More

    ಕಮಲಿ ಧಾರಾವಾಹಿಯ ನಿರ್ದೇಶಕ ಅರವಿಂದ್​ ಕೌಶಿಕ್​ ಬಂಧನ

    ಬೆಂಗಳೂರು: ಧಾರಾವಾಹಿ ನಿರ್ಮಾಪಕನಿಂದ ಹಣಪಡೆದ ವಂಚನೆ ಮಾಡಿರುವ ಆರೋಪದ ಮೇಲೆ ಕನ್ನಡದ ಖ್ಯಾತ ನಿರ್ದೇಶಕ ಅರವಿಂದ್​ ಕೌಶಿಕ್​ರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

    ಕಮಲಿ ಧಾರಾವಾಹಿಯ ನಿರ್ದೇಶಕ ಅರವಿಂದ್​ ಕೌಶಿಕ್​ ಬಂಧನ
    ನಿರ್ಮಾಪಕ ರೋಹಿತ್

    ಅರವಿಂದ್​ ಕೌಶಿಕ್​ ಅವರು ಕಿರುತೆರೆ ಹಾಗೂ ಬೆಳ್ಳಿತೆರೆ ಎರಡರಲ್ಲೂ ಹೆಸರು ಮಾಡಿದ್ದಾರೆ. ನಮ್ ಏರಿಯಾದಲ್ಲಿ ಒಂದಿನ,‌ ಹುಲಿರಾಯ ಹಾಗೂ ಶಾರ್ದೂಲ ಹೆಸರಿನಿ ಸಿನಿಮಾಗಳನ್ನು ಕೌಶಿಕ್​ ನಿರ್ದೇಶನ ಮಾಡಿದ್ದಾರೆ. ಕನ್ನಡ ಕಿರುತೆರೆಯಲ್ಲಿ ಮೂಡಿಬಂದ ಕಮಲಿ ಧಾರವಾಹಿಯನ್ನು ಕೂಡ ನಿರ್ದೇಶನ ಮಾಡಿದ್ದಾರೆ.

    ಆರೋಪ ಏನೆಂದರೆ, ಕಮಲಿ ಧಾರವಾಹಿ ನಿರ್ಮಾಣ ಮಾಡಲಿಕ್ಕೆ ನಿರ್ಮಾಪಕ ರೋಹಿತ್​ 73 ಲಕ್ಷ ರೂ. ಹಣ ಹೂಡಿಕೆ ಮಾಡಿದ್ದರಂತೆ. 2018 ರಲ್ಲಿ ಕಮಲಿ ಸೀರಿಯಲ್ ನಿರ್ಮಾಣಕ್ಕೆ ರೋಹಿತ್​ ಹಣ ಹೂಡಿಕೆ ಮಾಡಿದ್ದರಂತೆ. ಆದರೆ. ಧಾರವಾಹಿ ತೆರೆಕಂಡ ನಂತರ ಹಣ ಹಿಂತಿರುಗಿಸದೇ, ಲಾಭಾಂಶವನ್ನೂ ನೀಡದೇ ವಂಚನೆ ಮಾಡಿದ್ದಾರೆ ಎಂದು ಕೌಶಿಕ್​ ವಿರುದ್ಧ ರೋಹಿತ್​ ಆರೋಪ ಮಾಡಿದ್ದಾರೆ.

    ಈ ಸಂಬಂಧ ನಿರ್ಮಾಪಕ ರೋಹಿತ್ ವೈಯ್ಯಾಲಿಕಾವಲ್ ಠಾಣೆಗೆ ದೂರು ನೀಡಿದ್ದಾರೆ. ಅರವಿಂದ್ ಕೌಶಿಕ್ ವಿರುದ್ಧ 420 ಸೆಕ್ಷನ್​ ಅಡಿ ಪ್ರಕರಣ ದಾಖಲಾಗಿದ್ದು, ಸದ್ಯ ವೈಯ್ಯಾಲಿಕಾವಲ್ ಪೊಲೀಸರು ಅರವಿಂದ್ ಕೌಶಿಕ್​ರನ್ನು ಬಂಧಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

    ಪಿಎಸ್​ಐ ನೇಮಕಾತಿ ಹಗರಣ: 18 ದಿನದಿಂದ ತಲೆಮರೆಸಿಕೊಂಡಿದ್ದ ದಿವ್ಯಾ ಹಾಗರಗಿ ಕೊನೆಗೂ ಬಂಧನ

    ಯಾರ ಮೇಲೂ ಹಿಂದಿ ಹೇರುವುದಿಲ್ಲ…

    ಸಮಾನ ನಾಗರಿಕ ಸಂಹಿತೆ ಜಾರಿಗೆ ಕೇಂದ್ರ ಸರ್ಕಾರ ಒಲವು; 2024ರ ಲೋಕಸಭಾ ಚುನಾವಣೆಗೂ ಮೊದಲೇ ಅನುಷ್ಠಾನ ಸಾಧ್ಯತೆ  

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts