More

    ರಸ್ತೆ ಗುಂಡಿಗೆ ಬಿದ್ದು ಬಿಜೆಪಿ ಮುಖಂಡನ ಸಾವು: ರಸ್ತೆ ತಡೆದು ಗ್ರಾಮಸ್ಥರ ಪ್ರತಿಭಟನೆ

    ಬೆಂಗಳೂರು: ರಸ್ತೆ ಗುಂಡಿಗೆ ಬಿದ್ದು ಬಿಜೆಪಿ ಮುಖಂಡ ಸಾವಿಗೀಡಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್-ಹೊಸೂರು ಮುಖ್ಯ ರಸ್ತೆಯಲ್ಲಿ ನಡೆದಿದೆ.

    ಸಬ್ ಮಂಗಲ ನಿವಾಸಿ ಮಾದೇಶ್ (50) ಮೃತ ವ್ಯಕ್ತಿ. ಈತ ಬಿಜೆಪಿ ಪಕ್ಷದ ಮುಖಂಡ. ರಸ್ತೆ ಕಾಮಗಾರಿಗೆ ಗುತ್ತಿಗೆ ಪಡೆದಿದ್ದ ಗುತ್ತಿಗೆದಾರ ರಸ್ತೆಯಲ್ಲಿನ ಮರ ತೆರವು ಮಾಡಲು ಹೋಗಿ ಗುಂಡಿ ತೆಗೆದು ಹಾಗೆ ಬಿಟ್ಟಿದ್ದ. ಇದೀಗ ರಸ್ತೆಯಲ್ಲಿರುವ ಅದೇ ಹೊಂಡಕ್ಕೆ ಬಿದ್ದು ಮಾದೇಶ್​ ಮೃತಪಟ್ಟಿದ್ದಾರೆ.

    ಕಳೆದ ರಾತ್ರಿ ದ್ವಿಚಕ್ರ ವಾಹನದಲ್ಲಿ ಮನೆಗೆ ಹೋಗುವಾಗ ಅಪಘಾತ ಸಂಭವಿಸಿದೆ. ಬಿಜೆಪಿ ಮುಖಂಡನ ಸಾವಿನ ಬೆನ್ನಲ್ಲೇ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ಕೈಗೊಂಡಿದ್ದಾರೆ. ಇದೇ ರಸ್ತೆಯಲ್ಲಿ ಕಾಮಗಾರಿ ಪ್ರಾರಂಭ ಆದಾಗಿಂದ 8ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ. ಪದೇಪದೆ ದೂರು ನೀಡಿದರು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತಲೆಕೆಡಿಸಿಕೊಂಡಿಲ್ಲ. ಟೆಂಡರ್​ದಾರ ಸ್ಥಳಕ್ಕೆ ಬರಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ.

    ಘಟನಾ ಸ್ಥಳಕ್ಕೆ ತಹಸಿಲ್ದಾರ್ ದಿನೇಶ್ ಆಗಮಿಸಿದ್ದು, ಪೊಲೀಸರ ಜತೆಗೂಡಿ ಪರಿಸ್ಥಿತಿಯನ್ನು ನಿಯಂತ್ರಿಸುತ್ತಿದ್ದಾರೆ. (ದಿಗ್ವಿಜಯ ನ್ಯೂಸ್​)

    1 ರಿಂದ 5ನೇ ತರಗತಿ ಪುನಾರಂಭ ಯಾವಾಗ? ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದು ಹೀಗೆ…​

    ಗೃಹ ಇಲಾಖೆಯಲ್ಲಿ ನೌಕರಿ ಆಮಿಷ: 55 ಜನರಿಂದ 1.62 ಕೋಟಿ ವಸೂಲಿ ಮಾಡಿ ವಂಚಿಸಿದವರ ಬಂಧನ..!

    ರಾಯಚೂರಲ್ಲಿ ನವವಿವಾಹಿತೆ ಸೇರಿ ಮೂವರ ಕೊಲೆ! ನಿನ್ನೆ ರಾತ್ರಿ ಮನೆಗೆ ಬಂದ ಆತನಿಂದಲೇ ನಡೆಯಿತು ಘೋರ ಕತ್ಯ

    ಡಿವೋರ್ಸ್​ ವಿಚಾರವಾಗಿ ಕೊನೆಗೂ ಮೌನ ಮುರಿದ ಸಮಂತಾ: ಆದ್ರೆ ಸೌತ್​ ಬ್ಯೂಟಿ ಹೇಳಿಕೆಯಿಂದ ಫ್ಯಾನ್ಸ್​ ಕನ್ಫ್ಯೂಸ್​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts