More

    ನಿಮಗೆ ಸ್ವಲ್ಪವಾದರೂ ಮಾನವೀಯತೆ ಇದೆಯೇ? ಸಿಎಂ ವಿರುದ್ಧ ಆರ್​. ಅಶೋಕ ವಾಗ್ದಾಳಿ

    ಬೆಂಗಳೂರು: ಬರದಿಂದ ರಾಜ್ಯದ ರೈತರು ಕೆಂಗೆಟ್ಟಿದ್ದು, ಹೈನುಗಾರರು ತೀವ್ರ ಸಂಕಷ್ಟದಲ್ಲಿದ್ದಾರೆ. ಪರಿಹಾರ ಹಣ ಕೊಟ್ಟಿಲ್ಲ ಎಂಬ ವಿಷಯವನ್ನು ಮುಂದಿಟ್ಟು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ ವಿಪಕ್ಷ ನಾಯಕ ಆರ್. ಅಶೋಕ, ನಿಮಗೆ ಸ್ವಲ್ಪವಾದರೂ ಮಾನವೀಯತೆ ಇದೆಯೇ? ಎಂದು ಸಿಎಂ ಸಿದ್ದರಾಮಯ್ಯರನ್ನು ಪ್ರಶ್ನಿಸಿದ್ದಾರೆ.

    ಇದನ್ನೂ ಓದಿ: ಅಂಬೇಡ್ಕರ ಅವರಿಗೆ ಸಂಬಂಧಿಸಿದ ಪಂಚಕ್ಷೇತ್ರ ಅಭಿವೃದ್ಧಿ ಪಡಿಸಿದ್ದು ಬಿಜೆಪಿ: ಅನಿಲ ಮೆಣಸಿನಕಾಯಿ

    “ಚುನಾವಣೆ ಬಂದರೆ ಸಾಕು ನಂದಿನಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್,​ ಕಳೆದ 7 ತಿಂಗಳಿನಿಂದ ಹೈನುಗಾರರಿಗೆ ನಯಾ ಪೈಸೆ ಪ್ರೋತ್ಸಾಹ ಧನ ನೀಡಿಲ್ಲ. ಈ ಭೀಕರ ಬರಗಾಲದಲ್ಲಿ ರೈತರ ಗಾಯದ ಮೇಲೆ ಬರೆ ಎಳೆದಂತೆ, ರೈತರಿಗೆ ನೀಡಬೇಕಾದ 700 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದ್ದೀರಲ್ಲ ಸಿಎಂ ಸಿದ್ದರಾಮಯ್ಯನವರೇ, ನಿಮಗೆ ಕೊಂಚವಾದರೂ ಮಾನವೀಯತೆ ಇದೆಯೇ?” ಎಂದು ಪ್ರಶ್ನಿಸಿದ್ದಾರೆ.

    “ನಿಮಗೆ ರಾಜ್ಯದ ಆರ್ಥಿಕ ನಿರ್ವಹಣೆ ಮಾಡಲು ಸಾಧ್ಯವಾಗದಿದ್ದರೆ, ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ರೈತರನ್ನು ಪದೇ ಪದೇ ಸಂಕಷ್ಟಕ್ಕೆ ದೂಡುತ್ತಿರುವ ನಿಮ್ಮ ಸರ್ಕಾರದಿಂದ ರೈತರು ಬೇಸತ್ತು ಹೋಗಿದ್ದಾರೆ” ಎಂದು ಎಕ್ಸ್​ನಲ್ಲಿ (ಈ ಹಿಂದಿನ ಟ್ವಿಟರ್​) ಬರೆದು, ಹಂಚಿಕೊಂಡಿದ್ದಾರೆ.

    ಟೀಂ ಇಂಡಿಯಾದಲ್ಲಿ ಧೋನಿ ಸ್ಥಾನವನ್ನು ಈತ ತುಂಬಲಿದ್ದಾನೆ: ಯುವ ಸ್ಟಾರ್​​ ಆಟಗಾರನ ಮೇಲೆ ಸಿದ್ದು ಭರವಸೆ

    ಟಿ-20 ವಿಶ್ವಕಪ್​: ತಂಡದಲ್ಲಿ ಇವರಿಗೆ ಸ್ಥಾನ ಕೊಡಿ, ಆತ ಬೇಡ! ಅಭಿಪ್ರಾಯ ಹೊರಹಾಕಿದ ಕ್ರಿಕೆಟ್ ಫ್ಯಾನ್ಸ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts