ಚೆನ್ನೈ: ಕಾಲಿವುಡ್ನ ಸ್ಟಾರ್ ದಂಪತಿಗಳೆಂದೇ ಖ್ಯಾತರಾಗಿರುವ ನಟ ಧನುಷ್ ಮತ್ತು ಸೂಪರ್ಸ್ಟಾರ್ ರಜಿನಿಕಾಂತ್ ಹಿರಿಯ ಪುತ್ರಿ ಐಶ್ವರ್ಯಾ 18 ವರ್ಷಗಳ ದಾಂಪತ್ಯ ಜೀವನಕ್ಕೆ ಜ.17ರಂದು ಏಕಾಏಕಿ ಗುಡ್ ಬೈ ಹೇಳುವ ಮೂಲಕ ಚಿತ್ರರಂಗಕ್ಕೆ ಮಾತ್ರವಲ್ಲದೇ ಅಸಂಖ್ಯಾತ ಅಭಿಮಾನಿಗಳಿಗೂ ಶಾಕ್ ನೀಡಿದ್ದಾರೆ. ಸ್ಟಾರ್ ದಂಪತಿಯ ಈ ನಿರ್ಧಾರ ಸೂಪರ್ಸ್ಟಾರ್ ರಜಿನಿಕಾಂತ್ ಅವರಿಗೂ ನೋವಾಗಿದೆ. ಅಭಿಮಾನಿಗಳು ಸಹ ಬೇಸರ ಮಾಡಿಕೊಂಡಿದ್ದಾರೆ.
ಜ. 17 ರಂದು ಟ್ವೀಟ್ ಮೂಲಕ ಡಿವೋರ್ಸ್ ಖಚಿತಪಡಿಸಿರುವ ಧನುಷ್, ಸ್ನೇಹಿತರಾಗಿ, ದಂಪತಿಯಾಗಿ, ಪೋಷಕರಾಗಿ ಮತ್ತು ಪರಸ್ಪರ ಹಿತೈಷಿಗಳಾಗಿ ಈ 18 ವರ್ಷಗಳು ಒಟ್ಟಿಗೆ ಕಳೆದೆವು. ಈ ಸುದೀರ್ಘ ಪ್ರಯಾಣವು ಬೆಳವಣಿಗೆ, ತಿಳುವಳಿಕೆ ಮತ್ತು ಹೊಂದಿಕೊಳ್ಳುವಿಕೆಯಿಂದ ಕೂಡಿತ್ತು. ಆದರೆ, ಇಂದು ನಾವು ನಮ್ಮ ದಾರಿಯಲ್ಲಿ ಪ್ರತ್ಯೇಕಗೊಳ್ಳುವ ಸ್ಥಳದಲ್ಲಿ ನಿಂತಿದ್ದೇವೆ ಎಂದು ಧನುಷ್ ಟ್ವೀಟ್ ಮಾಡಿದ್ದಾರೆ. ಇಷ್ಟೇ ಅಲ್ಲದೆ, ಜನರಲ್ಲಿ ಮನವಿಯೊಂದನ್ನು ಮಾಡಿದ್ದಾರೆ. ನಮ್ಮ ನಿರ್ಧಾರವನ್ನು ಗೌರವಿಸಿ, ನಮಗೆ ಬೇಕಾಗಿರುವ ಖಾಸಗಿತನವನ್ನು ನೀಡಿ ಎಂದಿದ್ದಾರೆ. ಐಶ್ವರ್ಯಾ ಕೂಡ ಹೇಳಿಕೆಯನ್ನು ನೀಡಿದ್ದು, ಹೆಚ್ಚಿಗೆ ಹೇಳುವ ಅಗತ್ಯವಿಲ್ಲ. ನಿಮ್ಮ ತಿಳುವಳಿಕೆ ಮತ್ತು ಪ್ರೀತಿ ಮಾತ್ರ ಅಗತ್ಯ ಎಂದು ಜನರಲ್ಲಿ ಕೋರಿದ್ದಾರೆ.
ಇದಾದ ಬಳಿಕ ಸಾಕಷ್ಟು ಸುದ್ದಿ ಹರಿದಾಡಿದರೂ ದಂಪತಿ ಮಾತ್ರ ಸುಮ್ಮನಿದ್ದಾರೆ. ಇತ್ತೀಚೆಗೆ ಐಶ್ವರ್ಯಾ ಅವರಿಗೆ ಕೋವಿಡ್ ಪಾಸಿಟಿವ್ ಆಗಿ ಗುಣಮುಖರಾಗಿದ್ದಾರೆ. ಇತ್ತೀಚೆಗಷ್ಟೇ ಹಿಂದುಸ್ಥಾನ್ ಟೈಮ್ಸ್ ಪತ್ರಿಕೆಯ ಸಂದರ್ಶನದಲ್ಲಿ ಮಾತನಾಡಿರುವ ಐಶ್ವರ್ಯಾ, ನಾವು ಜೀವನದಲ್ಲಿ ಎಲ್ಲವನ್ನು ನಿಭಾಯಿಸಬೇಕು ಎಂದು ಭಾವಿಸುತ್ತೇನೆ. ನಮ್ಮ ದಾರಿಯಲ್ಲಿ ಏನೇನು ಬರುತ್ತದೆಯೋ ಎಲ್ಲವನ್ನು ನಿಭಾಯಿಸಿಕೊಂಡು ಮುಂದೆ ಸಾಗಬೇಕು. ಅಂತಿಮವಾಗಿ ನಮಗೆ ಉದ್ದೇಶಿಸಿರುವುದು ನಮ್ಮ ಬಳಿಗೆ ಬಂದೇ ಬರುತ್ತದೆ ಎಂದರು.
