More

    ಸೇನಾ ಮುಖ್ಯಸ್ಥ ಬಿಪಿನ್​ ರಾವತ್ ನಿಧನಕ್ಕೂ ಮುನ್ನ ನಿವೃತ್ತ ಸೇನಾಧಿಕಾರಿ ಮಾಡಿದ ಟ್ವೀಟ್​ಗೆ ಭಾರೀ ಆಕ್ರೋಶ ​

    ನವದೆಹಲಿ: ನಿನ್ನೆ (ಡಿಸೆಂಬರ್​ 8) ಭಾರತದ ಪಾಲಿಗೆ ಅತ್ಯಂತ ಕರಾಳ ದಿನ. ತಮಿಳುನಾಡಿನ ಕೂನೂರಿನಲ್ಲಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಪತನದಲ್ಲಿ ಭಾರತೀಯ ಸೇನಾಪಡೆಯ ಮುಖ್ಯಸ್ಥ ಬಿಪಿನ್​ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ. ಬಿಪಿನ್​ ರಾವತ್​ ಅನಿರೀಕ್ಷಿತ ನಿಧನದಿಂದ ಇಡೀ ದೇಶವೇ ಶೋಕ ಸಾಗರದಲ್ಲಿ ಮುಳುಗಿರುವಾಗ ಭಾರತೀಯ ಸೇನೆಯ ನಿವೃತ್ತ ಕರ್ನಲ್​ ಒಬ್ಬರು ಮಾಡಿರುವ ಟ್ವೀಟ್​ ತೀವ್ರ ಟೀಕೆಗೆ ಗುರಿಯಾಗಿದೆ.

    ನಿನ್ನೆ ಸೇನಾ ಹೆಲಿಕಾಪ್ಟರ್​ ಪತನವಾದ ಬೆನ್ನಲ್ಲೇ ಇಡೀ ದೇಶವೇ ಒಗ್ಗಟ್ಟು ಪ್ರದರ್ಶಿಸಿ ಸೇನಾ ಮುಖ್ಯಸ್ಥರು ಹಾಗೂ ಅವರ ಸಿಬ್ಬಂದಿಯ ಚೇತರಿಕೆಗಾಗಿ ಪಾರ್ಥನೆ ಸಲ್ಲಿಸುತ್ತಿದ್ದರೆ, ನಿವೃತ್ತ ಕರ್ನಲ್​ ಬಲ್ಜಿತ್​ ಬಕ್ಷಿ, ಹೆಲಿಕಾಪ್ಟರ್​ ಪತನವನ್ನು ಕರ್ಮಕ್ಕೆ ಹೋಲಿಸಿ ಟ್ವೀಟ್​ ಮಾಡಿದ್ದರು. ಒಂದೆಡೆ ಬಿಪಿನ್​ ರಾವತ್​ ಸೇರಿ ಅವರ ಸಿಬ್ಬಂದಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದರೆ, “ಕರ್ಮವೂ ಜನರೊಂದಿಗೆ ವ್ಯವಹರಿಸಲು ತನ್ನದೇಯಾದ ಮಾರ್ಗವನ್ನು ಹೊಂದಿದೆ” ಎಂದು ಬಲ್ಜಿತ್​ ಬಕ್ಷಿ ಅವರು ಟ್ವೀಟ್​ ಮಾಡುವ ಮೂಲಕ ತಮ್ಮ ಸಣ್ಣತನವನ್ನು ಪ್ರದರ್ಶಿಸಿ ದೇಶದ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

    ಸೇನಾ ಮುಖ್ಯಸ್ಥ ಬಿಪಿನ್​ ರಾವತ್ ನಿಧನಕ್ಕೂ ಮುನ್ನ ನಿವೃತ್ತ ಸೇನಾಧಿಕಾರಿ ಮಾಡಿದ ಟ್ವೀಟ್​ಗೆ ಭಾರೀ ಆಕ್ರೋಶ ​

