ
    15. ಬಾಲಕೃಷ್ಣ ಹೆಚ್ ಎನ್- ಪೊಲೀಸ್ ಇನ್ಸ್​ಪೆಕ್ಟರ್, ವಿಜಯನಗರ ಪೊಲೀಸ್ ಠಾಣೆ, ಮೈಸೂರು
    16. ಗವಿರಂಗಪ್ಪ- ಎಇಇ, ಪಿಡಬ್ಲ್ಯೂಡಿ, ಚಿಕ್ಕಮಗಳೂರು
    17. ಅಶೋಕ್ ರೆಡ್ಡಿ ಪಾಟೀಲ್- ಎಇಇ, ಕೃಷ್ಣ ಭಾಗ್ಯ ಜಲ ನಿಗಮ ಲಿ, ದೇವದುರ್ಗ, ರಾಯಚೂರು
    18. ದಯಾ ಸುಂದರ್ ರಾಜು- ಎಇಇ, ಕೆಪಿಟಿಚಿಎಲ್​, ದಕ್ಷಿಣ ಕನ್ನಡ

    ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಎಸಿಬಿ ಶಾಕ್​: ರಾಜ್ಯಾದ್ಯಂತ ಏಕಕಾಲದಲ್ಲಿ 78 ಕಡೆ ಎಸಿಬಿ ದಾಳಿ

    ಟ್ರಾಕ್ಸ್​ನ ಆಕ್ಸಲ್ ಕಟ್ ಆಗಿ ಭೀಕರ ಅಪಘಾತ: ಸ್ಥಳದಲ್ಲೇ ಐವರು ಸಾವು, ರಾಮೇಶ್ವರಕ್ಕೆ ತೆರಳುವಾಗ ದುರ್ಘಟನೆ

    ಬಿಗ್​ಬಾಸ್​ ನಿರೂಪಕರ ವಿರುದ್ಧವೇ ನಾಲಿಗೆ ಹರಿಬಿಟ್ಟ ಸ್ಪರ್ಧಿ: ಸಿಂಬುಗೆ ಅವಮಾನ, ಅಭಿಮಾನಿಗಳ ಆಕ್ರೊಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts