ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂದುಗಳನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ನಡೆಸುತ್ತಿರುವ ಗುಂಡಿನ ದಾಳಿ ಮುಂದುವರಿದಿದ್ದು, ಉಗ್ರರ ಗುಂಡೇಟಿಗೆ ರಾಜಸ್ಥಾನ ಮೂಲದ ಬ್ಯಾಂಕ್ ಮ್ಯಾನೇಜರ್ ಮೃತಪಟ್ಟಿರುವ ಘಟನೆ ಕಣಿವೆ ನಾಡಿನ ಕುಲ್ಗಾಮ್ ಜಿಲ್ಲೆಯಲ್ಲಿ ಗುರುವಾರ (ಜೂನ್. 2) ನಡೆದಿದೆ.
ಹತ್ಯೆಯಾದ ಬ್ಯಾಂಕ್ ಮ್ಯಾನೇಜರ್ನನ್ನು ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಮೊಹನ್ ಪೊರಾ ಏರಿಯದಲ್ಲಿರುವ ಎಲ್ಲಕ್ವೈ ದೇಹತಿ ಬ್ಯಾಂಕ್ನಲ್ಲಿ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ವಿಜಯ್ ಕುಮಾರ್ ರಾಜಸ್ಥಾನದ ಹನುಮಗಢ ಮೂಲದವರು. ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಇಂದು ಬೆಳಗ್ಗೆ ಬಾಂಬ್ ಸ್ಫೋಟದಿಂದ ಮೂವರು ಯೋಧರು ಹುತಾತ್ಮರಾದ ಶೋಪಿಯಾನ ಪ್ರದೇಶದಿಂದ ಕೇವಲ 13 ಕಿ.ಮೀ ದೂರದಲ್ಲೇ ಈ ಘಟನೆ ನಡೆದಿದೆ. ಕುಲ್ಗಾಮ್ ಜಿಲ್ಲೆಯ ಗೋಪಾಲ್ಪೋರಾ ಪ್ರದೇಶದಲ್ಲಿ ಹಿಂದು ಮಹಿಳೆ ಹತ್ಯೆಯಾದ ಎರಡೇ ದಿನದಲ್ಲಿ ಇದೀಗ ಬ್ಯಾಂಕ್ ಮ್ಯಾನೇಜರ್ ಹತ್ಯೆಯಾಗಿದೆ. ಉಗ್ರರ ಗುಂಡೇಟಿಗೆ ಹತ್ಯೆಯಾದ ಮಹಿಳೆಯನ್ನು ರಜನಿ ಬಾಲಾ ಎಂದು ಗುರುತಿಸಲಾಗಿದೆ. ಈಕೆ ಶಾಲಾ ಶಿಕ್ಷಕಿಯಾಗಿದ್ದರು. ಗಂಡ ಮತ್ತು ಮಗಳ ಜತೆ ಜಮ್ಮು ವಿಭಾಗದ ಸಾಂಬಾದಲ್ಲಿ ವಾಸಿಸುತ್ತಿದ್ದರು.
ಶಿಕ್ಷಕಿ ಹತ್ಯೆಯಾದ ಕೇವಲ ಎರಡೇ ದಿನದಲ್ಲಿ ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಕೊಲೆಯಾಗಿದೆ. ಕಳೆದ ವಾರ ಟಿವಿ ಕಲಾವಿದೆ ಅಮ್ರೀನ್ ಭಟ್ ಅವರನ್ನು ಲಷ್ಕರ್ ಇ ತೊಯ್ಬಾ ಸಂಘಟನೆಯ ಉಗ್ರರು ಬದ್ಗಾಮ್ ಜಿಲ್ಲೆಯ ಛಡೂರಾ ಏರಿಯಾದಲ್ಲಿ ಗುಂಡಿಟ್ಟು ಹತ್ಯೆಗೈದಿದ್ದರು. ಮೇ 12ರಂದು ಕಂದಾಯ ಇಲಾಖೆ ಉದ್ಯೋಗಿ ರಾಹುಲ್ ಭಟ್ ಎಂಬುವರನ್ನು ಬದ್ಗಾಮ್ ಜಿಲ್ಲೆಯಲ್ಲೇ ಉಗ್ರರು ಹತ್ಯೆ ಮಾಡಿದ್ದರು. ಹಿಂದುಗಳನ್ನೇ ಉಗ್ರರು ಟಾರ್ಗೆಟ್ ಮಾಡಿದ್ದು, ಸದ್ಯ ಆತಂಕದ ವಾತಾವರಣದಲ್ಲಿ ಬದುಕುವಂತಾಗಿದೆ. (ಏಜೆನ್ಸೀಸ್)
SSLC ಪರೀಕ್ಷೇಲಿ ಡಿಸ್ಟಿಂಕ್ಷನ್ ಬಂದಾಕೆ ಪ್ರಥಮ ಪಿಯು ಎಕ್ಸಾಂನಲ್ಲಿ ಫೇಲಾಗ್ತೀನಿ ಅಂತಾ ಹೆದರಿ ಆತ್ಮಹತ್ಯೆ
VIDEO: ಯುವತಿ ಜತೆ ಮಾಜಿ ಸಚಿವ ಲವ್ವಿಡವ್ವಿ: ಪತ್ನಿ ಕೈಲಿ ರೆಡ್ಹ್ಯಾಂಡ್ ಸಿಕ್ಕಿಬಿದ್ದು ಪೇಚಾಟ- ವಿಡಿಯೋ ವೈರಲ್
ತಮಿಳುನಾಡಿನಿಂದ ಉತ್ತರ ಭಾರತೀಯರಿಗೆ ಗೇಟ್ ಪಾಸ್! ಡಿಜಿಪಿ ಶೈಲೆಂದ್ರ ಬಾಬು ಕೊಟ್ಟ ಸ್ಪಷ್ಟನೆ ಹೀಗಿದೆ…