ನವದೆಹಲಿ: ರಾಜ್ಯದಲ್ಲಿ ಎಬ್ಬಿರುವ ಹಿಜಾಬ್ ವಿವಾದ ಸದ್ಯಕ್ಕೆ ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ಈಗಾಗಲೇ ಹೈಕೋರ್ಟ್ ಏಕ ಸದಸ್ಯ ಪೀಠದಿಂದ ವಿಸ್ತೃತ ಪೀಠಕ್ಕೆ ಹಿಜಾಬ್ ಪ್ರಕರಣ ವರ್ಗಾವಣೆ ಆಗಿದೆ. ಫೆ. 14ಕ್ಕೆ ವಿಚಾರಣೆ ನಡೆಯಲಿದೆ. ಅಲ್ಲಿಯವರೆಗೆ ತಕ್ಷಣ ಶಾಲಾ-ಕಾಲೇಜು ತೆರೆಯುವಂತೆ ಮತ್ತು ಆದೇಶ ಬರುವವರೆಗೂ ಯಾವುದೇ ಧಾರ್ಮಿಕ ಉಡುಪು ಧರಿಸದಂತೆ ಹೈಕೋರ್ಟ್ ವಿಸ್ತೃತ ಪೀಠ ಮಧ್ಯಂತರ ಆದೇಶ ಹೊರಡಿಸಿದೆ.
ಇದೀಗ ಹೈಕೋರ್ಟ್ ನೀಡಿರುವ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಅರ್ಜಿಯನ್ನು ತುರ್ತು ವಿಚಾರಣೆಗಾಗಿ ಸುಪ್ರೀಂ ಕೋರ್ಟ್ನಲ್ಲಿ ಉಲ್ಲೇಖಿಸಲಿದ್ದಾರೆ. ಗುರುವಾರ ಸಂಜೆಯಷ್ಟೇ ಶಾಲಾ-ಕಾಲೇಜುಗಳಲ್ಲಿ ಡ್ರೆಸ್ ಕೋಡ್ ಕುರಿತು ಕರ್ನಾಟಕ ಸರ್ಕಾರದ ನಿಯಮವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ತುರ್ತಾಗಿ ಪಟ್ಟಿ ಮಾಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಅದನ್ನು ಮೊದಲು ಹೈಕೋರ್ಟ್ ಆಲಿಸಲಿ ಎಂದು ಹೇಳಿದೆ.
ಇನ್ನೊಂದೆಡೆ ಪರಿಸ್ಥಿತಿಯನ್ನು ನೋಡಿಕೊಂಡು ಎರಡು ಹಂತದಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸಲು ಸರ್ಕಾರ ಮುಂದಾಗಿದೆ. ಮೊದಲ ಹಂತದಲ್ಲಿ ಪ್ರೌಢಶಾಲೆಯನ್ನು ಆರಂಭಿಸಲಾಗುವುದು. ಇದಾದ ಬಳಿಕ ಎರಡನೇ ಹಂತದಲ್ಲಿ ಕಾಲೇಜುಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಲಿದೆ. ಕಾಲೇಜು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿ ನಂತರ ಕಾಲೇಜು ಆರಂಭಿಸಲು ಸರ್ಕಾರ ಮುಂದಾಗಿದೆ. (ಏಜೆನ್ಸೀಸ್)
ಹೊರಗಡೆ ಹೋಗಿ ಮನೆಗೆ ಬಂದಾಗ ಕಾದಿತ್ತು ಶಾಕ್: ಮಗಳ ಸ್ಥಿತಿಯನ್ನು ಕಂಡು ಕುಸಿದುಬಿದ್ದ ಪಾಲಕರು
ಹೊರ ಆವರಣದಲ್ಲಿ ಅರೆಬೆತ್ತಲೆ ಸ್ನಾನ: ವಿಡಿಯೋ ಶೇರ್ ಮಾಡಿದ ನಟಿಗೆ ನೆಟ್ಟಿಗರಿಂದ ಹಿಗ್ಗಾಮುಗ್ಗಾ ತರಾಟೆ