More

    ಮೊದಲ ರಾತ್ರಿ ಮುಗಿಸಿ ಬೆಳಗಿನ ಜಾವವೇ ಎಸ್ಕೇಪ್​ ಆದ ವರ: ನಂತ್ರ ವಧುವಿಗೆ ತಿಳಿದಿದ್ದು ಘೋರ ಸತ್ಯ!

    ಅಡೂರು: ಮದುವೆಯಾಗಿ ಮೊದಲ ರಾತ್ರಿಯ ಬಳಿಕ ವಧುವಿನ ಮನೆಯಲ್ಲಿದ್ದ ಚಿನ್ನಾಭರಣ ಮತ್ತು ಹಣವನ್ನು ಕದ್ದು ಪರಾರಿಯಾಗಿದ್ದ ವರನನ್ನು ಪೊಲೀಸರು ಬಂಧಿಸಿದ್ದಾರೆ.

    ಕೇರಳದ ಕಾಯಂಕುಲಂ ನಿವಾಸಿ ಅಜರುದ್ದೀನ್​ ರಶೀದ್​ (30) ಎಂಬಾತನನ್ನು ಕೇರಳದ ಅಡೂರು ಪೊಲೀಸರು ಬಂಧಿಸಿದ್ದು, 30 ಸವರನ್​ ಚಿನ್ನ ಮತ್ತು 2.75 ಲಕ್ಷ ರೂಪಾಯಿ ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಅಜರುದ್ದೀನ್​ ಪಹಕುಲಂ ಮೂಲದ ಮಹಿಳೆಯನ್ನು ಜನವರಿ 30ರಂದು ಎಸ್​.ಎಚ್​. ಆಡಿಟೋರಿಯಂನಲ್ಲಿ ಮದುವೆಯಾಗಿದ್ದ. ಸಂಪ್ರದಾಯದಂತೆ ವಧುವಿನ ಮನೆಯುಲ್ಲಿ ಮೊದಲ ರಾತ್ರಿ ನಡೆದಿತ್ತು. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಸ್ನೇಹಿತನಿಗೆ ಅಪಘಾತವಾಗಿದೆ ಎಂದು ಅಜರುದ್ದೀನ್​ ಮನೆ ಬಿಟ್ಟಿದ್ದಾನೆ.

    ಇದಾದ ಬಳಿಕ ಆತನಿಗೆ ಫೋನ್​ ಮಾಡಿದರೆ ಸ್ವಿಚ್​ ಆಫ್​ ಅಂತಾ ಕೇಳಿಬಂದಿದೆ. ಇದೇ ಸಂದರ್ಭದಲ್ಲಿ ವಧುವಿನ ಮನೆಯಲ್ಲಿ 30 ಸವರನ್​ ಚಿನ್ನ ಮತ್ತು 2.75 ಲಕ್ಷ ರೂ. ಹಣ ಕಾಣೆಯಾಗಿರುವುದು ತಿಳಿಯುತ್ತದೆ. ಇದರಿಂದ ಅನುಮಾನಗೊಂಡ ವಧುವಿನ ಮನೆಯವರು ತಕ್ಷಣ ದೂರು ಸಹ ದಾಖಲಿಸುತ್ತಾರೆ.

    ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿಯುವ ಅಡೂರು ಪೊಲೀಸರಿಗೆ ಆರೋಪಿ ಅಜರುದ್ದೀನ್​ ಕುರಿತು ಸ್ಫೋಟಕ ಸಂಗತಿಯೊಂದು ತಿಳಿಯುತ್ತದೆ. ಎರಡು ವರ್ಷಗಳ ಹಿಂದೆ ಅಲಪ್ಪುಳದ ಚೆಪ್ಪಾಡ್​​ ಎಂಬಲ್ಲಿ ಯುವತಿಯೊಬ್ಬಳನ್ನುಮದುವೆಯಾಗಿದ್ದ ಎಂಬ ಸಂಗತಿ ಬಯಲಾಗುತ್ತದೆ. ಆತ ಮೊದಲ ಪತ್ನಿಯೊಂದಿಗೆ ಇದ್ದಾನೆ ಎಂಬ ಮಾಹಿತಿ ತಿಳಿದ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ, ಆತನನ್ನು ಬಂಧಿಸಿದ್ದು, ಕೋರ್ಟ್​ ಮುಂದೆ ಹಾಜರುಪಡಿಸಿದ್ದಾರೆ. ಇತ್ತ ಘನ ಘೋರ ಸತ್ಯ ತಿಳಿದ ವಧು ಮದುವೆ ಆರಂಭದಲ್ಲೇ ಈ ರೀತಿ ಆಯ್ತಲ್ಲ ಅಂತಾ ಆಘಾತಕ್ಕೆ ಒಳಗಾಗಿದ್ದಾಳೆ. (ಏಜೆನ್ಸೀಸ್​)

    ಹಿರಿಯ ನಟಿ, ಬಿಜೆಪಿ ಮುಖಂಡೆ ಜಯಪ್ರದಾ ಮನೆಯಲ್ಲಿ ಸಂಭವಿಸಿದ ದುರಂತ

    ವಿರೋಧಿಗಳಿಗೆ ಒಂದೇ ಪದದಲ್ಲಿ ಉತ್ತರಿಸಿದ ಸಮಂತಾ? ನೆಟ್ಟಿಗರು ಶಾಕ್! ಫೋಟೋ, ವಿಡಿಯೋಗಳು ವೈರಲ್…

    ಯೂಟ್ಯೂಬ್‌ನಲ್ಲಿಯೂ ಪ್ರಧಾನಿ ಮಿಂಚು: ತಮ್ಮದೇ ದಾಖಲೆ ಮುರಿದು ಪುನಃ ‘ಜಾಗತಿಕ ನಾಯಕ’ರಾದರು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts