ಐಪಿಎಸ್​ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಆದೇಶ ತಡೆಹಿಡಿದ ಸರ್ಕಾರ

ಬೆಂಗಳೂರು: ಐಪಿಎಸ್​ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರ ವರ್ಗಾವಣೆ ಆದೇಶವನ್ನು ಸರ್ಕಾರ ತಡೆಹಿಡಿದಿದೆ. ಜನವರಿ 27ರಂದು ಸರ್ಕಾರ ರವಿ ಚನ್ನಣ್ಣವರ್​ ಸೇರಿದಂತೆ 9 ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್​ ವರಿಷ್ಠಾಧಿಕಾರಿಯಾಗಿರುವ ರವಿ ಚನ್ನಣ್ಣವರ್​ ಅವರನ್ನು ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಸರ್ಕಾರ ವರ್ಗಾವಣೆ ಮಾಡಿತ್ತು. ಆದರೆ, ಇದೀಗ ಸರ್ಕಾರ ವರ್ಗಾವಣೆ ಆದೇಶವನ್ನು ಏಕಾಏಕಿ ತಡೆಹಿಡಿದಿದ್ದು, ಈ ಬಗ್ಗೆ ಜ. 28ರಂದು ಆದೇಶ ಹೊರಡಿಸಿದೆ. … Continue reading ಐಪಿಎಸ್​ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಆದೇಶ ತಡೆಹಿಡಿದ ಸರ್ಕಾರ