ಬೆಂಗಳೂರು: ಶನಿವಾರ (ಆ.20) ರಾತ್ರಿ ಸಿನಿಮಾ ನೋಡಿಕೊಂಡು ಮನೆಗೆ ವಾಪಾಸ್ಸಾಗುತ್ತಿದ್ದ ದಂಪತಿಯ ಬೈಕ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪತ್ನಿ ಸಾವಿಗೀಡಾಗಿ, ಪತಿಯ ಸ್ಥಿತಿ ಗಂಭೀರವಾಗಿದೆ. ಈ ಘಟನೆ ಕಲ್ಯಾಣನಗರದ ಜಂಕ್ಷನ್ ಬಳಿ ನಡೆದಿದೆ.
ಶ್ವೇತಾ (23) ಮೃತಪಟ್ಟ ಮಹಿಳೆ. ಪತಿ ಆನಂದ್ (28) ಸ್ಥಿತಿ ತೀರ ಗಂಭೀರವಾಗಿದ್ದು, ಹೆಚ್ಬಿಆರ್ ಮುಖ್ಯ ರಸ್ತೆ ಬಳಿಯಿರುವ ಆಲ್ಟಿಯಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇತ್ತೀಚೆಗಷ್ಟೆ ಮದ್ವೆಯಾಗಿದ್ದ ದಂಪತಿ. ನಿನ್ನೆ ರಾತ್ರಿ ಸಿನಿಮಾ ನೋಡಿಕೊಂಡು ತಮ್ಮ ನಿವಾಸಕ್ಕೆ ಹಿಂದಿರುಗುವಾಗ ದುರ್ಘಟನೆ ಸಂಭವಿಸಿದೆ. ಈ ಸಂಬಂಧ ಬಾಣಸವಾಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಆರಂಭವಾಗಿದೆ. (ದಿಗ್ವಿಜಯ ನ್ಯೂಸ್)
ನಾವು ಭಾರತದೊಂದಿಗೆ ಶಾಶ್ವತ ಶಾಂತಿಯನ್ನು ಬಯಸುತ್ತೇವೆ: ಪಾಕ್ ಪ್ರಧಾನಿ ಶೆಹಬಾಜ್ ಷರೀಫ್
ವಿಜಯಾನಂದ ಟೀಸರ್ಗೆ ಭರ್ಜರಿ ರೆಸ್ಪಾನ್ಸ್: ನಾಲ್ಕು ಭಾಷೆಗಳಲ್ಲಿ 2 ಕೋಟಿಗೂ ಅಧಿಕ ವೀಕ್ಷಣೆ
ವೈವಾಹಿಕ ಜೀವನಕ್ಕೆ ಕಾಲಿಟ್ಟ ಮನೋರಂಜನ್: ಅರಮನೆಯ ಮೈದಾನದಲ್ಲಿ ನೆರವೇರಿತು ಅದ್ಧೂರಿ ವಿವಾಹ