More

    ನಮ್ಮ ಕನ್ನಡ ಸಿನಿಮಾ ಮಂದಿಗೆ ನಾಚಿಕೆ ಆಗ್ಬೇಕು: ಕಲಾವಿದರ ವಿರುದ್ಧ ಗುಡುಗಿದ ನಟ ಜಗ್ಗೇಶ್​

    ಬೆಂಗಳೂರು: ಕನ್ನಡ ಚಿತ್ರರಂಗದ ಒಗ್ಗಟ್ಟಿನ ಬಗ್ಗೆ ಆಗಾಗ ಅಸಮಾಧಾನ ಹೊರಹಾಕುವ ನವರಸನಾಯಕ ಜಗ್ಗೇಶ್​, ಮತ್ತೊಮ್ಮೆ ಕನ್ನಡ ಕಲಾವಿದರ ವಿರುದ್ಧ ಗರಂ ಆಗಿದ್ದಾರೆ.

    ಕಳೆದ ವಾರ ಬಿಡುಗಡೆಯಾದ ಜಗ್ಗೇಶ್​ ಅವರ ತೋತಾಪುರಿ ಸಿನಿಮಾದ ಸಕ್ಸಸ್​ ಮೀಟ್​ನಲ್ಲಿ ಭಾಗಿಯಾಗಿ ಮಾತನಾಡಿದ ಜಗ್ಗೇಶ್​, ನಮ್ಮ ಕನ್ನಡ ಸಿನಿಮಾ ಮಂದಿಗೆ ನಾಚಿಕೆ ಆಗಬೇಕು ಎಂದು ಆಕ್ರೋಶ ಹೊರಹಾಕಿದರು.

    ಯಾವುದೋ ತಮಿಳು ಚಿತ್ರ ಅದ್ಭುತವಾಗಿ ಕಲೆಕ್ಷನ್​ ಮಾಡುತ್ತಿದೆ. ರಜನಿಕಾಂತ್​ರಂತಹ ಹಿರಿಯ ನಟರು ಅದ್ಭುತವಾಗಿ ಪ್ರಮೋಷನ್​ ಮಾಡಿಕೊಟ್ಟಿದ್ದಾರೆ. ಆದರೆ ನಮ್ಮವರು ಯಾರು, ಯಾವ ಸಿನಿಮಾ ಬಗ್ಗೆಯೂ ಮಾತನಾಡಲ್ಲ. ಯಾರು, ಯಾರ ಬಗ್ಗೆನೂ ಮಾತನಾಡಬಾರದು ಅಂತಾ ನಮ್ಮವರು ಬೇಲಿ ಹಾಕ್ಕೊಂಡಿದ್ದಾರೆ. ಈ ರೀತಿಯ ವ್ಯಕ್ತಿತ್ವದಿಂದಾಗಿ ಒಂದು ದಿನ ಅನಾಥ ಭಾವ ಕಾಡುತ್ತದೆ ಎಂದರು.

    ನಾನು 150 ಸಿನಿಮಾ ಮಾಡಿದ್ದೇನೆ. ಬೇರೆಯವರು ಸಹ ಮಾಡಲಿ. ಕನ್ನಡ ಚಿತ್ರರಂಗ ದೊಡ್ಡ ಮಟ್ಟಕ್ಕೆ ಬೆಳೆಯಬೇಕು. ಪರಸ್ಪರ ಪ್ರೀತಿಸಬೇಕು ಮತ್ತು ಪರಸ್ಪರ ಸಿನಿಮಾ ಪ್ರಚಾರ ಮಾಡಬೇಕು. ಆಗ ಮಾತ್ರ ಸಿನಿಮಾ ದೊಡ್ಡ ಮಟ್ಟಕ್ಕೆ ತಲುಪಲು ಸಾಧ್ಯವಾಗುವುದು. ಕಾಲಿವುಡ್​ನಲ್ಲಿ ಸಣ್ಣ ಕಲಾವಿದರಿಂದ ಹಿಡಿದು ದೊಡ್ಡ ದೊಡ್ಡ ಕಲಾವಿದರವರೆಗೂ ಒಂದಾಗುತ್ತಾರೆ. ಪರಸ್ಪರ ಸಿನಿಮಾಗಳನ್ನು ಪ್ರೋತ್ಸಾಹಿಸ್ತಾರೆ. ಆದರೆ, ನಮ್ಮಲ್ಲಿ ಆ ರೀತಿ ಇಲ್ಲ ಎಂದು ಅಸಮಾಧಾನ ಹೊರಹಾಕಿದರು.

