ಧಾರವಾಡ: ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಅವರ ಚಿಕ್ಕಪ್ಪ ಶಿವಣ್ಣ ಬೆಲ್ಲದ ಅವರು ಮೃತಪಟ್ಟಿದ್ದಾರೆ.
ಬುಧವಾರ ತಡರಾತ್ರಿ ಧಾರವಾಡದ ಎಸ್ಪಿ ಕಚೇರಿ ಎದುರು ನಡೆದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಶಿವಣ್ಣ ಅವರನ್ನು ರಾತ್ರಿಯೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
ಶಿವಣ್ಣ ಅವರು ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಸಹೋದರರಾಗಿದ್ದರು. ವಿದ್ಯಾವರ್ಧಕ ಸಂಘದ ಹಿಂದಿನ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಲಿಂಗಾಯತ ಸಮಾಜದ ಮುಖಂಡರಾಗಿದ್ದ ಶಿವಣ್ಣ ಅವರ ಅಂತ್ಯಕ್ರಿಯೆ ಇಂದು ಅವರು ಸ್ವಗ್ರಾಮದಲ್ಲಿ ನಡೆಯಲಿದೆ. (ದಿಗ್ವಿಜಯ ನ್ಯೂಸ್)
ದೇವರ ಮೂರ್ತಿಗಾಗಿ ಜಾತ್ರೆಯಲ್ಲಿ ಬಡಿದಾಡಿಕೊಳ್ಳುವ ಜನ! ಕರ್ನಾಟಕದ ಗಡಿಯೊಲ್ಲೊಂದು ಭಯಾನಕ ಆಚರಣೆ
ಮಾವಿನ ಹಣ್ಣುಗಳನ್ನು ಕದ್ದು ಸಸ್ಪೆಂಡ್ ಆದ ಪೊಲೀಸ್ ಅಧಿಕಾರಿಯ ಹಿನ್ನೆಲೆ ತಿಳಿದು ಅಧಿಕಾರಿಗಳೇ ಶಾಕ್!
ರಾಜಕೀಯ ಪ್ರಹಸನ, ಎಲೆಕ್ಷನ್ನತ್ತ ಗಮನ: ಕಾಂಗ್ರೆಸ್ನ ಭಾರತ್ ಜೋಡೋ ಇಂದು ಮತ್ತೆ ಶುರು