ನವದೆಹಲಿ: ಬಲ್ಕಿಸ್ ಬಾನು ಗ್ಯಾಂಗ್ ರೇಪ್ ಪ್ರಕರಣದ 11 ಅಪರಾಧಿಗಳನ್ನು ಬಿಡುಗಡೆ ಮಾಡಿರುವುದನ್ನು ವಿರೋಧಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಪ್ರಕರಣ ಸಂಬಂಧ ಗುಜರಾತ್ ಸರ್ಕಾರಕ್ಕೆ ನೋಟಿಸ್ ಹೊರಡಿಸಿದ್ದು, ಪ್ರತಿಕ್ರಿಯೆ ನೀಡುವಂತೆ ಕೇಳಿದೆ. ಅಲ್ಲದೆ, ಎರಡು ವಾರಗಳ ಬಳಿಕ ವಿಚಾರಣೆ ನಡೆಸುವುದಾಗಿ ತಿಳಿಸಿದೆ.
ಬಿಡುಗಡೆ ವಿರೋಧಿಸಿ ಸಿಪಿಐ(ಎಂ) ಪೊಲಿಟ್ಬುರೊ ಸದಸ್ಯರಾದ ಸುಭಾಶಿನಿ ಅಲಿ, ತೃಣಮೂಲ ಕಾಂಗ್ರೆಸ್ ಸಂಸದೆ ಮೊಹುವಾ ಮೊಯಿತ್ರಾ ಮತ್ತು ಮಹಿಳಾ ಹಕ್ಕುಗಳ ಕಾರ್ಯಕರ್ತೆಯರು ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸುವುದಾಗಿ ಸುಪ್ರೀಂಕೋರ್ಟ್ ಹೇಳಿತು.
ಕ್ಷಮಾಧಾನ ನೀತಿ ಅಡಿಯಲ್ಲಿ ಅಪರಾಧಿಗಳ ಬಿಡುಗಡೆಗೆ ಅನುಮತಿಸಿರುವ ಪ್ರಕ್ರಿಯೆ ಸರಿಯಾಗಿದೆಯೇ ಎಂಬುದನ್ನು ಒಮ್ಮೆ ಪರಿಶೀಲಿಸಬೇಕಿದೆ ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಸಾಂವಿಧಾನಿಕ ಪೀಠ ಹೇಳಿದೆ. ಬಿಡುಗಡೆ ವೇಳೆ ಅವರು ಕಾರ್ಯವಿಧಾನದ ಮೂಲಕ ಹೋದರೋ? ಇಲ್ಲವೋ? ಎಂಬುದು ನನಗೆ ಗೊತ್ತಿಲ್ಲ ಪರಿಶೀಲಿಸಬೇಕು ಎಂದು ಎನ್.ವಿ. ರಮಣ ಅವರು ತಿಳಿಸಿದರು.
2002ರ ಗುಜರಾತ್ ಗಲಭೆ ಸಂದರ್ಭದಲ್ಲಿ ಬಲ್ಕಿಸ್ ಬಾನು ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಅಲ್ಲದೆ, ಆಕೆಯ ಕುಟುಂಬದ 7 ಸದಸ್ಯರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಅಡಿಯಲ್ಲಿ ಬಂಧಿತರಾಗಿದ್ದ 11 ಅಪರಾಧಿಗಳನ್ನು ಕ್ಷಮಾಧಾನ ನೀತಿಯ ಅಡಿಯಲ್ಲಿ ಗುಜರಾತ್ ಸರ್ಕಾರ ಕಳೆದ ಸ್ವಾತಂತ್ರ್ಯ ದಿನದಂದು ಬಿಡುಗಡೆ ಮಾಡಿದ್ದು, ಭಾರಿ ವಿವಾದವನ್ನು ಸೃಷ್ಟಿಸಿದೆ. (ಏಜೆನ್ಸೀಸ್)
ದುರಂತ ಅಂತ್ಯ ಕಂಡ ಟೆಕ್ಕಿ: ಸುಂದರಿಯ ಡೈರಿ-ಮೊಬೈಲ್ನಲ್ಲಿರೋ ಬಾಯ್ಫ್ರೆಂಡ್ ರಹಸ್ಯದ ಹಿಂದೆ ಬಿದ್ದ ಪೊಲೀಸರು!
ಶಿರಾದಲ್ಲಿ ಭೀಕರ ಅಪಘಾತ, 9 ಮಂದಿ ದುರ್ಮರಣ: ಹೊಟ್ಟೆಪಾಡಿಗಾಗಿ ಗುಳೆ ಹೊರಟ್ಟಿದ್ದ ಬಡವರು ದುರಂತ ಅಂತ್ಯ