ಮುಂದುವರಿದು ತಮ್ಮ ಜೀವನದ ಬದಲಾವಣೆಗಳ ಬಗ್ಗೆ ಮಾತನಾಡಿದ ಐಶ್ವರ್ಯಾ, ನಾನು ಈ ಹಿಂದೆ ಹೇಳಿದ ಸ್ಥಾನದಲ್ಲೇ ಈಗಲೂ ಇದ್ದೇನೆ. ನಾನು ಕಲಿಯುತ್ತಿದ್ದೇನೆ ಮತ್ತು ಕಲಿಯಲು ಬಿಡಬೇಕೆಂದು ನಾನು ಕೇಳಿಕೊಳ್ಳುತ್ತೇನೆ. ಪ್ರೀತಿಯು ತುಂಬಾ ಸಾಮಾನ್ಯವಾದ ಭಾವನೆಯಾಗಿದೆ. ಇದು ಒಬ್ಬ ಮನುಷ್ಯ ಅಥವಾ ಒಬ್ಬ ವೈಯಕ್ತಿಕ ವಿಷಯದೊಂದಿಗೆ ಸಂಬಂಧವಿಲ್ಲ. ನಾನು ವಿಕಸನಗೊಳ್ಳುತ್ತಿದ್ದಂತೆ, ಪ್ರೀತಿಯ ವ್ಯಾಖ್ಯಾನವು ನನ್ನೊಂದಿಗೆ ವಿಕಸನಗೊಳ್ಳುತ್ತಿದೆ ಎಂದು ಹೇಳಿದರು.
ನಾನು ನನ್ನ ತಂದೆಯನ್ನು ಪ್ರೀತಿಸುತ್ತೇನೆ, ನಾನು ನನ್ನ ತಾಯಿಯನ್ನು ಪ್ರೀತಿಸುತ್ತೇನೆ, ನಾನು ನನ್ನ ಮಕ್ಕಳನ್ನು ಪ್ರೀತಿಸುತ್ತೇನೆ. ಹಾಗಾಗಿ, ಪ್ರೀತಿಯನ್ನು ಕೆಲವು ಏಕವಚನ ಜೀವಿಗಳಿಗೆ ನಿರ್ಬಂಧಿಸಬಾರದು ಎಂದು ನಾನು ಭಾವಿಸುತ್ತೇನೆ. ನಾನು ಪ್ರೀತಿಸುತ್ತೇನೆ ಎಂದು ಹೇಳಲು ಬಯಸುತ್ತೇನೆ.”
ಐಶ್ವರ್ಯಾ ಮತ್ತು ಧನುಷ್ 2004ರ ನವೆಂಬರ್ 18ರಂದು ಮದುವೆಯಾದರು. ವಿವಾಹಕ್ಕೂ ಮುನ್ನ ದಂಪತಿ 6 ತಿಂಗಳು ಡೇಟಿಂಗ್ ನಡೆಸಿದ್ದರು. ದಂಪತಿಗಳಿಗೆ ಯಾತ್ರ ಮತ್ತು ಲಿಂಗ ಹೆಸರಿನ ಇಬ್ಬರು ಗಂಡು ಮಕ್ಕಳಿದ್ದಾರೆ. (ಏಜೆನ್ಸೀಸ್)
ಚುನಾವಣಾ ಪ್ರಚಾರದ ನಡುವೆಯೇ ಹೃದಯಾಘಾತದಿಂದ ಡಿಎಂಕೆ ಅಭ್ಯರ್ಥಿ ದುರಂತ ಸಾವು
ಮದುವೆ ಆಗುವಷ್ಟು ದೊಡ್ಡವಳಲ್ಲ ನಾನಿನ್ನೂ ಚಿಕ್ಕವಳು ಅಂದ್ರು ರಶ್ಮಿಕಾ ಮಂದಣ್ಣ..!
ಅಪಾರ್ಟ್ಮೆಂಟ್ಗೆ ವಿದ್ಯುತ್ ಕಡಿತಗೊಳಿಸದಿರಲು ಲಂಚ: 5 ಲಕ್ಷ ಸ್ವೀಕರಿಸುವಾಗ ಎಸಿಬಿ ಬಲೆಗೆ ಬೆಸ್ಕಾಂ ಎಇಇ