More

    ಭೀಕರ ಕಾರು ಅಪಘಾತದಲ್ಲಿ ಸಂಸದರ 22 ವರ್ಷದ ಪುತ್ರ ದುರಂತ ಸಾವು

    ಚೆನ್ನೈ: ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷದ ರಾಜ್ಯಸಭಾ ಸದಸ್ಯ ಎನ್​​.ಆರ್​. ಇಳಂಗೋವನ್ ಅವರ ಪುತ್ರ ರಾಕೇಶ್​ (22) ಗುರುವಾರ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ.

    ಸಂಸದರ ಪುತ್ರ ಪುದುಚೇರಿಯಿಂದ ಚೆನ್ನೈಗೆ ಹೆಚ್ಚು ಪ್ರಯಾಣಿಕರೊಂದಿಗೆ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ನಿಯಂತ್ರಣ ತಪ್ಪಿದ ಕಾರು ರಸ್ತೆಯ ಡಿವೈಡರ್​ಗೆ ಡಿಕ್ಕಿ ಹೊಡೆದು ಅಪಘಾತದ ಸಂಭವಿಸಿದೆ. ರಾಕೇಶ್​ ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬ ಪ್ರಯಾಣಿಕ ಗಂಭೀರವಾರ ಗಾಯಗೊಂಡಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಇನ್ನು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ರಾಕೇಶ್​ ಮೃತದೇಹವನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

    ಮಾಜಿ ಹಿರಿಯ ವಕೀಲರಾದ ಎನ್‌ಆರ್ ಇಳಂಗೋವನ್ ಅವರು 2020 ರಲ್ಲಿ ತಮಿಳುನಾಡಿನಿಂದ ರಾಜ್ಯಸಭಾ ಸದಸ್ಯರಾದರು. ಇದು ಅವರ ಮೊದಲ ಅವಧಿಯಾಗಿದೆ. (ಏಜೆನ್ಸೀಸ್​)

    ಯಾರಿಗೆ ಪಂಚರಾಜ್ಯ?; ತಜ್ಞರ ವಿಶ್ಲೇಷಣೆ ಒಳಗೊಂಡ ಫಲಿತಾಂಶದ ಕ್ಷಣ ಕ್ಷಣ ಮಾಹಿತಿಯ ನೇರಪ್ರಸಾರ ಇಲ್ಲಿದೆ

    ಪಂಜಾಬ್​ ಆಪ್​ ಸಿಎಂ ಅಭ್ಯರ್ಥಿ ಮನೆಯಲ್ಲಿ ಜಿಲೇಬಿ ತಯಾರಿ: ಸಂಭ್ರಮಾಚರಣೆಗೆ ನಡೆಯುತ್ತಿದೆ ಭಾರೀ ಸಿದ್ಧತೆ

    ಪರಿವರ್ತನೆಗೆ ಈ ವಿಡಿಯೋ ನೋಡಿ ಎಂದು ಒಳ ಉಡುಪುಗಳನ್ನು ಪ್ರದರ್ಶಿಸಿದ ನಟಿ ಯಶಿಕಾ! ವಿಡಿಯೋ ವೈರಲ್​​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts