ಬೆಂಗಳೂರು: ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರ ವರ್ಗಾವಣೆ ಆದೇಶವನ್ನು ಸರ್ಕಾರ ತಡೆಹಿಡಿದಿದೆ.
ಜನವರಿ 27ರಂದು ಸರ್ಕಾರ ರವಿ ಚನ್ನಣ್ಣವರ್ ಸೇರಿದಂತೆ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ರವಿ ಚನ್ನಣ್ಣವರ್ ಅವರನ್ನು ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಸರ್ಕಾರ ವರ್ಗಾವಣೆ ಮಾಡಿತ್ತು.
ಆದರೆ, ಇದೀಗ ಸರ್ಕಾರ ವರ್ಗಾವಣೆ ಆದೇಶವನ್ನು ಏಕಾಏಕಿ ತಡೆಹಿಡಿದಿದ್ದು, ಈ ಬಗ್ಗೆ ಜ. 28ರಂದು ಆದೇಶ ಹೊರಡಿಸಿದೆ. ತಕ್ಷಣ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ರವಿ ಚನ್ನಣ್ಣವರ್ ವರ್ಗಾವಣೆಗೆ ಸರ್ಕಾರ ಬ್ರೇಕ್ ಹಾಕಿದೆ.
ಕೆಲ ದಿನಗಳಿಂದ ರವಿ ಚನ್ನಣ್ಣವರ್ ಅವರು ತುಂಬಾ ಸುದ್ದಿಯಲ್ಲಿದ್ದಾರೆ. ಅವರ ವಿರುದ್ಧ ಸಾಕಷ್ಟು ಭ್ರಷ್ಟಾಚಾರ ಆರೋಪಗಳು ಕೇಳಿಬಂದಿದೆ. ಅಕ್ರಮವಾಗಿ ಆಸ್ತಿ ಸಂಪಾದಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ ನಡೆಯುತ್ತಿದೆ.
ರವಿ ಚನ್ನಣ್ಣನವರ್ ಸೇರಿದಂತೆ ಒಂಬತ್ತು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ಸರ್ಕಾರ
ಸುತ್ತಿಗೆಯಿಂದ ಹೊಡೆದು ಗಂಡನನ್ನು ಕೊಲೆಗೈದ ಮಹಿಳೆಯನ್ನು ಬಂಧಿಸದೇ ಬಿಟ್ಟು ಕಳುಹಿಸಿದ ಪೊಲೀಸರು!
ಸರ್ವೋದಯ ದಿನ: ಜ.30ರಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ಮಾಡುವಂತಿಲ್ಲ