ನವದೆಹಲಿ: ಇಂದು (ಆಗಸ್ಟ್ 12) ಬೆಳಗ್ಗೆ 5.43ರಲ್ಲಿ ಆಂಧ್ರ ಪ್ರದೇಶದ ಶ್ರೀಹರಿಕೋಟ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾಗಿದ್ದ ಭೂ ನಿಗಾವಣೆಯ ಸ್ಯಾಟಲೈಟ್ ಇಒಎಸ್-03 ತಾಂತ್ರಿಕ ಅಡಚಣೆಯಿಂದಾಗಿ ವಿಫಲವಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತಿಳಿಸಿದೆ.
ಕ್ರಯೋಜೆನಿಕ್ ಹಂತದ ವೇಳೆ ಉಂಟಾದ ತಾಂತ್ರಿಕ ಅಡಚಣೆಯಿಂದಾಗಿ ಮಿಷನ್ ಅಪೂರ್ಣವಾಗಿದೆ ಎಂದು ಇಸ್ರೋ ತಿಳಿಸಿದೆ. ಇಒಎಸ್-03 ಭೂ ನಿಗಾವಣೆಯ ಉಪಗ್ರಹ. ಇದನ್ನು ಜಿಯೋಸಿಂಕ್ರೋನಸ್ ಟ್ರಾನ್ಸ್ಫರ್ ಆರ್ಬಿಟ್ನಲ್ಲಿ ಇರಿಸಲು 51.70 ಮೀಟರ್ ಎತ್ತರದ ಜಿಎಸ್ಎಲ್ವಿ-ಎಫ್10 ರಾಕೆಟ್ನಲ್ಲಿ ಯಶಸ್ವಿಯಾಗಿ ಉಡಾವಣೆ ಮಾಡಲಾಗಿತ್ತು. 26 ಗಂಟೆಗಳ ಕೌಂಟ್ಡೌನ್ ಮುಗಿದ ನಂತರ ಮುಂಜಾನೆ 5.43ಕ್ಕೆ ಯೋಜಿಸಿದಂತೆಯೇ ಸ್ಪೇಸ್ಪೋರ್ಟ್ನ ಎರಡನೇ ಉಡಾವಣಾ ಪ್ಯಾಡ್ನಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಗಿತ್ತು.
ಲಿಫ್ಟ್-ಆಫ್ಗೆ ಮುಂಚಿತವಾಗಿ, ಲಾಂಚ್ ಆಥರೈಸೇಶನ್ ಬೋರ್ಡ್ ಯೋಜಿಸಿದಂತೆ ಸಾಮಾನ್ಯ ಲಿಫ್ಟ್-ಆಫ್ಗಾಗಿ ಡೆಕ್ಗಳನ್ನು ತೆರವುಗೊಳಿಸಿತು. ಮೊದಲ ಮತ್ತು ಎರಡನೇ ಹಂತಗಳಲ್ಲಿ ರಾಕೆಟ್ನ ಕಾರ್ಯಕ್ಷಮತೆ ಸಾಮಾನ್ಯವಾಗಿತ್ತು. ಆದಾಗ್ಯೂ, ಕೆಲವು ನಿಮಿಷಗಳ ನಂತರ ರಾಕೆಟ್ನಲ್ಲಿ ತಾಂತ್ರಿಕ ಅಡಚಣೆ ಉಂಟಾಗಿದ್ದು ಕಂಡು ಬಂದಿತು ಎಂದು ಮಿಷನ್ ನಿಯಂತ್ರಣ ಕೇಂದ್ರದ ವಿಜ್ಞಾನಿಗಳು ತಿಳಿಸಿದ್ದಾರೆ.
ರಾಕೆಟ್ನ ಕ್ರೆಯೋಜೆನಿಕ್ ಹಂತ ವೇಳೆ ತಾಂತ್ರಿಕ ಅಡಚಣೆ ಕಂಡುಬಂದಿದ್ದರಿಂದ ಮಿಷನ್ ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ ಎಂದು ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ. (ಏಜೆನ್ಸೀಸ್)
ಹಿಮಾಚಲ ಪ್ರದೇಶದಲ್ಲಿ ಮತ್ತೊಂದು ದುರಂತ: ಭೂಕುಸಿತಕ್ಕೆ 11 ಮಂದಿ ಬಲಿ, 30 ಮಂದಿ ನಾಪತ್ತೆ
ಸಿಲಿಕಾನ್ ಸಿಟಿಯಲ್ಲಿ ವಂಚಕ ಕಂಪನಿ! ಟ್ರೇಡ್ ಆಕ್ಸಿಸ್ ಕಂಪನಿಯಿಂದ ವಂಚನೆ -ಶೇ. 8 ರವರೆಗೆ ಲಾಭಾಂಶ ಆಮಿಷ
ಮಧ್ಯರಾತ್ರಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆಗೆ ನುಗ್ಗಿ ಎರಡು ಕಾರುಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು..!