    ವಾಮಮಾರ್ಗದಲ್ಲಿ ನನಗೆ ನೂರು ಆಟ ಗೊತ್ತಿದೆ
    ಇದೇ ಸಂದರ್ಭದಲ್ಲಿ ಸಿನಿಮಾ ಬಗ್ಗೆ ಮಾತನಾಡಿದ ಜಗ್ಗೇಶ್​, ತೋತಾಪುರಿ ಚಿತ್ರ ಗಜಗಾಂರ್ಭೀಯದಿಂದ ಸಾಗುತ್ತಿದೆ. ವಾಮಮಾರ್ಗದಲ್ಲಿ ನನಗೆ ನೂರು ಆಟ ಗೊತ್ತಿದೆ. ಆದರೆ ಆ ಮಾರ್ಗದಲ್ಲಿ ನಡೆಯೋಕೆ ನನಗೆ ಇಷ್ಟ ಇಲ್ಲ. ಒಂದು ವಾರ ಹೌಸ್​ಫುಲ್ ಓಡೋ ಥರ ಮಾಡೋದು ಗೊತ್ತು. ನನಗೆ ಆ ಸಾಮರ್ಥ್ಯ ಇದೆ. ಆದರೆ ಆ ರೀತಿ ನಾನು ಮಾಡಲ್ಲ. ಇತ್ತೀಚೆಗೆ ನಮ್ಮ ನಡುವೆ ನಕಲಿ ವಿಮರ್ಶೆ ಕೊಡುವವರು ಹುಟ್ಟುಕೊಂಡಿದ್ದಾರೆ. ದುಡ್ಡು ಕೊಟ್ರೆ ಚಿತ್ರ ಸೂಪರ್​​, ಬೊಂಬಾಟ್ ಅಂತ ಬರೀತಾರೆ. ನಾವು ದುಡ್ಡು ಕೊಟ್ಟು ನಮ್ಮ ಸಿನ್ಮಾ ಬಗ್ಗೆ ಬರೆಸೋಕೆ ಹೋಗಲ್ಲ. ಜನ ಹರಸಿ, ಹಾರೈಸಿದ್ದಾರೆ ಅಷ್ಡೇ ಸಾಕು ನಮಗೆ ಎಂದರು.

    ತೋತಾಪುರಿಯಲ್ಲಿ ಮಠದ ಸ್ವಾಮೀಜಿ ಪಾತ್ರದ ವಿವಾದದ ಬಗ್ಗೆ ಮಾತನಾಡಿದ ನವರಸನಾಯಕ, ರಾಯರೇ ನನ್ನ ಉಸಿರು, ನನ್ನ ಹತ್ತಿರ ಇರುವುದೆಲ್ಲ ಕಿತ್ಕೊಂಡು ಬಿಡಲಿ, ನಾನು ಯೋಚನೆ ಮಾಡಲ್ಲ. ರಾಯರ ಪ್ರೀತಿ ಕಳೆದುಕೊಂಡ ದಿನ ನನಗೆ ಸಾವು ಬರುತ್ತದೆ. ನಾನೊಬ್ಬ ಕ್ಷೂದ್ರನಾಗಿದ್ರೂ ಮಠ ಅದ್ಭುತ ಸ್ಥಾನ ಕೊಟ್ಟಿದೆ. ನನ್ನ ಮಠ ನನ್ನ ಜಾತಿ ನೋಡಲಿಲ್ಲ. ನನ್ನಂತವನಿಗೆ ಬೃಂದಾವನದಲ್ಲಿ ಕೂರಿಸುತ್ತಾರೆ. ಬೃಂದಾವನದ ಪರಿಕ್ರಮ ಮಾಡದೇ ಬರೋದಿಲ್ಲ. ರಾಯರ ಚರಿತ್ರೆ ಓದ್ಬೇಕು. ಸುಮ್ನೆ ಗುರುವಾರ ದಿನ ಮಠಕ್ಕೆ ಹೋಗೋದಲ್ಲ. ರಾಯರ ಮೂಲ ಸಿದ್ದಾಂತವೇ ಮನುಕುಲ ಉದ್ದಾರ ಮಾಡೋದು. ರಾಯರು ಧರ್ಮವೇ ನೋಡಿಲ್ಲ ಎಂದು ಹೇಳಿದರು. (ದಿಗ್ವಿಜಯ ನ್ಯೂಸ್​)

    ಸದ್ದಿಲ್ಲದೆ ಏರಿದ ಮನೆ ಕಂದಾಯ; ಗ್ರಾಮೀಣರಿಗೆ ಹೊರೆಯಾದ ತೆರಿಗೆ ಸೂತ್ರ, ಪಂಚತಂತ್ರ ಸಾಫ್ಟ್​ವೇರ್​ನಲ್ಲೂ ಅವ್ಯವಸ್ಥೆ

    ರಾಹುಲ್​ ಗಾಂಧಿ ಮನವಿಗೆ ಸಿಎಂ ಬೊಮ್ಮಾಯಿ ಸ್ಪಂದನೆ: ಗಾಯಗೊಂಡಿದ್ದ ಆನೆ ಮರಿಗೆ ಸಿಕ್ತು ಸೂಕ್ತ ಚಿಕಿತ್ಸೆ

    ದಕ್ಷಿಣದತ್ತ ಬಾಲಿವುಡ್…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts