ಬೆಂಗಳೂರು: ವಾಹನ ಸವಾರರಿಗೆ ಮಾತ್ರವಲ್ಲ ಇನ್ನು ಮುಂದೆ ಪಾದಾಚಾರಿಗಳಿಗೂ ದಂಡ ವಿಧಿಸಲು ಬೆಂಗಳೂರು ಸಂಚಾರಿ ಪೊಲೀಸ್ ಇಲಾಖೆ ಚಿಂತನೆ ನಡೆಸುತ್ತಿರುವ ವಿಚಾರ ವರದಿಯಾಗಿದೆ.
ನಿಗದಿತ ಸ್ಥಳಗಳಲ್ಲಿ ಮಾತ್ರ ರಸ್ತೆಯನ್ನ ದಾಟಬೇಕು. ಜೀಬ್ರಾ ಕ್ರಾಸ್ ಹೊರತುಪಡಿಸಿ ಎಲ್ಲೆಂದರಲ್ಲಿ ರಸ್ತೆ ದಾಟಿದರೆ, ಅಂತಹವರಿಗೆ ದಂಡ ವಿಧಿಸಲು ಸಂಚಾರಿ ಪೊಲೀಸ್ ಇಲಾಖೆ ಮುಂದಾಗಿದೆ.
ಬೇಕಾಬಿಟ್ಟಿಯಾಗಿ ಎಲ್ಲೆಂದರಲ್ಲಿ ರಸ್ತೆ ದಾಟಿ ಕಳೆದ ವರ್ಷ 69 ಜನ ಮೃತಪಟ್ಟಿದ್ದರು. ಅಪಘಾತಗಳಿಂದ ಜನರ ಜೀವ ಉಳಿಸಲು ಹೊಸ ನಿಯಮ ತರುವ ಪ್ರಸ್ತಾವನೆಯನ್ನು ಸಂಚಾರಿ ಪೊಲೀಸ್ ಇಲಾಖೆ ತಯಾರು ಮಾಡಿದೆ.
ಆದರೆ, ಈ ಹೊಸ ನಿಯಮ ಜಾರಿಗೂ ಮುನ್ನವೇ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ನಗರದಲ್ಲಿ ಜೀಬ್ರಾ ಕ್ರಾಸ್ ವ್ಯವಸ್ಥೆ ಎಷ್ಟರ ಮಟ್ಟಿಗೆ ಇದೆ ಎಂಬ ಪ್ರಶ್ನೆ ಎತ್ತಿದ್ದಾರೆ. ಬರೀ ದಂಡವನ್ನೇ ಹಾಕುವುದಲ್ಲ ಅದಕ್ಕೆ ತಕ್ಕಂತೆ ಸೌಲಭ್ಯವು ಇರಬೇಕು ಎಂಬ ಮಾತುಗಳು ಕೇಳಿಬರುತ್ತಿವೆ. ಜೀಬ್ರಾ ಕ್ರಾಸ್ ಎಲ್ಲೆಲ್ಲಿದೆ. ಅದನ್ನು ಹುಡುಕಿಕೊಂಡು ಹೋಗಿ ರಸ್ತೆ ದಾಟಬೇಕಾ ಎಂಬ ಪ್ರಶ್ನೆಗಳು ಎದ್ದಿವೆ.
ಒಂದು ವೇಳೆ ಹೊಸ ನಿಯಮ ಜಾರಿಗೆಯಾದ್ರೆ ಸಂಚಾರಿ ಪೊಲೀಸ್ ಇಲಾಖೆ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗುವುದು ಖಂಡಿತ ಎಂಬ ಮಾತಿಗಳು ಕೇಳಿಬರುತ್ತಿವೆ. ಆದರೆ, ಪೊಲೀಸ್ ಇಲಾಖೆ ಏನು ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ. (ದಿಗ್ವಿಜಯ ನ್ಯೂಸ್)
ನಾನಿನ್ನೂ ಜೀವಂತವಾಗಿದ್ದೇನೆ ಅಂದ್ರೆ ಈ ಇಬ್ಬರು ಕಾರಣ! ಚರ್ಚೆ ಹುಟ್ಟುಹಾಕಿದ ಸಮಂತಾ ಹೇಳಿಕೆ
ಮಾರ್ಚ್ 18ಕ್ಕೆ ಬಿಡುಗಡೆಯಾದ್ರೆ RRR ಸಿನಿಮಾಗೆ ಕರ್ನಾಟಕದಲ್ಲಿ ಎದುರಾಗಲಿದೆ ಭಾರೀ ಸಂಕಷ್ಟ
ಐಪಿಎಲ್ ಆಟಗಾರರ ಹರಾಜು ಪಟ್ಟಿ ಪ್ರಕಟ; 1,214 ಆಟಗಾರರು ನೋಂದಣಿ; 49 ಆಟಗಾರರ ಮೂಲ ಬೆಲೆ 2 ಕೋಟಿ ರೂ.