More

    ಆ ಒಂದು ಕೆಟ್ಟ ಬೈಗುಳ: 5 ವರ್ಷದ ಬಳಿಕ ವಿಜಯ್​ ದೇವರಕೊಂಡ ವಿರುದ್ಧ ಸೇಡು ತೀರಿಸಿಕೊಂಡ ಅನಸೂಯ!

    ಹೈದರಾಬಾದ್​: ವಿಜಯ್​ ದೇವರಕೊಂಡ ನಟನೆಯ ಪ್ಯಾನ್​ ಇಂಡಿಯಾ ಸಿನಿಮಾ ಲೈಗರ್​ ನಿನ್ನೆಯಷ್ಟೇ (ಆ.25) ಬಿಡುಗಡೆಯಾಗಿದ್ದು, ಪ್ರೇಕ್ಷಕರ ವಲಯದಲ್ಲಿ ಕಳಪೆ ಪ್ರತಿಕ್ರಿಯೆ ಪಡೆದುಕೊಂಡಿದೆ. ಸಿನಿಮಾ ಚೆನ್ನಾಗಿಲ್ಲ ಎಂಬ ಮಾತುಗಳು ಕೇಳಿಬರುತ್ತಿದ್ದು, ಇದರ ಬೆನ್ನಲ್ಲೇ ವಿಜಯ್​ ವಿರುದ್ಧ ಟಾಲಿವುಡ್​ನ ಜನಪ್ರಿಯ ನಟಿ ಮತ್ತು ನಿರೂಪಕಿ ಅನುಸೂಯ ಭಾರದ್ವಾಜ್ ಸೇಡು ತೀರಿಸಿಕೊಂಡಿದ್ದಾರೆ.

    ಐದು ವರ್ಷಗಳ ಹಿಂದೆ ಬಿಡುಗಡೆಯಾದ ವಿಜಯ್​ ನಟನೆಯ ಅರ್ಜುನ್​ ರೆಡ್ಡಿ ಸಿನಿಮಾ ಸೂಪರ್​ ಹಿಟ್​​ ಆಗಿತ್ತು. ಆದರೆ, ಅದರಲ್ಲಿ ತಾಯಿಯ ಬಗೆಗಿನ ಕೆಟ್ಟ ಬೈಗುಳ ಭಾರೀ ವಿವಾದ ಹೆಬ್ಬಿಸಿತ್ತು. ಅನೇಕರು ಮಹಿಳೆಯರು ಬೈಗುಳದ ವಿರುದ್ಧ ಧ್ವನಿಯೇರಿಸಿದ್ದರು. ಅದರಲ್ಲಿ ಅನಸೂಯ ಭಾರಧ್ವಜ್​ ಕೂಡ ಒಬ್ಬರು. ಅರ್ಜುನ್​ ರೆಡ್ಡಿ ಸಿನಿಮಾ ಕಾರ್ಯಕ್ರಮದಲ್ಲಿಯೂ ವಿಜಯ್​ ಆ ಡೈಲಾಗ್​ ಅನ್ನು ಎಲ್ಲರ ಎದುರು ಹೇಳಿದಕ್ಕೆ ಅನಸೂಯ ಕೆಂಡಾಮಂಡಲವಾಗಿದ್ದರು. ನೇರವಾಗಿಯೇ ವಿಜಯ್​ ವಿರುದ್ಧ ಅಸಮಾಧಾನ ಹೊರಹಾಕಿದ್ದರು.

