ಲಖನೌ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಸರಯೂ ನದಿಯ ದಂಡೆಯಲ್ಲಿರುವ ಘಾಟ್ಗಳ ಸರಣಿ ರಾಮ್ ಕಿ ಪೈಡಿಯಲ್ಲಿ ಸ್ನಾನ ಮಾಡುವಾಗ ಸಾರ್ವಜನಿಕವಾಗಿ ಪತ್ನಿಗೆ ಮುತ್ತಿಟ್ಟ ವ್ಯಕ್ತಿಯನ್ನು ಪಕ್ಕದಲ್ಲೇ ಇದ್ದ ಜನರ ಗುಂಪು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ತಮ್ಮ ಸುತ್ತಮುತ್ತ ಜನರಿದ್ದರು ಘಾಟ್ನಲ್ಲಿ ಸ್ನಾನ ಮಾಡುತ್ತಿದ್ದ ದಂಪತಿ ಪರಸ್ಪರ ಚುಂಬಿಸುವುದನ್ನು ನೋಡಿದ ವ್ಯಕ್ತಿಯೊಬ್ಬ ಮಹಿಳೆಯ ಗಂಡನನ್ನು ಎಳೆದುಕೊಂಡು ಹೊಡೆಯಲು ಆರಂಭಿಸುತ್ತಾನೆ. ಈ ವೇಳೆ ಅಲ್ಲಿದ್ದ ಜನರೆಲ್ಲ ಸೇರಿ ಆತನ ಮೇಲೆ ಹಲ್ಲೆ ಮಾಡುವಾಗ ತನ್ನ ಗಂಡನ ಮೇಲೆ ಹಲ್ಲೆ ಮಾಡದಂತೆ ಪತ್ನಿ ತಡೆಯಲು ಯತ್ನಿಸುತ್ತಾಳೆ. ಇಬ್ಬರನ್ನು ನೀರಿನಿಂದ ಹೊರಗೆಳೆದು ಮಹಿಳೆಯ ಗಂಡನನ್ನು ಸುತ್ತುವರಿದು ಹಲ್ಲೆ ಮಾಡುತ್ತಾರೆ. ಇದಿಷ್ಟನ್ನು ವಿಡಿಯೋ ರೆಕಾರ್ಡ್ ಮಾಡಲಾಗಿದೆ.
ಅಯೋಧ್ಯೆಯಲ್ಲಿ ಈ ಅಸಭ್ಯತೆಯನ್ನು ಸಹಿಸಲಾಗುವುದಿಲ್ಲ ಎಂದು ಕೋಪಗೊಂಡ ಗುಂಪಿನ ಯುವಕ ಹೇಳಿರುವುದು ವಿಡಿಯೋದಲ್ಲಿದೆ.
This man did a ‘mistake’ of kissing his wife – Ram Bhakts in Ayodhya misbehaved with his wife and beat up the man! Kissing is not Indian culture, but lynching has become one. pic.twitter.com/GHKXTbBNLP
— Ashok Swain (@ashoswai) June 22, 2022
ವಿಡಿಯೋವನ್ನು ಅಶೋಕ್ ಸ್ವೈನ್ ಎಂಬುವರು ಶೇರ್ ಮಾಡಿಕೊಂಡಿದ್ದಾರೆ. ಈ ವ್ಯಕ್ತಿ ತನ್ನ ಹೆಂಡತಿಗೆ ಮುತ್ತು ನೀಡಿ ತಪ್ಪು ಮಾಡಿಬಿಟ್ಟ. ಅಯೋಧ್ಯೆಯಲ್ಲಿರುವ ರಾಮಭಕ್ತರು ಹಲ್ಲೆಗೊಳಗಾದ ವ್ಯಕ್ತಿಜಯ ಪತ್ನಿಯ ಜತೆ ಅಸಭ್ಯವಾಗಿ ವರ್ತಿಸಿ, ವ್ಯಕ್ತಿಯನ್ನು ಥಳಿಸಿದ್ದಾರೆ, ಮುತ್ತಿಡುವುದು ಭಾರತೀಯ ಸಂಸ್ಕೃತಿಯಲ್ಲವಂತೆ. ಆದರೆ, ಗುಂಪು ಹಲ್ಲೆ ಸಂಸ್ಕೃತಿಯಲ್ಲಿ ಒಂದಂತೆ ಎಂದು ಅಶೋಕ್ ಸ್ವೈನ್ ಎಂಬುವರು ಟೀಕಿಸಿದ್ದಾರೆ.
ಸದ್ಯ ವಿಡಿಯೋ ವೈರಲ್ ಆಗಿದ್ದು, ಈಗಾಗಲೇ 1 ಮಿಲಿಯನ್ಗೂ ಅಧಿಕ ಮಂದಿ ವಿಡಿಯೋವನ್ನು ವೀಕ್ಷಣೆ ಮಾಡಿದ್ದಾರೆ. ವಿಡಿಯೋಗೆ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
ಈ ಘಟನೆಯ ಬಗ್ಗೆ ಮಾತನಾಡಿರುವ ಅಯೋಧ್ಯೆಯ ಹಿರಿಯ ಪೊಲೀಸ್ ಅಧೀಕ್ಷಕ (ಎಸ್ಎಸ್ಪಿ) ಶೈಲೇಶ್ ಪಾಂಡೆ, ಈ ವಿಡಿಯೋ ಒಂದು ವಾರ ಹಳೆಯದಾಗಿದೆ ಮತ್ತು ಈ ವಿಷಯದಲ್ಲಿ ನಮಗೆ ಯಾವುದೇ ದೂರು ಬಂದಿಲ್ಲ ಎಂದು ಹೇಳಿದ್ದಾರೆ. ಪೊಲೀಸರು ಈಗ ದಂಪತಿಗಳು ಎಲ್ಲಿ ವಾಸಿಸುತ್ತಿದ್ದಾರೆ ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದಾರೆ. ಕ್ರಮ ತೆಗೆದುಕೊಳ್ಳಲು ಬಯಸಿದರೆ ಅವರು ದೂರು ದಾಖಲಿಸಬಹುದು ಎಂದಿದ್ದಾರೆ. (ಏಜೆನ್ಸೀಸ್)
ಕ್ಯಾಮೆರಾ ಕಂಡೊಡನೆ ಕಾಲ್ಕಿತ್ತ ಶಾರುಖ್ ಪುತ್ರಿ: ಸಿಕ್ಕಾಪಟ್ಟೆ ಟ್ರೋಲ್ ಆಯ್ತು ಸುಹಾನಾಳ ಹಾಟ್ ಲುಕ್
ಬೆಳ್ಳಂಬೆಳಗ್ಗೆ ಹಾಸನದ ಹಲವೆಡೆ ಕಂಪಿಸಿದ ಭೂಮಿ: ಭೂಕಂಪನ ದೃಢಪಡಿಸಿದ ಅಧಿಕಾರಿಗಳು
ತರಕಾರಿಯಂತೆ ಬೀದಿಗಳಲ್ಲಿ ಕುಡಿವ ನೀರು ಮಾರಾಟ!; ಇದು ಬಳ್ಳಾರಿ ತಾಲೂಕಿನ ಗಡಿ ಗ್ರಾಮಗಳ ದುಸ್ಥಿತಿ..