ಬೆಂಗಳೂರು: ಸಹಾಯಕ ಪ್ರಾಧ್ಯಾಪಕ ಹುದ್ದೆ 1,242 ಭರ್ತಿಗೆ ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ್ದ ನಿಯಮಗಳಲ್ಲಿ ಕೊಂಚ ಸಡಿಲಿಕೆ ನೀಡಿದೆ. ಇದರಿಂದಾಗಿ ಸ್ನಾತಕೋತ್ತರ ಪದವಿ ಉತ್ತೀರ್ಣರಾದವರು ಸಹ ಅರ್ಜಿ ಸಲ್ಲಿಸಬಹುದಾಗಿದೆ.
ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಸುತ್ತೋಲೆಯನ್ನು ಹೊರಡಿಸಿದ್ದು, 2021ರಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡಿ ಉತ್ತೀರ್ಣರಾದ ಅಭ್ಯಥಿಗಳು, ನೆಟ್, ಸ್ಲೆಟ್ ಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು, ಸರ್ಕಾರಿ ಹುದ್ದೆಯಲ್ಲಿದ್ದು, ಅರ್ಜಿ ಸಲ್ಲಿಸಲು ನಿರಾಪೇಕ್ಷಣಾ ಪತ್ರ ಪಡೆಯದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಲು ಅರ್ಹರು ಎಂದು ತಿಳಿಸಿದೆ.
ಈ ಹಿಂದೆ ನೆಟ್, ಸ್ಲೆಟ್ ಪಾಸಾದವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿದ್ದರು. ಆದರೆ, ಬಹುಸಂಖ್ಯಾತ ಅಭ್ಯರ್ಥಿಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆಗೆ ನಿಗದಿ ಪಡಿಸಿದ್ದ ನಿಯಮವನ್ನು ಸಡಿಲಗೊಳಿಸಿದೆ.
ಕೇಂದ್ರ ನೌಕರರ ಡಿಎ ಹೆಚ್ಚಳ; ಶೇ.3 ಏರಿಕೆಗೆ ಸಂಪುಟ ಅಸ್ತು, ದೀಪಾವಳಿ ಕೊಡುಗೆ..
ಇಲ್ಲಿ ಎಲ್ಲರೂ ಒಂದೇ… ಯೂಟ್ಯೂಬರ್ಸ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಸಮಂತಾಗೆ ಬಿಗ್ ಶಾಕ್!