ಬೆಂಗಳೂರು: ಕುಖ್ಯಾತ ಬೈಕ್ ಕಳ್ಳರನ್ನು ಬೊಮ್ಮನಹಳ್ಳಿ ಪೊಲೀಸರು ಬಂಧಿಸಿದ್ದು, ಬರೋಬ್ಬರಿ 26 ಬೈಕ್ಗಳನ್ನು ಖದೀಮರ ಗ್ಯಾಂಗ್ನಿಂದ ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ತಮಿಳುನಾಡು ಮೂಲದ ನೆಡುಚೆಲಿಯನ್, ತಿರುಪತಿ ಹಾಗೂ ವಲ್ಲರಸು ಎಂದು ಗುರುತಿಸಲಾಗಿದೆ. ಈ ಖದೀಮರು ಡಿಯೋ ಬೈಕ್ಗಳನ್ನೆ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದರು.
ತಮಿಳುನಾಡಿನಿಂದ ಬಸ್ನಲ್ಲಿ ಬರುತ್ತಿದ್ದ ಆರೋಪಿಗಳು, ರಾತ್ರಿ ಹೊತ್ತು ರಸ್ತೆಗಳಲ್ಲಿ ಒಂಟಿಯಾಗಿ ಪಾರ್ಕ್ ಮಾಡಿದ್ದ ಬೈಕ್ಗಳನ್ನು ಟಾರ್ಗೆಟ್ ಮಾಡುತ್ತಿದ್ದರು. ಓರ್ವ ಬೈಕ್ ಹತ್ತಿರ ಬಂದು ಲಾಕ್ ಮುರಿದು ಇನ್ನೊಬ್ಬನಿಗೆ ನಿರ್ದೇಶನ ನೀಡುತ್ತಿದ್ದ. ಮತ್ತೊಬ್ಬ ಸ್ವಲ್ಪ ದೂರದಲ್ಲಿ ನಿಂತು ಸಿಗ್ನಲ್ ಕೊಡುತ್ತಿದ್ದ. ಇನ್ನೊಬ್ಬ ಇನ್ನೂ ಸ್ವಲ್ಪ ದೂರದಲ್ಲಿ ನಿಂತು ಯಾರಾದರೂ ಬರ್ತಿದ್ದಾರಾ ಅಂತಾ ನೋಡಿಕೊಳ್ತಿದ್ದ. ಬಳಿಕ ಬೈಕ್ ಕದ್ದು, ಅದೇ ಬೈಕ್ನಲ್ಲಿ ರಾತ್ರೊರಾತ್ರಿ ತಮಿಳುನಾಡಿಗೆ ಪರಾರಿಯಾಗುತ್ತಿದ್ದರು.
ಕದ್ದ ಬೈಕ್ ಅನ್ನು ತಮಿಳುನಾಡಿನಲ್ಲಿ 10 ರಿಂದ 15 ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು. ಇದೇ ರೀತಿ ಬೈಕ್ ಕದ್ದು ತಮಿಳುನಾಡಿತ್ತ ಆರೋಪಿಗಳು ತೆರಳುತ್ತಿದ್ದಾಗ, ಬೀಟ್ ಪೊಲೀಸರನ್ನು ನೋಡಿ ಹೆದರಿ ಬೈಕ್ ಯೂಟರ್ನ್ ತೆಗೆದುಕೊಳ್ಳುತ್ತಿದ್ದರು. ಇದರಿಂದ ಅನುಮಾಗೊಂಡು ಅವರನ್ನು ಹಿಂಬಾಲಿಸಿ ಹಿಡಿದು ವಿಚಾರಣೆ ಮಾಡಿದಾಗ ಖದೀಮರ ಕೈಚಳಕ ಬಯಲಿಗೆ ಬಂದಿದೆ. (ದಿಗ್ವಿಜಯ ನ್ಯೂಸ್)
#BBK9: ಬಿಗ್ಬಾಸ್ ಸೀಸನ್ 9 ನಡೆಸಿಕೊಡಲು ಕಿಚ್ಚ ಸುದೀಪ್ ಪಡೆದ ಸಂಭಾವನೆ ಇಷ್ಟೊಂದಾ?
ಡಿಜಿಟಲ್ ಗೀಳಿನಿಂದ ಮಕ್ಕಳಲ್ಲಿ ದೃಷ್ಟಿದೋಷ; ಕೋವಿಡ್ ಪರಿಣಾಮ ಮಕ್ಕಳಲ್ಲಿ ಹೆಚ್ಚುತ್ತಿದೆ ಕಣ್ಣಿನ ಸಮಸ್ಯೆ
ಮಿಲಿಂದ್ ಜತೆಗೆ ರಾಶೆಲ್: ಸತ್ಯಪ್ರಕಾಶ್ ನಿರ್ಮಾಣದ ಹೊಸ ಚಿತ್ರದಲ್ಲಿ ನಟನೆ