ವಿಶಾಖಪಟ್ಟಣ: ನೀರಿನ ಹಳ್ಳ ದಾಟುವಾಗ ಆಕಸ್ಮಿಕವಾಗಿ ಅದರೊಳಗೆ ಬಿದ್ದು ನಾಲ್ವರು ಮಕ್ಕಳು ದುರಂತ ಸಾವಿಗೀಡಾಗಿರುವ ಘಟನೆ ವಿಶಾಖಪಟ್ಟಣ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ವಿ. ಮಡುಗುಲಾ ಮಂಡಲ್ ಜಮ್ಮದೇವಿಪೇಟಾ ಗ್ರಾಮದಲ್ಲಿ ಘಟನೆ ನಡೆದಿದೆ. ಮೃತ ಮಕ್ಕಳನ್ನು ಜಾಹ್ನವಿ (11) ಝಾನ್ಸಿ (8), ಶರ್ಮಿಳಾ (7) ಮತ್ತು ಮಹೀಂದರ್ (7) ಎಂದು ಗುರುತಿಸಲಾಗಿದೆ.
ಸೋಮವಾರ ಮಧ್ಯಾಹ್ನ ಪಾಲಕರು ಬಟ್ಟೆ ಹೊಗೆಯಲು ಹೋಗಿದ್ದರು. ಮಕ್ಕಳು ಸಹ ಜತೆಯಲ್ಲಿ ತೆರಳಿದ್ದರು. ಈ ವೇಳೆ ನೀರಿನ ಹಳ್ಳವನ್ನು ದಾಟುವಾಗ ಆಕಸ್ಮಿಕವಾಗಿ ಹಳ್ಳದ ಒಳಗೆ ಬಿದ್ದು ನೀರಿನಲ್ಲಿ ಮುಳುಗಿ ಮಕ್ಕಳು ಮೃತಪಟ್ಟಿದ್ದಾರೆ. ಮಕ್ಕಳ ಸಾವಿನಿಂದ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. (ಏಜೆನ್ಸೀಸ್)
ಮುಂದಿನ ಸಿಎಂ ಆಗೋರು ನಮ್ಮ ಸಮುದಾಯದ ನಾಯಕ; ಕೇಂದ್ರದಿಂದ ಪಕ್ಕಾ ಮಾಹಿತಿ ಬಂದಿದೆ ಅಂದ್ರು ಸ್ವಾಮೀಜಿ!
ಕುಂದ್ರಾರ ವಾಟ್ಸ್ಆ್ಯಪ್ನಲ್ಲಿ ಕಾಣಿಸಿಕೊಂಡ ನಟಿಯೀಗ ಸಂಕಷ್ಟದಲ್ಲಿ- ಅಯ್ಯೋ ಬಿಟ್ಬಿಡಿ ಅಂತೀರೋ ಸೈನಿ