ವಿಜಯವಾಡ: ಚಾಮರಾಜನಗರ ಜಿಲ್ಲಾಸ್ಪತ್ರೆ ಆಕ್ಸಿಜನ್ ದುರಂತ ಮಾಸುವ ಮುನ್ನವೇ ಆಂಧ್ರ ಪ್ರದೇಶದಲ್ಲಿ ಮತ್ತೊಂದು ಅನಾಹುತ ಸಂಭವಿಸಿದ್ದು, ಆಕ್ಸಿಜನ್ ಪೂರೈಕೆಗೆ ಅಡ್ಡಿ ಉಂಟಾಗಿ 11 ರೋಗಿಗಳು ಮೃತಪಟ್ಟಿರುವ ಘಟನೆ ತಿರುಪತಿಯ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ನಡೆದಿದೆ.
ತಿರುಪತಿಯ ಶ್ರೀ ವೆಂಕಟೇಶ್ವರ ರಾಮನಾರಾಯಣ ರುಯಾ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದೆ. ಆಕ್ಸಿಜನ್ ಸಿಲಿಂಡರ್ ಮರುಭರ್ತಿ ಮಾಡಲು ಕೇವಲ 5 ನಿಮಿಷ ತಡವಾಗಿದ್ದಕ್ಕೆ ಆಕ್ಸಿಜನ್ ಒತ್ತಡ ಕಡಿಮೆಯಾಗಿ 11 ಮಂದಿ ಸಾವಿಗೀಡಾಗಿದ್ದಾರೆ ಎಂದು ವೈದ್ಯರಾದ ಹರಿ ನಾರಾಯಣ್ ತಿಳಿಸಿದ್ದಾರೆ.
ಐದು ನಿಮಿಷಗಳಲ್ಲಿ ಆಮ್ಲಜನಕದ ಪೂರೈಕೆಯನ್ನು ಪುನಃಸ್ಥಾಪಿಸಲಾಯಿತು. ಇದೀಗ ಎಲ್ಲವೂ ಸಾಮಾನ್ಯವಾಗಿದೆ. ಈ ಕಾರಣದಿಂದಾಗಿ ಹೆಚ್ಚಿನ ಸಾವುನೋವುಗಳನ್ನು ತಡೆಯಬಹುದು ಎಂದು ವೈದ್ಯರು ಹೇಳಿದ್ದಾರೆ.
ಆಕ್ಸಿಜನ್ ಕೊರತೆಯಾದ ಬೆನ್ನಲ್ಲೇ ಸುಮಾರು 30 ವೈದ್ಯರು ಐಸಿಯು ಧಾವಿಸಿ ಬಂದು ಮುಂದಾಗುತ್ತಿದ್ದ ಬಹುದೊಡ್ಡ ಅನಾಹುತವನ್ನು ತಪ್ಪಿಸಿದರು. ಇಲ್ಲದಿದ್ದಲ್ಲಿ ಇನ್ನು ಹೆಚ್ಚಿನ ಸಾವಾಗುವ ಸಾಧ್ಯತೆ ಇತ್ತು.
ಈ ಘಟನೆ ಬಗ್ಗೆ ತನಿಖೆ ನಡೆಸಿ, ಬಹು ಬೇಗ ವರದಿ ನೀಡುವಂತೆ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಆದೇಶ ನೀಡಿದ್ದಾರೆ. ಅಲ್ಲದೆ, ತಕ್ಷಣ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕಳೆದ ವಾರವಷ್ಟೇ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 24 ಕರೊನಾ ರೋಗಿಗಳು ಮೃತಪಟ್ಟಿದ್ದಾರೆ. (ಏಜೆನ್ಸೀಸ್)
ಲಸಿಕೆಗೆ ಇನ್ನೂ 3 ತಿಂಗಳು ಕಾಯಬೇಕು! ಕೋವಿನ್ ಪೋರ್ಟಲ್ನಲ್ಲಿ ಹೆಸರು ನೋಂದಾಯಿಸಿದವರ ಸಂಖ್ಯೆ 19 ಕೋಟಿಗೂ ಅಧಿಕ
ಪಶ್ಚಿಮ ಬಂಗಾಳದ 63 ಬಿಜೆಪಿ ಶಾಸಕರಿಗೆ ‘X’ ಕೆಟಗರಿ ಭದ್ರತೆ; ದಿನದ 24 ಗಂಟೆ ಸಿಐಎಸ್ಎಫ್ ಯೋಧರಿಂದ ಕಾವಲು
ಅಗತ್ಯ ವಸ್ತುಗಳನ್ನು ತರಲು ವಾಹನ ಬಳಸಬಹುದು, ಅನಗತ್ಯ ಓಡಾಟಕ್ಕೆ ಅವಕಾಶ ಇಲ್ಲ; ಡಿಜಿಪಿ ಸ್ಪಷ್ಟನೆ