ಶಿವಮೊಗ್ಗದಲ್ಲಿ ಸಾವರ್ಕರ್ ಫೋಟೋ ವಿರೋಧಿಸಿದ್ದಕ್ಕೆ ಬೆಂಗ್ಳೂರಲ್ಲಿ ಟಿಪ್ಪು ಫೋಟೋ ಹರಿದ ಪುನೀತ್​ ಕೆರೆಹಳ್ಳಿ ಟೀಂ

ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಶಿವಮೊಗ್ಗದ ಮಾಲ್​ವೊಂದರಲ್ಲಿ ವಿನಾಯಕ ದಾಮೋದರ ಸಾವರ್ಕರ್ ಅವರ ಫೋಟೋ ಹಾಕಿದ್ದಕ್ಕೆ ಎಸ್​ಡಿಪಿಐ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ಹಿಂದು ಪರ ಸಂಘಟನೆಯ ಕಾರ್ಯಕರ್ತರು ಟಿಪ್ಪು ಸುಲ್ತಾನ್​ ಅವರ ಭಾವಚಿತ್ರ ಹರಿದು ಹಾಕಿದ್ದಾರೆ. 75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕಾಂಗ್ರೆಸ್​ ಪಕ್ಷ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ನಗರದ ಹಲವೆಡೆ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರವಿರುವ ಫ್ಲೆಕ್ಸ್​ಗಳು ರಾರಾಜಿಸುತ್ತಿವೆ. ಈ ವೇಳೆ ಟಿಪ್ಪು ಸುಲ್ತಾನ್ ಭಾವಚಿತ್ರವಿರುವ ಫೋಟೋವನ್ನು ಕೆಲವರು ಹರಿದುಹಾಕಿದ್ದಾರೆ. … Continue reading ಶಿವಮೊಗ್ಗದಲ್ಲಿ ಸಾವರ್ಕರ್ ಫೋಟೋ ವಿರೋಧಿಸಿದ್ದಕ್ಕೆ ಬೆಂಗ್ಳೂರಲ್ಲಿ ಟಿಪ್ಪು ಫೋಟೋ ಹರಿದ ಪುನೀತ್​ ಕೆರೆಹಳ್ಳಿ ಟೀಂ