ಚಾಮರಾಜನಗರ ಆಕ್ಸಿಜನ್​ ದುರಂತ ಬೆನ್ನಲ್ಲೇ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಶಾಸಕ ಪುಟ್ಟರಂಗಶೆಟ್ಟಿ!

ಚಾಮರಾಜನಗರ: ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ನಡೆದ 24 ಕರೊನಾ ಸೋಂಕಿತರ ದುರಂತ ಸಾವಿನ ಘಟನೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಇದರ ಬೆನ್ನಲ್ಲೇ ಮಾಜಿ ಸಚಿವ ಹಾಗೂ ಕಾಂಗ್ರೆಸ್​ ನಾಯಕ ಪುಟ್ಟರಂಗಶೆಟ್ಟಿ ಸ್ಫೋಟಕ ಮಾಹಿತಿಯೊಂದನ್ನು ಬಿಚ್ಚಿಟ್ಟಿದ್ದಾರೆ. ಈಗಲೂ ಜಿಲ್ಲಾಸ್ಪತ್ರೆಯಲ್ಲಿ 50 ಜನ‌ ತುಂಬಾ ಗಂಭೀರ ಸ್ಥಿತಿಯಲ್ಲಿದ್ದಾರಂತೆ. ಆಸ್ಪತ್ರೆಯಲ್ಲಿ ಒಟ್ಟು 170 ಕರೊನಾ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ‌ 15 ದಿನಗಳಿಂದ 50 ರೋಗಿಗಳು ಗಂಭೀರ ಸ್ಥಿತಿಯಲ್ಲಿ ಒದ್ದಾಡುತ್ತಿದ್ದಾರೆ. ಯಾವ ಸಮಯದಲ್ಲಿ ಏನಾಗಲಿದೆ ಎಂಬುದನ್ನ‌ ಹೇಳುವುದಕ್ಕೂ ಸಾಧ್ಯವಾಗುತ್ತಿಲ್ಲ ಎಂದು ಪುಟ್ಟರಂಗಶೆಟ್ಟಿ ಮಾಹಿತಿ ನೀಡಿದರು. … Continue reading ಚಾಮರಾಜನಗರ ಆಕ್ಸಿಜನ್​ ದುರಂತ ಬೆನ್ನಲ್ಲೇ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಶಾಸಕ ಪುಟ್ಟರಂಗಶೆಟ್ಟಿ!