More

    ಅಂಗಡಿಯ ಬಾಗಿಲು ಮುಚ್ಚದೇ ಟೀ ಕುಡಿಯಲು ಹೋಗಿದ್ದ ಮಾಲೀಕನಿಗೆ ಕಾದಿತ್ತು ಬಿಗ್​ ಶಾಕ್​!

    ದಾವಣಗೆರೆ: ಇಲ್ಲೆ ಹತ್ತಿದಲ್ಲೇ ಇದೆ ಅಂತಾ ಅಂಗಡಿ ಬಾಗಿಲು ಮುಚ್ಚದೇ ಹೊರಗಡೆ ಹೋದರೆ ಏನಾಗಲಿದೆ ಎಂಬುದಕ್ಕೆ ದಾವಣಗೆರೆಯಲ್ಲಿ ನಡೆದ ಈ ಒಂದು ಘಟನೆ ತಾಜಾ ಉದಾಹರಣೆ ಆಗಲಿದೆ.

    ಮಾಲೀಕ ಟೀ ಕುಡಿಯಲು ಹೋಗಿದ್ದ ಸಮಯದಲ್ಲಿ ಅಂಗಡಿಯಲ್ಲಿ ಯಾರೂ ಇಲ್ಲದಿದ್ದನ್ನು ಗಮನಿಸಿ, ಕ್ಯಾಶ್​ ಕೌಂಟರ್​ನಲ್ಲಿದ್ದ 10 ಸಾವಿರ ರೂಪಾಯಿ ಹಣವನ್ನು ಕದ್ದು ಕಳ್ಳ ಪರಾರಿಯಾಗಿದ್ದಾನೆ.

    ಈ ಘಟನೆ ದಾವಣಗೆರೆಯ ಹದಡಿ‌ ರಸ್ತೆಯಲ್ಲಿರುವ ಕಲ್ಲೇಶ್ವರ ಟೈಲ್ಸ್ ಶಾಪ್‌ನಲ್ಲಿ ನಡೆದಿದೆ. ಹಣ ಕಳುವು ಮಾಡಿದ ದೃಶ್ಯ ಸಿಸಿ‌‌ಟಿವಿ ಕ್ಯಾಮರಾದಲ್ಲಿ‌ ಸೆರೆಯಾಗಿದೆ. ಟೀ ಕುಡಿದು ಬಂದ ಅಂಗಡಿ ಮಾಲೀಕ ಕ್ಯಾಶ್​ ಕೌಂಟರ್​ ನೋಡಿದಾಗ ಹಣ ಇಲ್ಲದಿರುವುದನ್ನು ನೋಡಿ ಶಾಕ್​ ಆಗಿದ್ದಾರೆ.

    ಇದೀಗ ಅಂಗಡಿ ಮಾಲೀಕ ಪೊಲೀಸ್​ ಠಾಣೆಯ ಮೆಟ್ಟಿಲೇರಿದ್ದು, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಕಳ್ಳನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. (ದಿಗ್ವಿಜಯ ನ್ಯೂಸ್​​)

    ಮೈಮಾಟ ಪ್ರದರ್ಶಿಸಿದ ಮಾತ್ರಕ್ಕೆ ಕೆಟ್ಟ ಸಿನಿಮಾ ಉಳಿಯುವುದಿಲ್ಲ: ದೀಪಿಕಾ ಚಿತ್ರದ ವಿರುದ್ಧ ಕಂಗನಾ ಕೆಂಗಣ್ಣು

    VIDEO| ಚಲಿಸುವ ರೈಲಿನ ಕೆಳಗೆ ಸಿಲುಕಿದ್ದ ಬಾಲಕಿಯನ್ನು ರಕ್ಷಿಸಿದ ವ್ಯಕ್ತಿಗೆ ಮೆಚ್ಚುಗೆಯ ಮಹಾಪೂರ!

    ಆಧಾರ್​ ಬಳಕೆದಾರರೇ ಎಚ್ಚರ! ಈ ನಿಯಮಗಳನ್ನು ಉಲ್ಲಂಘಿಸಿದ್ರೆ 1 ಕೋಟಿ ರೂ. ದಂಡ ತೆರಬೇಕಾಗುತ್ತೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts