ಚಾಮರಾಜನಗರ: ಹುಟ್ಟುಹಬ್ಬದ ಆಚರಣೆ ಬಳಿಕ ಉಳಿದಿದ್ದ ತಂಗಳು ಬಿರಿಯಾನಿ ತಿಂದು 25 ಮಂದಿ ಅಸ್ವಸ್ಥಗೊಂಡಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿ ಗ್ರಾಮದಲ್ಲಿ ನಡೆದಿದೆ.
ಜುಲೈ 18 ರಂದು ಅರೇಪಾಳ್ಯ ಗ್ರಾಮದಲ್ಲಿ ಸಂತೋಷ್ ಎಂಬುವವರು ತಮ್ಮ ಮಗನ ಹುಟ್ಟುಹಬ್ಬಕ್ಕೆ ಚಿಕನ್ ಬಿರಿಯಾನಿ ಮಾಡಿಸಿ, ಸ್ನೇಹಿತರು ಹಾಗೂ ಹಿತೈಷಿಗಳಿಗೆ ಆತಿಥ್ಯ ನೀಡಿದ್ದರು. ಮರುದಿನ ಬೆಳಗ್ಗೆ ಸಂತೋಷ್ ಅವರ ಜಮೀನಿಗೆ ಕಬ್ಬು ಕಟಾವಿಗೆ ಬಂದ ಕೂಲಿ ಕಾರ್ಮಿಕರಿಗೆ ಉಳಿದಿದ್ದ ತಂಗಳು ಬಿರಿಯಾನಿ ನೀಡಲಾಗಿತ್ತು. ಅದನ್ನು ತಿಂದವರೆಲ್ಲರಿಗೂ ಸಂಜೆಯಾಗುತ್ತಿದಂತೆ ವಾಂತಿ-ಭೇದಿ ಶುರುವಾಗಿದೆ.
ಸದ್ಯ ಎಲ್ಲರೂ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ವಿಚಾರಣೆಯನ್ನು ನಡೆಸಿದ್ದಾರೆ. ಈ ವಿಚಾರ ತಿಳಿದು ಆಸ್ಪತ್ರೆಗೆ ಧಾವಿಸಿದ ಶಾಸಕ ಎನ್.ಮಹೇಶ್ ಎಲ್ಲರ ಆರೋಗ್ಯವನ್ನು ವಿಚಾರಿಸಿದ್ದಾರೆ. (ದಿಗ್ವಿಜಯ ನ್ಯೂಸ್)
ಪರೀಕ್ಷೆ ಬರೆಯಲು ಒಳಉಡುಪು ಬಿಚ್ಚಿಸಿದ ಪ್ರಕರಣ: ಇಡೀ ಘಟನೆಯನ್ನು ಮಾಧ್ಯಮ ಮುಂದೆ ಬಿಚ್ಚಿಟ್ಟ ವಿದ್ಯಾರ್ಥಿನಿ
ಜಿಎಸ್ಟಿಗೆ ಉದ್ಯಮಿಗಳ ಫುಲ್ ಮಾರ್ಕ್ಸ್: ತೆರಿಗೆ ಪದ್ಧತಿಗೆ ಶೇ.45 ಜನರ ಬೆಂಬಲ, ಈ ವ್ಯವಸ್ಥೆ ಹಿಂದಿಗಿಂತಲೂ ಸುಲಭ