    ಟಿವಿ ಚರ್ಚಾ ಕಾರ್ಯಕ್ರಮಗಳಲ್ಲೂ ಅನಸೂಯಾ ಈ ಬಗ್ಗೆ ಸಾಕಷ್ಟು ಚರ್ಚೆ ಮಾಡಿದ್ದರು. ಆದರೆ, ಯಾವುದಕ್ಕೂ ವಿಜಯ್​ ಮಾತ್ರ ಪ್ರತಿಕ್ರಿಯೆ ನೀಡಿರಲಿಲ್ಲ. ಇದೀಗ ಐದು ವರ್ಷಗಳ ಬಳಿಕ ಅನಸೂಯ ಮತ್ತೊಮ್ಮೆ ವಿಜಯ್​ ವಿರುದ್ಧ ಟ್ವೀಟ್​ ಮಾಡಿದ್ದಾರೆ. ಲೈಗರ್​ ಸಿನಿಮಾದ ಸೋಲನ್ನು ಕರ್ಮಕ್ಕೆ ಹೋಲಿಕೆ ಮಾಡಿ ಟ್ವೀಟ್​ ಮಾಡುವ ಮೂಲಕ ವಿಜಯ್​ಗೆ ತಿರುಗೇಟು ನೀಡಿದ್ದಾರೆ.

    ತಾಯಿಯ ನೋವು ಮಾಯವಾಗುವುದಿಲ್ಲ. ಕರ್ಮವು ಕೆಲವೊಮ್ಮೆ ಬರೋದು ಕಷ್ಟ. ಆದರೆ, ಖಂಡಿತ ಬಂದೇ ಬರುತ್ತದೆ. ಇನ್ನೊಬ್ಬರ ದುಃಖದಲ್ಲಿ ನನಗೆ ಸಂತೋಷವಾಗಿಲ್ಲ ಆದರೆ, ನಂಬಿಕೆ ಮರುಸ್ಥಾಪಿಸಲಾಗಿದೆ ಎಂದು ಅನುಸೂಯ ಟ್ವೀಟ್​ ಮಾಡಿದ್ದಾರೆ.

    ಅನಸೂಯ ಟ್ವೀಟ್​ ಬೆನ್ನಲ್ಲೇ ವಿಜಯ್​ ಅಭಿಮಾನಿಗಳು ಅವರ ಮುಗಿಬಿದ್ದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನಿಂದಿಸುತ್ತಿದ್ದಾರೆ. ಆದರೆ, ಇದಕ್ಕೂ ತಿರುಗೇಟು ನೀಡಿರುವ ಅನಸೂಯ ಎಲ್ಲ ನಿಂದಕರೆ, ನಿಮ್ಮ ಎಲ್ಲ ನಿಂದನೆಗಳನ್ನು ನಿಮ್ಮ ನಿಮ್ಮ ಹೀರೋಗಳ ತಿರುಗಿಸುತ್ತಿದ್ದೇನೆ. ಕರ್ಮ ಖಂಡತ ಬಿಡುವುದಿಲ್ಲ ಎಂದಿದ್ದಾರೆ. (ಏಜೆನ್ಸೀಸ್​)

    ಲಾಡ್ಜ್​ಗೆ​ ಕರೆಸಿಕೊಂಡು ಯುವಕನ ಬಳಿ ಸುಲಿಗೆ: ಬಂಧಿತ ಲೇಡಿಯ ಮೊಬೈಲ್​ನಲ್ಲಿದ್ದ ಸ್ಫೋಟಕ ರಹಸ್ಯ ಬಯಲು!

    ಸೋನಾಲಿ ಸಾವಿನ ಪ್ರಕರಣದಲ್ಲಿ ಇಬ್ಬರ ಆಪ್ತರ ಬಂಧನ: ಮರಣೋತ್ತರ ವರ ಪರೀಕ್ಷೆಯಲ್ಲಿ ಆಘಾತಕಾರಿ ಅಂಶ ಬಯಲು

    ಸಹಾಯಕ ಕೃಷಿ ನಿರ್ದೇಶಕಿಯ ದರ್ಪಕ್ಕೆ ಅಧಿಕಾರಿಗಳು, ಸಿಬ್ಬಂದಿ ‌ಸುಸ್ತೋ ಸುಸ್ತು! ವಿಡಿಯೋ ವೈರಲ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts