More

    80 ದಾಟಿರುವ ಮಲ್ಲಿಕಾರ್ಜುನ ಖರ್ಗೆಗಾಗಿ ಯಾರು ದುಃಖಿಸುವವರೇ ಇಲ್ಲ: ಬಿಜೆಪಿ ವಂಗ್ಯ

    ಬೆಂಗಳೂರು: ದಲಿತ ವಿರೋಧಿ ಕಾಂಗ್ರೆಸ್​ (#CONgressAgainstDalits) ಎಂಬ ಹ್ಯಾಷ್ ಟ್ಯಾಗ್ ಅಡಿ ಸರಣಿ ಕೂ ಮಾಡುವ ಮೂಲಕ ಕಾಂಗ್ರೆಸ್​ ಪಕ್ಷವನ್ನು ರಾಜ್ಯ ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ.

    ಸಿದ್ದರಾಮಯ್ಯ, ಡಿಕೆಶಿ ಆದಿಯಾಗಿ ಕಾಂಗ್ರೆಸ್‌ ನಾಯಕರೆಲ್ಲರೂ 75ರ ಈ ಇಳಿ ಹರೆಯದಲ್ಲೂ ಸೋನಿಯಾ #ED ವಿಚಾರಣೆಯ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಮರುಕಪಟ್ಟರು. ದುರಂತ ನಾಯಕ ಖರ್ಗೆ 80 ವರ್ಷ ದಾಟಿದ್ದಾರೆ. ಅವರ ಬಗ್ಗೆ ದುಃಖಿಸುವವರೇ ಇಲ್ಲ! ದಲಿತ ಎಂಬ ಕಾರಣಕ್ಕಾಗಿ ಇಷ್ಟೊಂದು ನಿಕೃಷ್ಟವೇ?

    80 ದಾಟಿರುವ ಮಲ್ಲಿಕಾರ್ಜುನ ಖರ್ಗೆಗಾಗಿ ಯಾರು ದುಃಖಿಸುವವರೇ ಇಲ್ಲ: ಬಿಜೆಪಿ ವಂಗ್ಯ

    ನಕಲಿ ಗಾಂಧಿಗಳು ತನಿಖಾ ಸಂಸ್ಥೆಯ ಎದುರು ವಿಚಾರಣೆಗೆ ಹಾಜರಾದಾಗ ಕಾಂಗ್ರೆಸ್‌ ಪಕ್ಷ ಆಕಾಶ ಭೂಮಿ ಒಂದಾಗುವಂತೆ ಪ್ರತಿಭಟಿಸಿತು. ಆದರೆ ಈಗ ದಲಿತ ನಾಯಕ, ಕಾಂಗ್ರೆಸ್‌ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಜಾರಿ ನಿರ್ದೇಶನಾಲಯದ ಎದುರು ಕುಳಿತಾಗ ಕಾಂಗ್ರೆಸ್‌ ದಿವ್ಯ ಮೌನ ಅನುಸರಿಸುತ್ತಿದೆ. ಏಕೆ ಈ ದ್ವಂದ್ವ ನೀತಿ?

    80 ದಾಟಿರುವ ಮಲ್ಲಿಕಾರ್ಜುನ ಖರ್ಗೆಗಾಗಿ ಯಾರು ದುಃಖಿಸುವವರೇ ಇಲ್ಲ: ಬಿಜೆಪಿ ವಂಗ್ಯ

    ಸೋನಿಯಾ ಗಾಂಧಿ ಅವರನ್ನು #ED ವಿಚಾರಣೆ ನಡೆಸುವ ಕಾರಣದಿಂದ ಮಲ್ಲಿಕಾರ್ಜುನ ಖರ್ಗೆ ತಮ್ಮ 80 ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲಿಲ್ಲ. ನಕಲಿ ಗಾಂಧಿ ಕುಟುಂಬಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡುತ್ತಿರುವ ದಲಿತ ನಾಯಕ ಖರ್ಗೆ ಅವರನ್ನು ತನಿಖೆ ನಡೆಸುತ್ತಿರುವಾಗ ಕಾಂಗ್ರೆಸ್‌ ಪಕ್ಷ ಮೌನವಾಗಿದೆ. ಏಕೆ ಈ ತಾರತಮ್ಯ? ಎಂದು ಪ್ರಶ್ನಿಸುವ ಮೂಲಕ ಬಿಜೆಪಿ, ಕಾಂಗ್ರೆಸ್​ ಅನ್ನು ಟೀಕಿಸಿದೆ.

    80 ದಾಟಿರುವ ಮಲ್ಲಿಕಾರ್ಜುನ ಖರ್ಗೆಗಾಗಿ ಯಾರು ದುಃಖಿಸುವವರೇ ಇಲ್ಲ: ಬಿಜೆಪಿ ವಂಗ್ಯ

    30ಕ್ಕೂ ಹೆಚ್ಚು ನಂಬರ್​ಗಳನ್ನು ಬ್ಲಾಕ್​ ಮಾಡಿದ್ದೇನೆ: ಯುವಕನೊಬ್ಬನ ಕಿರುಕುಳವನ್ನು ಬಿಚ್ಚಿಟ್ಟ ನಿತ್ಯಾ!​

    ಡಾಲರ್​ ಎದುರು ರೂಪಾಯಿ ಕುಸಿತ: 8 ವರ್ಷಗಳಲ್ಲಿ ಮೋದಿ ಒಮ್ಮೆಯೂ ಮಾತಾಡಿಲ್ಲ ಎಂದು ಕಾಂಗ್ರೆಸ್ ಟೀಕೆ

    ಕೇಂದ್ರದ ವಿರುದ್ಧ ರಾಷ್ಟ್ರವ್ಯಾಪಿ ಕಾಂಗ್ರೆಸ್​ ಪ್ರತಿಭಟನೆ: ರಾಹುಲ್​ ಸೇರಿದಂತೆ ಅನೇಕ ಕಾಂಗ್ರೆಸ್​ ನಾಯಕರ ಬಂಧನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts