ಮನೆಯಿಂದ ತಂದೆಯನ್ನು ಹೊರಹಾಕಿದ ಮಗನಿಗೆ ತಕ್ಕಶಾಸ್ತಿ: ಮಗನನ್ನೇ ಹೊರಹಾಕುವಂತೆ ಕೋರ್ಟ್​ ಆದೇಶ

ಚಿಕ್ಕಬಳ್ಳಾಪುರ: ಮನೆಯಿಂದ ತಂದೆಯನ್ನು ಹೊರಹಾಕಿದ್ದ‌ ಮಗನಿಗೆ ನ್ಯಾಯಾಲಯ ತಕ್ಕಶಾಸ್ತಿ ಮಾಡಿದೆ. ಮನೆಯಿಂದ ಮಗನನ್ನೇ ಹೊರಹಾಕುವಂತೆ ಕೋರ್ಟ್​ ಪೊಲೀಸರಿಗೆ ಸೂಚನೆ ನೀಡಿದೆ. ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರದ ಅಂಜನಿ ಬಡಾವಣೆಯಲ್ಲಿ ನಡೆದಿದೆ. ನಿವೃತ್ತ ಪ್ರಾಧ್ಯಾಪಕ ಮುನಿಸ್ವಾಮಿ ಅವರನ್ನು ಮಗ ಎಂ.ಸುಭಾಷ್ ಮತ್ತು ಸೊಸೆ ಮಂಜುಳಾ ಬಲವಂತಾಗಿ ಮನೆಯಿಂದ ಹೊರಹಾಕಿದ್ದರು. ಅಂಜನಿ ಬಡಾವಣೆಯ ಮನೆಯನ್ನು ಮುನಿಸ್ವಾಮಿ ಸ್ವಯಾರ್ಜಿತವಾಗಿ ಖರೀದಿಸಿದ್ದರು. ಮಗ ಮನೆಯಿಂದ ಹೊರ ಹಾಕಿದ್ದನ್ನು ಪ್ರಶ್ನಿಸಿ ಚಿಕ್ಕಬಳ್ಳಾಪುರದ ಎಸಿ ಕೋರ್ಟ್ ಮತ್ತು ಹೈಕೋರ್ಟ್​ಗಳಲ್ಲಿ ಮುನಿಸ್ವಾಮಿ ಅರ್ಜಿ ಸಲ್ಲಿಸಿದ್ದರು. … Continue reading ಮನೆಯಿಂದ ತಂದೆಯನ್ನು ಹೊರಹಾಕಿದ ಮಗನಿಗೆ ತಕ್ಕಶಾಸ್ತಿ: ಮಗನನ್ನೇ ಹೊರಹಾಕುವಂತೆ ಕೋರ್ಟ್​ ಆದೇಶ