More

    ಪತ್ನಿಯ ಮೊಬೈಲ್ ನೋಡಿದ ರಿಯಲ್​ ಎಸ್ಟೇಟ್​ ಉದ್ಯಮಿ: ಮುಂದೆ ನಡೆದಿದ್ದು ಘನ ಘೋರ ಘಟನೆ

    ಬೆಂಗಳೂರು: ಅನ್ನಪೂರ್ಣೇಶ್ವರಿನಗರದಲ್ಲಿ ಪತ್ನಿಯ ಶೀಲ ಶಂಕಿಸಿದ ಪತಿ ಚೂರಿಯಿಂದ ಕತ್ತಿಗೆ ಇರಿದು ಹತ್ಯೆ ಮಾಡಿದ್ದಾನೆ.

    ಅನ್ನಪೂರ್ಣೇಶ್ವರಿನಗರದ ನಿವಾಸಿ ರೂಪಾ (34) ಕೊಲೆಯಾದವರು. ರಿಯಲ್ ಎಸ್ಟೇಟ್ ಉದ್ಯಮಿ ಕಾಂತರಾಜ್ (39) ಆರೋಪಿ.

    ಕಾಂತರಾಜ್-ರೂಪಾ ದಂಪತಿಗೆ ಒಬ್ಬ ಮಗನಿದ್ದಾನೆ. ಪ್ರತಿನಿತ್ಯ ಪತ್ನಿಯ ಶೀಲ ಶಂಕಿಸಿ ಪತಿ ಜಗಳ ಮಾಡುತ್ತಿದ್ದ. ಈ ವಿಚಾರವಾಗಿ ದಂಪತಿ ನಡುವೆ ಆಗಾಗ ಮನಸ್ತಾಪ ಉಂಟಾಗುತ್ತಿತ್ತು. ಬುಧವಾರ ಸಂಜೆ 4.30ರಲ್ಲಿ ಕಾಂತರಾಜ್ ಪತ್ನಿಯ ಮೊಬೈಲ್ ಪರಿಶೀಲಿಸಿದಾಗ ಆಕೆ ಬೇರೆ ವ್ಯಕ್ತಿಯೊಂದಿಗೆ ಮಾತನಾಡಿರುವುದು ಕಂಡು ಬಂದಿತ್ತು. ಈ ವಿಚಾರವಾಗಿ ದಂಪತಿ ನಡುವೆ ಜಗಳ ನಡೆದಿತ್ತು. ಆಕ್ರೋಶಗೊಂಡ ಕಾಂತರಾಜ್ ಅಡುಗೆ ಮನೆಯಲ್ಲಿದ್ದ ಚೂರಿಯಿಂದ ಪತ್ನಿ ರೂಪಾ ಕತ್ತಿಗೆ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದಾನೆ.

    ಟ್ಯೂಷನ್‌ಗೆ ಹೋಗಿದ್ದ ಮಗ ಮನೆಗೆ ವಾಪಾಸ್ಸಾದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅನ್ನಪೂಣೇಶ್ವರಿನಗರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ತಲೆಮರಸಿಕೊಂಡಿರುವ ಕಾಂತರಾಜ್‌ಗೆ ಶೋಧ ಮುಂದುವರೆದಿದೆ.

    ನಾಗಚೈತನ್ಯ ಜತೆ ಡಿವೋರ್ಸ್ ಆದ್ರೆ ಸಮಂತಾಗೆ ಸಿಗಲಿರುವ ಜೀವನಾಂಶದ ಮೊತ್ತ ಇಷ್ಟಂತೆ..!

    ಆರ್​ಜಿವಿ ಸಂದರ್ಶನದಲ್ಲಿ ಲೈಂಗಿಕತೆ ಬಗ್ಗೆ ಬಿಚ್ಚು ಮಾತು: ನಟಿ ಆಶು ರೆಡ್ಡಿ ಕುಟುಂಬದಲ್ಲಿ ಅಲ್ಲೋಲ ಕಲ್ಲೋಲ!

    ಸಮಂತಾ-ನಾಗಚೈತನ್ಯ ಮನಸ್ತಾಪಕ್ಕೆ ಇದೇ ಕಾರಣನಾ? ಟಾಲಿವುಡ್​ ಅಂಗಳದಲ್ಲಿ ಹೀಗೊಂದು ಬಿಸಿ ಬಿಸಿ ಚರ್ಚೆ..!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts