ದಾವಣಗೆರೆ: ಇಲ್ಲೆ ಹತ್ತಿದಲ್ಲೇ ಇದೆ ಅಂತಾ ಅಂಗಡಿ ಬಾಗಿಲು ಮುಚ್ಚದೇ ಹೊರಗಡೆ ಹೋದರೆ ಏನಾಗಲಿದೆ ಎಂಬುದಕ್ಕೆ ದಾವಣಗೆರೆಯಲ್ಲಿ ನಡೆದ ಈ ಒಂದು ಘಟನೆ ತಾಜಾ ಉದಾಹರಣೆ ಆಗಲಿದೆ.
ಮಾಲೀಕ ಟೀ ಕುಡಿಯಲು ಹೋಗಿದ್ದ ಸಮಯದಲ್ಲಿ ಅಂಗಡಿಯಲ್ಲಿ ಯಾರೂ ಇಲ್ಲದಿದ್ದನ್ನು ಗಮನಿಸಿ, ಕ್ಯಾಶ್ ಕೌಂಟರ್ನಲ್ಲಿದ್ದ 10 ಸಾವಿರ ರೂಪಾಯಿ ಹಣವನ್ನು ಕದ್ದು ಕಳ್ಳ ಪರಾರಿಯಾಗಿದ್ದಾನೆ.
ಈ ಘಟನೆ ದಾವಣಗೆರೆಯ ಹದಡಿ ರಸ್ತೆಯಲ್ಲಿರುವ ಕಲ್ಲೇಶ್ವರ ಟೈಲ್ಸ್ ಶಾಪ್ನಲ್ಲಿ ನಡೆದಿದೆ. ಹಣ ಕಳುವು ಮಾಡಿದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಟೀ ಕುಡಿದು ಬಂದ ಅಂಗಡಿ ಮಾಲೀಕ ಕ್ಯಾಶ್ ಕೌಂಟರ್ ನೋಡಿದಾಗ ಹಣ ಇಲ್ಲದಿರುವುದನ್ನು ನೋಡಿ ಶಾಕ್ ಆಗಿದ್ದಾರೆ.
ಇದೀಗ ಅಂಗಡಿ ಮಾಲೀಕ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಕಳ್ಳನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. (ದಿಗ್ವಿಜಯ ನ್ಯೂಸ್)
ಮೈಮಾಟ ಪ್ರದರ್ಶಿಸಿದ ಮಾತ್ರಕ್ಕೆ ಕೆಟ್ಟ ಸಿನಿಮಾ ಉಳಿಯುವುದಿಲ್ಲ: ದೀಪಿಕಾ ಚಿತ್ರದ ವಿರುದ್ಧ ಕಂಗನಾ ಕೆಂಗಣ್ಣು
VIDEO| ಚಲಿಸುವ ರೈಲಿನ ಕೆಳಗೆ ಸಿಲುಕಿದ್ದ ಬಾಲಕಿಯನ್ನು ರಕ್ಷಿಸಿದ ವ್ಯಕ್ತಿಗೆ ಮೆಚ್ಚುಗೆಯ ಮಹಾಪೂರ!
ಆಧಾರ್ ಬಳಕೆದಾರರೇ ಎಚ್ಚರ! ಈ ನಿಯಮಗಳನ್ನು ಉಲ್ಲಂಘಿಸಿದ್ರೆ 1 ಕೋಟಿ ರೂ. ದಂಡ ತೆರಬೇಕಾಗುತ್ತೆ!