ಕೊಚ್ಚಿ: ಹಲ್ಲೆ ಮಾಡಿದ್ದಲ್ಲದೆ, ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದನೆಂದು ಆರೋಪಿಸಿ, ತನ್ನ ಪುರುಷ ಸಹೋದ್ಯೋಗಿಯ ವಿರುದ್ಧ ಆಯುರ್ವೇದ ಮಸಾಜ್ ಕೇಂದ್ರದ ಮಹಿಳಾ ಉದ್ಯೋಗಿ ಒಬ್ಬರು ದೂರು ದಾಖಲಿಸಿದ್ದಾರೆ.
ಈ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಆರೋಪಿಯನ್ನು ಅಜಿತ್ ನಾರಾಯಣನ್ ಎಂದು ಗುರುತಿಸಲಾಗಿದೆ. ಈತ ಕಣ್ಣೂರಿನ ಪಯ್ಯವುರ್ ನಿವಾಸಿ. ಹಲ್ಲೆಗೆ ಸಂಬಂಧಿಸಿದ ಸಿಸಿಟಿವಿ ವಿಡಿಯೋ ಫುಟೇಜ್ ಲಭ್ಯವಾಗಿದ್ದು, ಅದರಲ್ಲಿ ಆರೋಪಿ ಸಂತ್ರಸ್ತೆಯ ಮೇಲೆ ಹಲ್ಲೆ ಮಾಡಿರುವ ದೃಶ್ಯ ದಾಖಲಾಗಿದೆ. ಸಾಕಷ್ಟು ಸಾಕ್ಷ್ಯಾಧಾರ ಲಭ್ಯವಿದ್ದರೂ ಈವರೆಗೂ ಆರೋಪಿಯನ್ನು ಬಂಧಿಸಿಲ್ಲ ಎಂದು ಸಂತ್ರಸ್ತೆ ಪೊಲೀಸರ ವಿರುದ್ಧ ಆರೋಪ ಮಾಡಿದ್ದಾರೆ.
ಕಳೆದ ಸೋಮವಾರ ಮಸಾಜ್ ಕೇಂದ್ರಕ್ಕೆ ಬಂದಿದ್ದ ಗ್ರಾಹಕರೊಬ್ಬರು ಅಲ್ಲಿ ನೀಡುವ ಸೇವೆಯ ವಿರುದ್ಧ ದೂರಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಆರೋಪಿ ಅಜಿತ್, ಸಂತ್ರಸ್ತೆ ಜತೆ ವಾಗ್ವಾದಕ್ಕೆ ಇಳಿದಿದ್ದ. ಈ ವೇಳೆ ಆಕೆಗೆ ಥಳಿಸಿದ್ದಾನೆ. ಅಲ್ಲದೆ, ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದನು ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೆ, ಸಿಸಿಟಿವಿ ದೃಶ್ಯಾವಳಿಯನ್ನು ಸಹ ಜತೆಗೆ ನೀಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಎರ್ನಾಕುಲಂ ಉತ್ತರ ಪೊಲೀಸ್ ಠಾಣೆಯ ಅಧಿಕಾರಿ, ಆರೋಪಿ ಅಜಿತ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆದರೆ, ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿಸಿದ್ದಾರೆ. (ಏಜೆನ್ಸೀಸ್)
ಕೆಎಸ್ಆರ್ಟಿಸಿ ಟಿಕೆಟ್ ವಿತರಣಾ ಯಂತ್ರ ಸ್ಫೋಟ: ಕಂಡಕ್ಟರ್ಗೆ ಗಂಭೀರ ಗಾಯ
ಪ್ರೇಯಸಿಗೆ ಜಾಮೀನು ಕೊಡಿಸಲು ಹೋಗಿ ಮರಣದಂಡನೆಗೆ ಗುರಿ: ವಿಷದ ಇಂಜೆಕ್ಷನ್ ನೀಡಿ ಪ್ರಿಯಕರನ ಹತ್ಯೆ
ನೀನೆ ಸಾಕಿದ ಗಿಣಿ ಹದ್ದಾಗಿ ಕುಕ್ಕಿತಲ್ಲೋ… ಉಗ್ರರ ದಾಳಿಗೆ ಪಾಕ್ನ 10 ಸೈನಿಕರ ಸಾವು