ಬೆಂಗಳೂರು: ವರನಟ ಡಾ. ರಾಜ್ಕುಮಾರ್ ಕುಟುಂಬದ ಅಭಿಮಾನಿಗಳಿಗೆ ಈ ದಿನ ಮರೆಯಲಾಗದ ಸುದಿನವಾಗಿದೆ. ಸ್ಯಾಂಡಲ್ವುಡ್ಗೆ ಅಣ್ಣಾವ್ರ ಕುಟುಂಬದ ಮತ್ತೊಂದು ಕುಡಿ ಎಂಟ್ರಿಯಾಗಿದೆ.
ಸ್ಯಾಂಡಲ್ವುಡ್ “ಯುವರಾಜ್”ನಿಗೆ ಇಂದು ಪಟ್ಟಾಭಿಷೇಕವಾಗಿದೆ. ಯಂಗ್ ಪವರ್ ಸ್ಟಾರ್ ಅವರನ್ನು ಹೊಂಬಾಳೆ ಸಿನಿಮಾ ಸಂಸ್ಥೆ ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದು, ಹೊಸ ಸಿನಿಮಾ ಘೋಷಣೆಯಾಗಿದೆ. ಪುನೀತ್ ರಾಜ್ಕುಮಾರ್ ಅವರ ನೆಚ್ಚಿನ ನಿರ್ದೇಶಕ ಸಂತೋಷ್ ಆನಂದರಾಮ್ ಯುವ ರಾಜ್ಕುಮಾರ್ಗೆ ನಿರ್ದೇಶನ ಮಾಡಲಿದ್ದಾರೆ.
ಅಪ್ಪು ಸಿನಿಮಾ ಅನೌನ್ಸ್ ಮಾಡುವ ಮೂಲಕವೇ ಚಿತ್ರ ನಿರ್ಮಾಣಕ್ಕೆ ಹೊಂಬಾಳೆ ಸಿನಿಮಾ ಸಂಸ್ಥೆ ಚಿತ್ರರಂಗಕ್ಕೆ ಕಾಲಿಟ್ಟಿತು. ಅಭಿಮಾನಿಗಳ ಮನದಲ್ಲಿ ಅಪ್ಪು ಉತ್ತರಾಧಿಕಾರಿ ಆಗಿರುವ ಯುವರಾಜ್ ಅವರನ್ನು ಹೊಂಬಾಳೆ ಫಿಲ್ಮ್ಸ್ ಚಿತ್ರರಂಗಕ್ಕೆ ಪರಿಚಯಿಸುತ್ತಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಹೊಂಬಾಳೆ ಸಿನಿಮಾ ಸಂಸ್ಥೆ, ಡಾ. ರಾಜ್ಕುಮಾರ್ ಕುಟುಂಬ ಹಾಗೂ ಹೊಂಬಾಳೆ ಸಂಸ್ಥೆ ನಡುವೆ ಇರುವ ಸಂಬಂಧದ ಮುಂದುವರಿದ ಭಾಗವಾಗಿ ನಾವು ನಮ್ಮ ಹೊಂಬಾಳೆ ಫಿಲಂಸ್ನಲ್ಲಿ ದೊಡ್ಮನೆಯ ಮೂರನೇ ತಲೆಮಾರಿನ ಯುವರಾಜ್ ಕುಮಾರ್ರನ್ನು ನಾಯಕನಟನಾಗಿ ಬೆಳ್ಳಿಪರದೆಗೆ ಪರಿಚಯಿಸಲು ಹಮ್ಮೆ ಪಡುತ್ತೇವೆ. ಈ ಪ್ರಯತ್ನದಲ್ಲಿ ನಮ್ಮ ಸಂಸ್ಥೆಯಲ್ಲಿ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿರುವ ಸಂತೋಷ್ ಆನಂದ್ ರಾಮ್ ಅವರ ಸಾರಥ್ಯದಲ್ಲಿ ಈ ಚಿತ್ರವನ್ನು ನಿರ್ಮಿಸಲಿದ್ದೇವೆ. ನಮ್ಮ ಸಂಸ್ಥೆಯ ಚಿತ್ರಗಳಿಗೆ ನೀವು ನೀಡಿರುವ ಬೆಂಬಲವನ್ನು ಈ ಚಿತ್ರಕ್ಕೂ ನೀಡಿ ಈ ಸಂಕಲ್ಪವನ್ನು ಯಶಸ್ವಿಯಾಗಿಸಬೇಕೆಂದು ಹೊಂಬಾಳೆ ಫಿಲ್ಮ್ಸ್ ಕೋರಿದೆ.
ಅಭಿಮಾನದಿಂದ ಅಭಿಮಾನಕ್ಕಾಗಿ ಈ ನಮ್ಮ ಪಯಣ.
ಇರಲಿ ನಿಮ್ಮ ಅಪ್ಪುಗೆThe legacy continues..@yuva_rajkumar @SanthoshAnand15 @VKiragandur @hombalefilms#IntroducingYuvaRajKumar #YuvaRajKumar pic.twitter.com/Yp3bofVgZO
— Hombale Films (@hombalefilms) April 27, 2022
ದಾಖಲಾತಿ ಪರಿಶೀಲನೆಗೆ ಹೋಗಿದ್ದ ಪಿಎಸ್ಐ ಅಭ್ಯರ್ಥಿ ಸಿಐಡಿ ಅಧಿಕಾರಿಗಳ ಬಳಿಕ ಲಾಕ್ ಆಗಿದ್ದೆ ವಿಚಿತ್ರ..!
ಪಿಎಸ್ಐ ನೇಮಕಾತಿ ಹಗರಣ: ಅಕ್ರಮಕ್ಕೆ ಬಳಸ್ತಿದ್ದ ಬ್ಲೂಟೂತ್ ಡಿವೈಸ್ ಕುರಿತ ಸ್ಫೋಟಕ ಮಾಹಿತಿ ಬಹಿರಂಗ