ಚಿಕ್ಕಬಳ್ಳಾಪುರ: ಮಕ್ಕಳು ಚೆನ್ನಾಗಿ ಓದಲಿ ಅಂತ ಅಪ್ಪ-ಅಮ್ಮ ಕಾಲೇಜಿಗೆ ಕಳುಹಿಸಿದರೆ, ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಬೈಕ್ಗಳನ್ನು ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದಾರೆ. ಶೋಕಿ ಮಾಡುವುದಕ್ಕೆ ಅಂತ ದುಬಾರಿ ಬೈಕ್ಗಳನ್ನ ಕಳ್ಳತನ ಮಾಡುತ್ತಿದ್ದ ವಿದ್ಯಾರ್ಥಿಗಳು ಪೊಲೀಸರ ಅತಿಥಿಗಳಾಗಿ ಜೈಲು ಕಂಬಿ ಎಣಿಸುವಂತಾಗಿದೆ.
ಬಂಧಿತ ವಿದ್ಯಾರ್ಥಿಗಳ ಹೆಸರು ಪವನ್ ಹಾಗೂ ಸತೀಶ್ ಯಾದವ್. ಚಿಕ್ಕಬಳ್ಳಾಪುರ ಮೂಲದ ಪವನ್ ಹಾಗೂ ಆಂಧ್ರಪ್ರದೇಶದ ಮೂಲದ ಸತೀಶ್ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು. ಚಿಕ್ಕಬಳ್ಳಾಪುರ-ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಡಿಯಲ್ಲಿರುವ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿ.ಟೆಕ್ ಓದುತ್ತಿದ್ದರು. ಅದ್ಯಾಕೋ ಏನೋ ಪವನ್, ಅರ್ಧಕ್ಕೆ ಡ್ರಾಪ್ ಔಟ್ ಆದರೆ, ಇತ್ತ ಸತೀಶ್ ಬಿ.ಟೆಕ್ ಮುಂದುವರಿಸಿದ್ದ. ಆಪ್ತ ಸ್ನೇಹಿತರಾಗಿದ್ದ ಇಬ್ಬರು ಶೋಕಿಗಾಗಿ ಹಿಡಿದಿದ್ದು ಅಡ್ಡದಾರಿಯನ್ನ. ಬೈಕ್ಗಳನ್ನು ಕದಿಯೋ ಕೆಲಸಕ್ಕೆ ಇಳಿದ ಸ್ನೇಹಿತರು ಕದ್ದ ಬೈಕ್ ಒಂದನ್ನು ಆಂಧ್ರಕ್ಕೆ ತೆಗೆದುಕೊಂಡು ಹೋಗುವಾಗ ಬಾಗೇಪಲ್ಲಿ ಟೋಲ್ ಪ್ಲಾಜಾ ಬಳಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಇಬ್ಬರು ಸೇರಿ ಕಳ್ಳತನ ಮಾಡಿದ್ದ 12 ರಾಯಲ್ ಎನ್ಫೀಲ್ಡ್ ಬೈಕ್, 2 ಡ್ಯೂಕ್, ಒಂದು ಪಲ್ಸಾರ್ ಎನ್ ಎಸ್, ಒಂದು ಡ್ಯೂಕ್ ಬೈಕ್ಗಳನ್ನು ಬಾಗೇಪಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬೈಕ್ಗಳನ್ನು ಕಳವು ಮಾಡಿದ್ದ ಈ ಇಬ್ಬರು ಆಂಧ್ರಪ್ರದೇಶದಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡಿ ಅದರಿಂದ ಬರುತ್ತಿದ್ದ ಹಣದಿಂದ ಶೋಕಿ ಮಾಡುತ್ತಿದ್ದರು.
ಕರ್ನಾಟಕದಲ್ಲಿ ಬೈಕ್ಗಳನ್ನ ಕದ್ದು ಆಂಧ್ರ ಪ್ರದೇಶದಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡಿದರೆ ಯಾರಿಗೂ ಗೊತ್ತಾಗುವುದಿಲ್ಲ. ಅದರಿಂದ ಬಂದ ಹಣದಿಂದ ಬೆಂಗಳೂರಲ್ಲಿ ಶೋಕಿ ಮಾಡಬಹುದು ಅಂದುಕೊಂಡು ಬೈಕ್ ಒಂದನ್ನು ಕದ್ದುಕೊಂದು ಆಂಧ್ರಗೆ ಹೋಗುವಾಗ ಪೊಲೀಸರಿಗೆ ಕೈಗೆ ಸಿಕ್ಕಿಬಿದ್ದಿದ್ದಾರೆ. ಚೆನ್ನಾಗಿ ಓದಿ ಇಂಜಿನಿಯರಿಂಗ್ ಮುಗಿಸಿ, ಕೆಲಸಕ್ಕೆ ಸೇರಿ ದುಡ್ಡು ಮಾಡೋದು ಬಿಟ್ಟು ಈಗ ಅಡ್ಡದಾರಿ ಮೂಲಕ ದುಡ್ಡು ಮಾಡಿ ಶೋಕಿ ಮಾಡೋಕೆ ಮುಂದಾದ ಈ ಇಬ್ಬರು ಈಗ ಜೈಲುಪಾಲಾಗಿದ್ದಾರೆ. (ದಿಗ್ವಿಜಯ ನ್ಯೂಸ್)
VIDEO| ಟಾಲಿವುಡ್ ಐಟಂ ಸಾಂಗ್ಗೆ ಬೋಲ್ಡ್ ಆಗಿ ಸೊಂಟ ಬಳುಕಿಸಿದ ಚಾಹಲ್ ಪತ್ನಿ ಧನಶ್ರೀ: ವಿಡಿಯೋ ವೈರಲ್