    ಇನ್ನು ಬಕ್ಷಿ ಅವರು ಟ್ವೀಟ್​ನಲ್ಲಿ ಯಾರ ಹೆಸರನ್ನೂ ಉಲ್ಲೇಖಿಸಿದ್ದರೂ, ಅವರು ಟ್ವೀಟ್​ ಮಾಡಿದ್ದ ಸಮಯ ಅದರ ಹಿಂದಿನ ಉದ್ದೇಶವನ್ನು ಸಾರಿ ಹೇಳುತ್ತಿತ್ತು. ಯಾವಾಗ ಟ್ವೀಟ್​ ಎಲ್ಲಡೆ ವೈರಲ್​ ಆಗಿ ಸಾಕಷ್ಟು ಟೀಕೆಗಳು ಹರಿದುಬರಲು ಆರಂಭಿಸಿತೋ ತಕ್ಷಣ ಟ್ವೀಟ್​ ಅನ್ನು ಬಕ್ಷಿ ಅವರು ಡಿಲೀಟ್​ ಮಾಡಿದ್ದಾರೆ. ಆದರೂ, ಟ್ವೀಟ್​ನ ಸ್ಕ್ರೀನ್​ಶಾಟ್​ ಎಲ್ಲೆಡೆ ವೈರಲ್​ ಆಗುತ್ತಿದ್ದು, ಟೀಕೆಗಳು ವ್ಯಕ್ತವಾಗುತ್ತಿವೆ.

    ನಿನ್ನೆ ನಡೆದಿದ್ದೇನು?
    ವೆಲ್ಲಿಂಗ್ಟನ್‌ನ ಮಿಲಿಟರಿ ಶಾಲೆಯಲ್ಲಿ ನಿಗದಿಯಾಗಿದ್ದ ಸೆಮಿನಾರ್​ಗೆಂದು ಸಿಡಿಎಸ್​ ಬಿಪಿನ್​ ರಾವತ್, ಅವರ ಪತ್ನಿ ಮಧುಲಿಕಾ ರಾವತ್​, ಬ್ರಿಗೇಡಿಯರ್​ ಎಲ್​.ಎಸ್​.ಲಿಡ್ಡರ್​, ಲೆಫ್ಟಿನೆಂಟ್ ಕರ್ನಲ್​ ಹರ್ಜಿಂದರ್ ಸಿಂಗ್​, ನಾಯಕ್​ ಗುರುಸೇವಕ್​ ಸಿಂಗ್, ನಾಯಕ್​ ಜಿತೇಂದರ್​ ಕುಮಾರ್​, ಲ್ಯಾನ್ಸ್ ನಾಯಕ್​ ವಿವೇಕ್ ಕುಮಾರ್​, ಲ್ಯಾನ್ಸ್ ನಾಯಕ್​ ಬಿ ಸಾಯ್​ತೇಜ್​, ಹವಲ್ದಾರ್​ ಸತ್ಪಾಲ್​ ಸೇರಿದಂತೆ 14 ಮಂದಿ ಬುಧವಾರ ರಷ್ಯಾ ನಿರ್ಮಿತ ಸೇನಾ ಹೆಲಿಕಾಪ್ಟರ್ Mi-17V5 ​ನಲ್ಲಿ ಹೋಗುತ್ತಿದ್ದರು. ಮಾರ್ಗಮಧ್ಯೆ ಹೆಲಿಕಾಪ್ಟರ್​ ಪತನಗೊಂಡು ಬಿಪಿನ್​ ರಾವತ್​ ದಂಪತಿ ಸೇರಿ 13 ಮಂದಿ ಮೃತಪಟ್ಟಿದ್ದಾರೆ. ಸಿಡಿಎಸ್​ ಬಿಪಿನ್​ ರಾವತ್​ ನಿಧನಕ್ಕೇ ಇಡೀ ದೇಶವೇ ಕಂಬನಿ ಮಿಡಿದಿದೆ. (ಏಜೆನ್ಸೀಸ್​)

    ಬಿಪಿನ್​ ರಾವತ್​ ಪ್ರಯಾಣಿಸುತ್ತಿದ್ದ ಕಾಪ್ಟರ್​ Mi-17V5 ಗೆ ಉಂಟು ವಿಶಿಷ್ಟ ಹಿನ್ನೆಲೆ: ಆದರೂ ಹೆಲಿಕಾಪ್ಟರ್​ ಪತನ ಆಗಿದ್ದೇಕೆ?

    ಸೇನಾ ಹೆಲಿಕಾಪ್ಟರ್​ ದುರಂತ: ಸಾವು-ಬದುಕಿನ ನಡುವೆ ಶೌರ್ಯಚಕ್ರ ಪುರಸ್ಕೃತ, ಕ್ಯಾಪ್ಟನ್​​ ವರುಣ್​​​ ಸಿಂಗ್​​​​ ಹೋರಾಟ

    ಹೆಲಿಕಾಪ್ಟರ್ ಪತನ; ಕೇಂದ್ರ ಸರ್ಕಾರ ತನಿಖೆಗೆ ಆದೇಶ

    ಕೊಡಗಿನ ಮೇಲೆ ರಾವತ್​ಗೆ ವಿಶೇಷ ಪ್ರೀತಿ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts