ಶ್ರೀಕಾಕುಳಂ: ಓರ್ವ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ನಾಲ್ವರು ಸಶಸ್ತ್ರ ಮೀಸಲು ಪೊಲೀಸ್ ಸಿಬ್ಬಂದಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಪಲಸಾ ಬಳಿಯಿರುವ ಹೆದ್ದಾರಿ-16ರಲ್ಲಿ ಸೋಮವಾರ ನಡೆದಿದೆ.
ಪೊಲೀಸ್ ಜೀಪ್ ತಿರುವು ತೆಗೆದುಕೊಳ್ಳುವ ವೇಳೆ ಲಾರಿಯೊಂದು ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಜೆ. ಕೃಷ್ಣುಡು (ಎಆರ್-ಎಸ್ಐ) (58), ವೈ ಬಾಬು ರಾವ್ (53), ಟಿ. ಆಂಟೋನಿ (50) (ಹೆಡ್ ಕಾನ್ಸ್ಟೇಬಲ್ಗಳು) ಮತ್ತು ಪಿ. ಜನಾರ್ಧನ ರಾವ್ (ಕಾನ್ಸ್ಟೇಬಲ್-ಚಾಲಕ) (47) ಎಂದು ಗುರುತಿಸಲಾಗಿದೆ.
ಘಟನೆ ಬಗ್ಗೆ ಪೊಲೀಸ್ ಮಹಾನಿರ್ದೇಶಕ ಡಿ. ಗೌತಮ್ ಸಾವಂಗ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಹುತಾತ್ಮ ಯೋಧನ ಪಾರ್ಥೀವ ಶರೀರವನ್ನು ಭೈರಿ ಸಾರಂಗಪುರಂನಲ್ಲಿರುವ ಅವರ ಕುಟುಂಬಕ್ಕೆ ಹಸ್ತಾಂತರಿಸಿ ಶ್ರೀಕಾಕುಳಂಗೆ ಹಿಂತಿರುಗುವಾಗ ನಾಲ್ವರು ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅಪಘಾತದ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ಆದಷ್ಟು ಬೇಗ ವರದಿ ಸಲ್ಲಿಸುವಂತೆ ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ಮತ್ತು ಶ್ರೀಕಾಕುಳಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಡಿಜಿಪಿ ಸೂಚನೆ ನೀಡಿದ್ದಾರೆ.
ನಾಲ್ವರು ಸಿಬ್ಬಂದಿಯನ್ನು ಕಳೆದುಕೊಂಡಿರುವುದು ಪೊಲೀಸ್ ಇಲಾಖೆಗೆ ನಷ್ಟವಾಗಿದೆ ಎಂದು ಡಿಜಿಪಿ ಸಾವಂಗ್ ಹೇಳಿದ್ದಾರೆ. ಮೃತರ ಕುಟುಂಬದ ನೆರವಿಗೆ ಇಲಾಖೆ ನಿಲ್ಲಲಿದೆ ಎಂದು ಅಭಯ ನೀಡಿದ್ದು, ಆಂಧ್ರ ಸಿಎಂ ವೈ.ಎಸ್. ಜಗನ್ ಮೋಹನ್ ರೆಡ್ಡಿ ಸಹ ಮೃತರ ಆತ್ಮಕ್ಕೆ ಶಾಂತಿ ಕೋರಿದ್ದು, ಅವರ ಕುಟುಂಬಗಳಿಗೆ ಸಾಂತ್ವಾನ ಹೇಳಿದ್ದಾರೆ. (ಏಜೆನ್ಸೀಸ್)
ಮಾದಕ ಜಾಲದಲ್ಲಿ ಸ್ಯಾಂಡಲ್ವುಡ್ ನಂಟು ಪ್ರಕರಣ: ನಟಿ ರಾಗಿಣಿ, ಸಂಜನಾ ಸೇರಿ ಹಲವರ ಡ್ರಗ್ಸ್ ಸೇವನೆ ಖಚಿತ
ಸ್ಥಳೀಯ ಹೋರಾಟಗಾರರ ಗುಂಡೇಟಿಗೆ ತಾಲಿಬಾನ್ ಜಿಲ್ಲಾ ಮುಖ್ಯಸ್ಥ ಸೇರಿ 50 ಉಗ್ರರು ಫಿನಿಶ್..!
ಮಕ್ಕಳಿಗೆ ಮೂರನೇ ಅಲೆ ಅಪಾಯ ಆತಂಕ; ಎನ್ಐಡಿಎಂ ವರದಿ, ಎಚ್ಚರಿಕೆ ಅಕ್ಟೋಬರ್ನಲ್ಲಿ ಉತ್ತುಂಗದ ಸಾಧ್ಯತೆ