More

    ಅಪಾರ್ಟ್‌ಮೆಂಟ್‌ಗೆ ವಿದ್ಯುತ್ ಕಡಿತಗೊಳಿಸದಿರಲು ಲಂಚ: 5 ಲಕ್ಷ ಸ್ವೀಕರಿಸುವಾಗ ಎಸಿಬಿ ಬಲೆಗೆ ಬೆಸ್ಕಾಂ ಎಇಇ

    ಬೆಂಗಳೂರು: ಅಪಾರ್ಟ್‌ಮೆಂಟ್‌ಗೆ ನೀಡಿರುವ ವಿದ್ಯುತ್ ಸಂಪರ್ಕ ಕಡಿತ ಮಾಡದೇ ಇರಲು 9 ಲಕ್ಷ ರೂ. ಲಂಚಕ್ಕೆ ಬೇಡಿಕೆ ಒಡ್ಡಿದ್ದ ಬೆಸ್ಕಾಂ ಕಾರ್ಯಪಾಲಕ ಇಂಜಿನಿಯರ್, ಭ್ರಷ್ಟಾಚಾರ ನಿಗ್ರಹ ದಳದ(ಎಸಿಬಿ) ಬಲೆಗೆ ಸಿಲುಕಿದ್ದಾರೆ.

    ಬೆಸ್ಕಾಂ ನಾಗವಾರ ಉಪ ವಿಭಾಗ ಎಇಇ ಸುಂದರೇಶ್ ನಾಯ್ಕ ಬಂಧಿತರು. ಚೆಲ್ಲಿಕೆರೆ ನಿವಾಸಿ ಟೆಲಿಕಾಂ ಲೇಔಟ್‌ನಲ್ಲಿ ನಿಯಮ ಉಲ್ಲಂಘಿಸಿ ಅಪಾರ್ಟ್‌ಮೆಂಟ್ ನಿರ್ಮಾಣ ಮಾಡಿದ್ದರು. ಈ ಬಗ್ಗೆ ಪರಿಶೀಲನೆ ಮಾಡಿದ ಬೆಸ್ಕಾಂ ಅಧಿಕಾರಿಗಳು ಅಪಾರ್ಟ್‌ಮೆಂಟ್‌ಗೆ ನೀಡಿರುವ ವಿದ್ಯುತ್ ಸಂಪರ್ಕ ಸ್ಥಗಿತ ಮಾಡುವುದಾಗಿ ತಿಳಿಸಿದ್ದರು. ಈ ಬಗ್ಗೆ ದೂರುದಾರರು, ನಾಗವಾರ ಉಪ ವಿಭಾಗ ಬೆಸ್ಕಾಂ ಕಚೇರಿಗೆ ಹೋಗಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ನ್ನು ಭೇಟಿ ಮಾಡಿ ಮಾಹಿತಿ ನೀಡಿದ್ದರು. ಅದಕ್ಕೆ ಎಇಇ ಸುಂದರೇಶ್ ನಾಯ್ಕ, ಕರೆದು ವಿದ್ಯುತ್ ಸಂಪರ್ಕ ಮುಂದುವರಿಸಲು 9 ಲಕ್ಷ ರೂ. ಲಂಚಕ್ಕೆ ಬೇಡಿಕೆ ಒಡ್ಡಿದ್ದರು.

    ಇದಕ್ಕೆ ಒಪ್ಪದ ಅಪಾರ್ಟ್‌ಮೆಂಟ್ ಮಾಲೀಕ, ಎಸಿಬಿಗೆ ದೂರು ನೀಡಿದ್ದರು. ಈ ಮೇರೆಗೆ ಫೆ.16ರಂದು ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಕಚೇರಿಯಲ್ಲಿ 5 ಲಕ್ಷ ರೂ. ಲಂಚ ಪಡೆಯುವಾಗ ಸುಂದರೇಶ್ ನಾಯ್ಕನನ್ನು ಬಂಧಿಸಲಾಗಿದೆ. ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

    ಸಂಪಾದಕೀಯ | ವಿದೇಶಗಳ ಹಸ್ತಕ್ಷೇಪ ಬೇಕಿಲ್ಲ; ಪಾಕ್ ಕುತಂತ್ರ ಫಲಿಸದು

    ಕಾಂಗ್ರೆಸ್​ನವರಿಂದ ಅಹೋರಾತ್ರಿ ಧರಣಿ; ಮಲಗಲು ಸಜ್ಜಾಗಿ ಬಂದ ನಾಯಕರು…

    ಈಡೇರಿತು ಈ ಜಿಲ್ಲೆಯ ಜನರ ಬೇಡಿಕೆ: ಮೆಡಿಕಲ್​ ಕಾಲೇಜು ಆರಂಭಕ್ಕೆ ಆಡಳಿತಾತ್ಮಕ ಅನುಮೋದನೆ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts