ಕೊಪ್ಪಳ: ಸಂಘಪರಿವಾರದ ಮೂಲ ಎಲ್ಲರಿಗೂ ಗೊತ್ತಿದೆ. ಆದರೆ, ಕಾಂಗ್ರೆಸ್ ಮೂಲ ಇಟಲಿ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ ಟಾಂಗ್ ನೀಡಿದರು.
ನಗರದಲ್ಲಿ ಶನಿವಾರ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದರು. ಸಿದ್ದರಾಮಯ್ಯ ಐದು ವರ್ಷದ ತಮ್ಮ ಅಧಿಕಾರದಲ್ಲಿ ಏನು ಮಾಡಿದ್ದಾರೆಂದು ಕಿಡಿಕಾರಿದರು.
ಹಿಜಾಬ್ ವಿವಾದದ ಹಿಂದೆ ಕಾಂಗ್ರೆಸ್ ಪಿತೂರಿ ಇದೆ. ನಾವು ಹಿಜಾಬ್ ನೋಡುತ್ತಿಲ್ಲ. ಅದರ ಹಿಂದಿರುವ ಪಿತೂರಿ ಬಗ್ಗೆ ಮಾತನಾಡುತ್ತಿದ್ದೇವೆ. ಈ ದೇಶದ ಕಾನೂನು ಉಲ್ಲಂಘನೆ ಮಾಡುವವರನ್ನು ಗಮನಿಸುತ್ತಿದ್ದೇವೆ. ಇವತ್ತಲ್ಲ ನಾಳೆ ಅವರು ಇಡೀ ದೇಶದ ಕಾನೂನು ಉಲ್ಲಂಘನೆ ಮಾಡುತ್ತೇವೆ ಎನ್ನುತ್ತಾರೆ. ಅದನ್ನೆಲ್ಲ ಒಪ್ಪಲಾಗಲ್ಲ. ಕೆಲವು ರಾಜಕೀಯ ಪಕ್ಷಗಳು ವೋಟ್ ಬ್ಯಾಂಕ್ ಗೆ ಅಂಥವರನ್ನು ಬೆಂಬಲಿಸುತ್ತಿದ್ದಾರೆಂದು ಕಾಂಗ್ರೆಸ್ ವಿರುದ್ಧ ಪರೋಕ್ಷ ಆರೋಪ ಮಾಡಿದರು.
ದೇಶದ ಇತಿಹಾಸವನ್ನು ಮಕ್ಕಳಿಗೆ ತಿಳಿಸೋದರಲ್ಲಿ ಮೊದಲಿನಿಂದಲೂ ತಪ್ಪಾಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ದೇಶದ ಎಲ್ಲ ಗ್ರಾಮಗಳಿಂದ ಜನರು ಭಾಗಿಯಾಗಿದ್ದರು. ಇತಿಹಾಸದ ಮೂಲಕ ಅದನ್ನು ತಿಳಿಸುವಲ್ಲಿ ವಿಫಲವಾಗಿದ್ದೇವೆ. ಹೀಗಾಗಿ ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಅದನ್ನು ತಿಳಿಸುತ್ತಿದ್ದೇವೆ ಎಂದರು.
ಪಠ್ಯ ಪುಸ್ತಕ ರಚನೆ ಸಂಬಂಧ ಅನಗತ್ಯ ವಿವಾದ ಎಬ್ಬಿಸಲಾಗುತ್ತಿದೆ. ರಾಷ್ಟ್ರೀಯತೆ, ಹಿಂದುತ್ವ ಸಹಿಸಕೊಳ್ಳದವರು ವಿವಾದ ಮಾಡುತ್ತಿದ್ದಾರೆ. ಟೀಕಿಸಲು ಏನೂ ಸಿಗದಿದ್ದಾಗ ಜಾತಿ ಬಗ್ಗೆ ಮಾತನಾಡುತ್ತಾರೆ. ಬ್ರಿಟಿಷರ ಕಾಲದಿಂದ ಇದು ನಡೆದುಕೊಂಡು ಬಂದಿದೆ. ದೇಶದ ಜನರಿಗೆ ಯಾವುದು ನಿಜ, ಯಾವುದು ಸುಳ್ಳು ಅನ್ನೋದು ಗೊತ್ತಿದೆ. ಮೊದಲು ಟಿಪ್ಪು, ಭಗತ್ ಸಿಂಗ್, ನಾರಾಯಣ ಗುರು, ಬಸವಣ್ಣವರನ್ಮು ಪಠ್ಯದಿಂದ ತಗೆದು ಹಾಕಿದರೆಂದು ಸುಳ್ಳು ಹೇಳಿದರು. ಈ ಮೂಲಕ ಹಿಂದುಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಬ್ರಿಟಿಷರಿಂದ ಅಧಿಕಾರ ವಹಸಿಕೊಂಡ ದಿನದಿಂದ ಕಾಂಗ್ರೆಸ್ ಮಾಡಿದ್ದು ಇದನ್ನೆ. ಹಿಂದಿನ ಸರ್ಕಾರ ಮಕ್ಕಳನ್ನು ಒಡೆಯೋ ಕೆಲಸ ಮಾಡಿದ್ದು ಎಲ್ಲರಿಗೂ ಗೊತ್ತಿದೆ ಎಂದು ಕೈ ನಾಯಕರ ವಿರಿದ್ಧ ವಾಗ್ದಾಳಿ ನಡೆಸಿದರು.
ರಾತ್ರಿ ಹೊತ್ತು ನಟಿಯೊಂದಿಗೆ ಕೆಟ್ಟದಾಗಿ ನಡೆದುಕೊಂಡ ಪೊಲೀಸ್ ಅಧಿಕಾರಿಗೆ ಎದುರಾಯ್ತು ಸಂಕಷ್ಟ!
ನದಿಯಲ್ಲಿ ಬೇಸಿಗೆಯ ಬಿಸಿ ತಣಿಸುವಾಗ ದಿಢೀರ್ ಪ್ರತ್ಯಕ್ಷವಾದ ಭಾರೀ ಗಾತ್ರದ ಹಾವು: ಮುಂದೇನಾಯ್ತು ನೀವೇ ನೋಡಿ
ಪತ್ನಿ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಮೈಸೂರಿನ ಕ್ವಾಟ್ರಸ್ನಲ್ಲೇ ನೇಣಿಗೆ ಶರಣಾದ ಪೊಲೀಸ್ ಪೇದೆ