ಬೆಂಗಳೂರು: ತಾಯಿಯೊಬ್ಬಳು ತನ್ನ ಮಗುವನ್ನ ಕೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹೆಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ವಿಭೂತಿಪುರದಲ್ಲಿ ಮೂರು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಸಂಯುಕ್ತಾ ಹೆಸರಿನ ಹೆತ್ತ ಮಗುವನ್ನು ತಾಯಿ ಗಾಯತ್ರಿ, ನೀರಿನ ಟಬ್ನಲ್ಲಿ ಮುಳಗಿಸಿ ಸಾಯಿಸಿರುವ ಅರೋಪ ಕೇಳಿಬಂದಿದೆ. ಮಗುವನ್ನು ಕೊಂದ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಪ್ರಜ್ಞೆ ಇಲ್ಲದೆ ಗಾಯತ್ರಿಯನ್ನು ಪತಿ ನರೇಂದ್ರ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸದ್ಯ ಗಾಯತ್ರಿ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಷ್ಟಗಳನ್ನು ಎದುರಿಸಲು ಆಗುತ್ತಿಲ್ಲ ಎಂದು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನರೇಂದ್ರ ಹಾಗೂ ಗಾಯತ್ರಿ ದಂಪತಿ ತಮಿಳುನಾಡು ಮೂಲದವರು. ಇಪ್ಪತ್ತು ದಿನಗಳ ಹಿಂದಷ್ಟೇ ನರೇಂದ್ರ ಅವರ ತಾಯಿ ತಮಿಳುನಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. (ದಿಗ್ವಿಜಯ ನ್ಯೂಸ್)
ಬಾಲಿವುಡ್ನ ಪ್ರಸ್ತುತ ಸ್ಥಿತಿಯನ್ನು ರಾಹುಲ್ ಗಾಂಧಿಗೆ ಹೋಲಿಸಿ ಸ್ವರಾ ಭಾಸ್ಕರ್ ಕೊಟ್ಟ ವಿವರಣೆ ಹೀಗಿದೆ…