ಬಾಗಲಕೋಟೆ: ಸಾರ್ವಜನಿಕರ ಎದುರಲ್ಲೇ ಮಹಿಳೆ ಅಂತಾ ನೋಡದೇ ವ್ಯಕ್ತಿಯೊಬ್ಬ ವಕೀಲೆಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬಾಗಲಕೋಟೆ ನಗರದ ವಿನಾಯಕ ನಗರದ ಕ್ರಾಸ್ನಲ್ಲಿ ನಡೆದಿದೆ.
ವಕೀಲೆ ಸಂಗೀತಾ ಶಿಕ್ಕೇರಿ ಹಾಗೂ ಆಕೆಯ ಪತಿ ಮೇಲೆ ನಡುರಸ್ತೆಯಲ್ಲೇ ಹಲ್ಲೆ ನಡೆದಿದೆ. ವಿನಾಯಕ ನಗರದ ನಿವಾಸಿ ಮಹಾಂತೇಶ್ ಚೊಳಚಗುಡ್ಡ ಎಂಬಾತನ ವಿರುದ್ಧ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ನನಗೆ ಕಾಲು, ಎದೆಭಾಗ ಹಾಗೂ ತಲೆಗೆ ಪೆಟ್ಟಾಗಿದೆ ಮತ್ತು ನನ್ನ ಪತಿಗೆ ಕಿವಿ ಹಾಗೂ ತಲೆಗೆ ಗಾಯವಾಗಿದೆ ಎಂದು ವಕೀಲೆ ಸಂಗೀತಾ ಹೇಳಿದ್ದಾರೆ.
ವಕೀಲೆ ಪತಿಯ ಕಿವಿಯಿಂದ ರಕ್ತ ಸುರಿದಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಆರೋಗ್ಯ ಸಿಬ್ಬಂದಿ ಇಬ್ಬರನ್ನು ಆ್ಯಂಬುಲೆನ್ನಲ್ಲಿ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಬಿಜೆಪಿ ಮುಖಂಡನ ವಿರುದ್ಧ ಆರೋಪ
ಬಿಜೆಪಿ ಮುಖಂಡ ರಾಜು ನಾಯ್ಕರ್ ಕುಮ್ಮಕ್ಕಿನಿಂದ ಮಹಾಂತೇಶ ಚೊಳಚಗುಡ್ಡ ಹಲ್ಲೆ ಮಾಡಿದ್ದಾರೆಂದು ವಕೀಲೆ ಆರೋಪಿಸಿದ್ದಾರೆ. ಕೆಲ ದಿನಗಳ ಹಿಂದೆ ಬಿಜೆಪಿ ಮುಖಂಡ ರಾಜು ನಾಯ್ಕರ್ ತಮ್ಮ ಮೇಲೆ ದೌರ್ಜನ್ಯ ಮಾಡಿದ್ದಾರೆ. ಮೇ 8 ರಂದು ನಸುಕಿನ ಜಾವ ಬುಲ್ಡೋಜರ್ನಿಂದ ನಮ್ಮ ಮನೆಯ ಮುಂದಿನ ಕಂಪೌಂಡ್ ಹಾಗೂ ಶೌಚಾಲಯ ಕೆಡವಿದ್ದಾರೆ. ಈ ಕುರಿತ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗಿದ್ದವು. ಮನೆಗೆ ಸಂಬಂಧಿಸಿದ ವ್ಯಾಜ್ಯ ನ್ಯಾಯಾಲಯದಲ್ಲಿ ಇರುವುದರಿಂದ ರಾಜು ನಾಯ್ಕರ್ ಹಾಗೂ ವಕೀಲೆ ನಡುವೆ ಆರೋಪ-ಪ್ರತ್ಯಾರೋಪಗಳು ನಡೆದಿದ್ದವು. ರಾಜು ನಾಯ್ಕರ್ ವಿರುದ್ಧ ಠಾಣೆಯಲ್ಲಿ ದೂರು ಕೊಡುತ್ತಿರುವುದರಿಂದ ಮಹಾಂತೇಶ ಚೊಳಚಗುಡ್ಡ ಹಲ್ಲೆ ಮಾಡಿದ್ದಾರೆಂದು ಆರೋಪಿಸಿದ್ದಾರೆ.
ಹಲ್ಲೆ ಮಾಡಿಲ್ಲ ಎಂದು ಸಮರ್ಥನೆ
ಹಲ್ಲೆ ಮಾಡಿರುವ ವಿಡಿಯೋ ಬೆಳಕಿಗೆ ಬಂದಿದ್ದರು. ಮಹಾಂತೇಶ್ ಚೊಳಚಗುಡ್ಡ ಮಾತ್ರ ಹಲ್ಲೆ ಮಾಡಿಲ್ಲ ಎಂದು ಸಬೂಬು ಹೇಳುತ್ತಿದ್ದಾರೆ. ಬಿಜೆಪಿ ಮುಖಂಡ ರಾಜು ನಾಯ್ಕರ್ ಹಾಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳುತ್ತಿದ್ದಾರೆ. ನಿನ್ನೆ ಪೊಲೀಸರು ಬಂದಾಗ ಸಂಗೀತಾ ಶಿಕ್ಕೇರಿ ಅವರ ಮನೆ ಎಲ್ಲಿ ಕೇಳಿದರು. ಆಗ ನಾನು ಅವರ ಮನೆಯನ್ನು ತೋರಿಸಿದ್ದೆ. ನಮ್ಮ ಮನೆಯ ಹತ್ತಿರವೇ ಇರೋದ್ರಿಂದ ಮನೆ ತೋರಿಸಿದ್ದೆ. ಅದೇ ದ್ವೇಷದ ಹಿನ್ನೆಲೆ ನಮ್ಮ ಅಂಗಡಿಗೆ ಬಂದು ನನ್ನ ಚಪ್ಪಲಿಯಿಂದ ಹೊಡೆದು, ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ. ಗಲಾಟೆಯಲ್ಲಿ ತಳ್ಳಾಟವಾಗಿದೆ. ಆದರೆ, ನಾನು ಯಾರ ಕುಮ್ಮಕ್ಕಿನಿಂದ ಏನು ಮಾಡಿಲ್ಲ. ನಾನೂ ಕೂಡ ಪೊಲೀಸ್ ಠಾಣೆಗೆ ದೂರು ಕೊಡುವೆ ಎಂದಿದ್ದಾರೆ. (ದಿಗ್ವಿಜಯ ನ್ಯೂಸ್)
ಖಂಡಿತ ಏನೋ ನಡೆದಿದೆ… ಪಂಜಾಬ್ ವಿರುದ್ಧ ಆರ್ಸಿಬಿ ಸೋತ ಬೆನ್ನಲ್ಲೇ ಸಿಕ್ಕಾಪಟ್ಟೆ ಟ್ರೋಲ್ ಆಗ್ತಿದೆ ಕಪ್ಪು ಬೆಕ್ಕು
ಯಶ್ ಫ್ಯಾನ್ಸ್ಗೆ ಗುಡ್ನ್ಯೂಸ್: KGF-3 ಶೂಟಿಂಗ್, ಸಿನಿಮಾ ಬಿಡುಗಡೆ ಕುರಿತ ಮಹತ್ವದ ಮಾಹಿತಿ ಇದು!
ಕಾಸರಗೋಡಿನ ನಟಿ-ರೂಪದರ್ಶಿ ಸಂಶಯಾಸ್ಪದ ಸಾವು: ಮೃತಳ ಮನೆಯಲ್ಲಿ ಪತ್ತೆಯಾಯ್ತು ಅಪಾಯಕಾರಿ ವಸ್ತು!